ಆ್ಯಪ್ನಗರ

ಐರಾವತ ಯೋಜನೆ ಫಲಾನುಭವಿಗಳಿಗೆ ಕಾರುಗಳನ್ನು ವಿತರಿಸಿದ ಸಿಎಂ ಕುಮಾರಸ್ವಾಮಿ

ಈ ಯೋಜನೆಯಡಿ ಟ್ಯಾಕ್ಸಿ ಖರೀದಿಗೆ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಯುವಕರಿಗೆ ರೂ. 5 ಲಕ್ಷ ಹಾಗೂ ಯುವತಿಯರಿಗೆ ರೂ. 6 ಲಕ್ಷ ಸಹಾಯಧನ ನೀಡಲಾಗುತ್ತದೆ.

Vijaya Karnataka Web 30 May 2019, 12:29 pm
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಿದ್ದ ಐರಾವತ ಯೋಜನೆಯ ಫಲಾನುಭವಿಗಳಿಗೆ ವಾಹನಗಳನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ವಿತರಿಸಿದರು.
Vijaya Karnataka Web Airavatha


ಐರಾವತ ವಾಹನ ವಿತರಣೆ ಬಗ್ಗೆ ಮುಖ್ಯಮಂತ್ರಿ ಕಚೇರಿಯ ಅಧಿಕೃತ ಟ್ವೀಟರ್‌ ಖಾತೆಯಲ್ಲಿ ವಾಹನ ವಿತರಣೆ ಬಗ್ಗೆ ಮಾಹಿತಿ ನೀಡಿದ್ದಾರೆ. ಐರಾವತ ಫಲಾನುಭವಿಗಳಿಗೆ ವಾಹನ ವಿತರಣೆ ಸಂದರ್ಭ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕಾ ಖರ್ಗೆ, ಶಾಸಕ ಎಸ್. ಎನ್.ನಾರಾಯಣಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಐರಾವತ ಯೋಜನೆ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಯುವಜನರು ಆರ್ಥಿಕರಾಗಿ ಸಬಲರಾಗಬೇಕು ಎಂದು ರಾಜ್ಯ ಸರಕಾರ ಹಮ್ಮಿಕೊಂಡ ಮಹಾತ್ವಾಕಾಂಕ್ಷೆಯ ಯೋಜನೆ ಇದಾಗಿದೆ. ಈ ಯೋಜನೆಯಡಿ 5 ಲಕ್ಷ ಮೊತ್ತದ ಕಾರುಗಳನ್ನು ಫಲಾನುಭವಿಗಳಿಗೆ ನೀಡಲಾಗುತ್ತದೆ. ಟ್ಯಾಕ್ಸಿ ಖರೀದಿಗೆ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಯುವಕರಿಗೆ ರೂ. 5 ಲಕ್ಷ ಹಾಗೂ ಯುವತಿಯರಿಗೆ ರೂ. 6 ಲಕ್ಷ ಸಹಾಯಧನ ನೀಡಲಾಗುತ್ತದೆ. ಟ್ಯಾಕ್ಷಿಯ ಬೆಲೆಯ ಉಳಿದ ಮೊತ್ತವನ್ನು ಬ್ಯಾಂಕ್, ಹಣಕಾಸು ಸಂಸ್ಥೆ ಮೂಲಕ ಪಡೆಯಬೇಕು ಅಥವಾ ಫಲಾನುಭವಿ ಸ್ವಂತ ಹಣಕಾಸು ವ್ಯವಸ್ಥೆ ಮಾಡಿಕೊಂಡಲ್ಲಿ ಸಹಾಯಧನವನ್ನು ವಾಹನ ಖರೀದಿಗೆ ಬಿಡುಗಡೆಮಾಡಲು ಅವಕಾಶ ಇರುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ