ಆ್ಯಪ್ನಗರ

ಬೆಂಗಳೂರು ನಗರಾಭಿವೃದ್ಧಿಗೆ ಭರ್ಜರಿ ಬಜೆಟ್

ರಾಜಧಾನಿ ಬೆಂಗಳೂರು ನಗರವನ್ನು ವಿಶ್ವದರ್ಜೆ ನಗರವಾಗಿಸಲು ಆದ್ಯತೆ ನೀಡಲಾಗುತ್ತಿದ್ದು, ರಸ್ತೆಗಳ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ ಎಂದು ಸಿಎಂ ಬಜೆಟ್ ಭಾಷಣದಲ್ಲಿ ಹೇಳಿದರು.

Vijaya Karnataka Web 8 Feb 2019, 3:08 pm
ಬೆಂಗಳೂರು: ಸಮ್ಮಿಶ್ರ ಸರಕಾರ ರಚನೆಯಾದ ಬಳಿಕ ಎರಡನೇ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರು ನಗರಾಭಿವೃದ್ಧಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ.
Vijaya Karnataka Web HDK


ರಾಜಧಾನಿ ಬೆಂಗಳೂರು ನಗರವನ್ನು ವಿಶ್ವದರ್ಜೆ ನಗರವಾಗಿಸಲು ಆದ್ಯತೆ ನೀಡಲಾಗುತ್ತಿದ್ದು, ರಸ್ತೆಗಳ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ ಎಂದು ಸಿಎಂ ಬಜೆಟ್ ಭಾಷಣದಲ್ಲಿ ಹೇಳಿದರು.

ಬೆಂಗಳೂರು ಸಬ್-ಅರ್ಬನ್ ರೈಲು ವ್ಯವಸ್ಥೆ

23,093 ಕೋಟಿ ರೂಪಾಯಿ ಅಂದಾಜು ಮೊತ್ತದ ಬೆಂಗಳಬರು ಉಪ ನಗರ ರೈಲು ಸೇವೆ ಯೋಜನೆಗೆ ಚಾಲನೆ ನೀಡಲಾಗಿದೆ. ವಿಶೇಷ ಉದ್ದೇಶಿತ ವಾಹಕ, ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿ ನಿಗಮವನ್ನು (B-RIDE) ಸ್ಥಾಪಿಸಿ ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲು ಕ್ರಮ.

ಹೆಬ್ಬಾಳ, ಬೈಯಪ್ಪನಹಳ್ಳಿ, ಕೆ.ಆರ್.ಪುರಂ, ಕಾಡುಗೋಡಿ, ಚಲ್ಲಘಟ್ಟ ಮತ್ತು ಪೀಣ್ಯ ಪ್ರದೇಶಗಳಲ್ಲಿ ಬಹುಮಾದರಿ ಪ್ರಯಾಣ ಹಬ್ ಕಾರ್ಯಸಾಧ್ಯತೆ ಅಧ್ಯಯನ.

ಬೆಂಗಳೂರಿನ ಪ್ರಮುಖ ಸ್ಥಳಗಳಾದ ಯಶವಂತಪುರ, ಬನಶಂಕರಿ, ವಿಜಯನಗರ, ಪೀಣ್ಯ ಮತ್ತು ಇತರೆ ಪ್ರದೇಶಗಳಲ್ಲಿ ಮೆಟ್ರೊ ರೈಲು ಮತ್ತು ಟಿ.ಟಿ.ಎಂ.ಸಿ.ಗಳ ಅಂತರ್ ಕ್ರಮ ಸಂಯೋಜನೆ ವಿನ್ಯಾಸ ಹಾಗೂ ಮೂಲಸೌಕರ್ಯ ಅಭಿವೃದ್ಧಿ.

ಟೈರ್-2 ನಗರಗಳಲ್ಲಿ ಒಂದು ಪಾರ್ಕಿಂಗ್ ನಿಯಮ ಮತ್ತು ಅನುಷ್ಠಾನ ಯೋಜನೆ ಜಾರಿ ಹಾಗೂ ಸುಧಾರಿತ ಸಂಚಾರ ಮಾಹಿತಿ ಮತ್ತು ನಿರ್ವಹಣಾ ವ್ಯವಸ್ಥೆಯ ಅಧ್ಯಯನಕ್ಕೆ ಕ್ರಮ.

ಮೈಸೂರು, ಮಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಮೆಟ್ರೋ ರೈಲು ಯೋಜನೆ ಬಗ್ಗೆ ಪೂರ್ವ ಕಾರ್ಯ ಸಾಧ್ಯತಾ ವರದಿ ತಯಾರಿಕೆ ಪರಿಶೀಲನೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

8015 ಕೋಟಿ ರೂ. ಅಂದಾಜು ವೆಚ್ಚದ ನವ ಬೆಂಗಳೂರು ಕ್ರಿಯಾ ಯೋಜನೆ ಅನುಷ್ಠಾನಕ್ಕೆ 2019-20ರಲ್ಲಿ 2,300 ಕೋಟಿ ರೂ. ಅನುದಾನ. ಎಲಿವೇಟೆಡ್ ಕಾರಿಡಾರ್ ಯೋಜನೆಗೆ 2019-20ನೇ ಸಾಲಿನಲ್ಲಿ 1,000 ಕೋಟಿ ರೂ. ಅನುದಾನ.

ಬೆಂಗಳೂರಿನಲ್ಲಿ 5 ಲಕ್ಷ ಬೀದಿ ದೀಪಗಳನ್ನು ಎಲ್‍ಇಡಿ ದೀಪಗಳಾಗಿ ಪರಿವರ್ತನೆ. ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಹಾಗೂ ಬ್ರಿಗೇಡ್ ರಸ್ತೆಗಳನ್ನು ಪಾದಚಾರಿ ರಸ್ತೆಗಳನ್ನಾಗಿ ಪರಿವರ್ತಿಸಲು ಕ್ರಮ.

ಬೆಂಗಳೂರು ನಗರದಲ್ಲಿ 'ಪಾರ್ಕಿಂಗ್ ನಿಯಮ ಮತ್ತು ಅನುಷ್ಠಾನ ಯೋಜನೆಯ ನೀತಿ' ಜಾರಿ; 10000 ವಾಹನಗಳ ನಿಲುಗಡೆಗೆ 87 ಆಯ್ದು ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಗೆ ಕ್ರಮ.

195 ಕೋಟಿ ರೂ. ವೆಚ್ಚದಲ್ಲಿ ಹೆಬ್ಬಾಳ ಮತ್ತು ಕೆ.ಆರ್.ಪುರಂ ಫ್ಲೈ ಓವರ್ ಗಳಲ್ಲಿ ಹೆಚ್ಚುವರಿ ಲೂಪ್ ನಿರ್ಮಾಣ; ಗೊರಗುಂಟೆಪಾಳ್ಯದಲ್ಲಿ ಹೊಸ ಅಂಡರ್ ಪಾಸ್ ನಿರ್ಮಾಣ.

ಮಹಾನಗರ ಪಾಲಿಕೆಗಳ ಅಭಿವೃದ್ಧಿಗೆ 1,325 ಕೋಟಿ ರೂ

ರಾಜ್ಯದ ಮಹಾನಗರ ಪಾಲಿಕೆಗಳ ಅಭಿವೃದ್ಧಿಗೆ 1,325 ಕೋಟಿ ರೂ. ವೆಚ್ಚದಲ್ಲಿ 'ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ' ಜಾರಿಗೆ ಸಿದ್ಧತೆ. ಕಲಬುರಗಿ, ಮೈಸೂರು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳಿಗೆ ತಲಾ 150 ಕೋಟಿ ರೂಪಾಯಿ. ಬೆಳಗಾವಿ, ಬಳ್ಳಾರಿ, ತುಮಕೂರು, ಶಿವಮೊಗ್ಗ, ಮಂಗಳೂರು, ದಾವಣಗೆರೆ ಮತ್ತು ವಿಜಯಪುರ ಮಹಾನಗರ ಪಾಲಿಕೆಗಳಿಗೆ ತಲಾ 125 ಕೋಟಿ ರೂಯ ಅನುದಾನ ನಿಗದಿಪಡಿಸಲಾಗಿದೆ.

ಪೌರಾಡಾಳಿತ ವಿರ್ದೇಶನಾಯದಲ್ಲಿ ನೀರು ಸರಬರಾಜು ವ್ಯವಸ್ಥೆಯಲ್ಲಿ ಕಂದಾಯರಹಿತ ನೀರು ಸರಬರಾಜು ಮತ್ತು ತೆರಿಗೆ ಸೋರಿಕೆ ತಡೆಗಟ್ಟಲು, ನೀರಿನ ದರದಲ್ಲಿ ಏಕರೂಪತೆ ತರಲು ಪ್ರತ್ಯೇಕ ನೀರು ದರ ನಿಗದೀಕರಣ ಸಲಹಾ ಕೋಶ ಸ್ಥಾಪನೆ.

ಮಾನವ ತ್ಯಾಜ್ಯ ಕಲ್ಮಶದ ನಿರ್ವಹಣೆ ಮತ್ತು ವಿಲೇವಾರಿಗೆ ಪ್ರಯೋಗಿಕವಾಗಿ ಕಲ್ಮಶ ನಿರ್ವಹಣಾ ಘಟಕ ಸ್ಥಾಪನೆ.

ಬೆಂಗಳೂರು ಜಲ ಮಂಡಳಿ

ಬೆಂಗಳೂರಿನಲ್ಲಿರುವ ಜಲ ಸಂಪನ್ಮೂಲ ಬಳಸಿ, ಅರ್ಕಾವತಿ ಮತ್ತು ದಕ್ಷಿಣ ಪಿನಾಕಿನಿ ನದಿಗಳಲ್ಲಿ ಮತ್ತೆ ನೀರು ಹರಿಸುವ ಯೋಜನೆ; ಬಿಎಂಆರ್‍‌ಡಿಎ ಪ್ರದೇಶದಲ್ಲಿ ಮಳೆನೀರು ಕೊಯ್ಲು, ಎಲ್ಲ ಕೆರೆ ಹಾಗೂ ನೀರು ನಿಲ್ಲುವ ತಾಣಗಳ ಸಂರಕ್ಷಣೆ, ತ್ಯಾಜ್ಯ ನೀರು ಮರು ಬಳಕೆ, ಅರ್ಕಾವತಿ ಮತ್ತು ದಕ್ಷಿಣ ಪಿನಾಕಿನಿ ನದಿಗಳ ಪಕ್ಕ ಇರುವ ಸಾರ್ವಜನಿಕ ಸ್ಥಳಗಳನ್ನು ಶುಚಿಯಾಗಿಡಲು ಕ್ರಮ. ಇದರಿಂದ 1400 ಎಂಎಲ್‌ಡಿ ನೀರು ಹೆಚ್ಚುವರಿಯಾಗಿ ಲಭ್ಯ. ಈ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿ ಅಧ್ಯಕ್ಷತೆಯ ಸಮಿತಿ ರಚನೆ, ಯೋಜನೆಗೆ 50 ಕೋಟಿ ರೂಪಾಯಿ ಅನುದಾನ.

ಜೈಕಾ ನೆರವಿನೊಂದಿಗೆ 5550 ಕೋಟಿ ರೂಪಾಯಿಗಳ ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತ ಅನುಷ್ಠಾನಕ್ಕೆ 2019-20ರಲ್ಲಿ 500 ಕೋಟಿ ರೂ.ಅನುದಾನ.

ಬೆಂಗಳೂರು ನಗರದಲ್ಲಿ 914 ಸ್ಥಳಗಳಲ್ಲಿ ಮಳೆನೀರು ಚರಂಡಿಗೆ ತ್ಯಾಜ್ಯನೀರು ಸೇರುವುದನ್ನು ತಡೆಗಟ್ಟಲು 2 ವರ್ಷದಲ್ಲಿ 76.55 ಕೋಟಿ ರೂ. ಕಾಮಗಾರಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ