ಆ್ಯಪ್ನಗರ

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕ್ಷಮೆ ಕೇಳಿದ ಸಿಎಂ ಕುಮಾರಸ್ವಾಮಿ

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೊಡಗು ಜಿಲ್ಲೆ ಪರಿಶೀಲನೆಗೆ ಆಗಮಿಸಿದ ಸಂದರ್ಭದಲ್ಲಿ ನಡೆದ ಕೆಲ ಅನನುಕೂಲತೆಗಳ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.

Vijaya Karnataka 27 Aug 2018, 9:09 am
ಬೆಂಗಳೂರು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೊಡಗು ಜಿಲ್ಲೆ ಪರಿಶೀಲನೆಗೆ ಆಗಮಿಸಿದ ಸಂದರ್ಭದಲ್ಲಿ ನಡೆದ ಕೆಲ ಅನನುಕೂಲತೆಗಳ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.
Vijaya Karnataka Web hdk


ಈ ಸಂಬಂಧ ದೂರವಾಣಿಯಲ್ಲಿ ನಿರ್ಮಲಾ ಸೀತಾರಾಮನ್‌ ಜತೆ ಮಾತನಾಡಿದ ಬಳಿಕ ಪ್ರಕರಣದ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ''ನಾವೆಲ್ಲರೂ ಈಗ ಭಿನ್ನಾಭಿಪ್ರಾಯ ಮರೆತು ಅತಿವೃಷ್ಟಿಯಿಂದ ತೊಂದರೆಗೊಳಗಾಗಿರುವ ಕೊಡಗಿನ ಜನರ ಪುನರ್ವಸತಿ ಆದ್ಯತೆ ಬಗ್ಗೆ ಗಮನ ಹರಿಸಬೇಕಿದೆ. ನಾವು ಈ ಘಟನೆ ಬಗ್ಗೆ ಬಣ್ಣ ಬಳಿದು ನಮ್ಮ ಗುರಿ ಹಾದಿಯಿಂದ ವಿಚಲಿತರಾಗುವುದು ಬೇಡ. ಕೇಂದ್ರ ಸರಕಾರ ಅದರಲ್ಲೂ ವಿಶೇಷವಾಗಿ ರಕ್ಷಣಾ ಸಚಿವರ ಬೆಂಬಲ ಹೀಗೆ ಮುಂದುವರಿಯುತ್ತದೆ ಎಂಬುದು ನನ್ನ ನಂಬಿಕೆ,'' ಎಂದು ಹೇಳಿದ್ದಾರೆ.

''ರಾಜ್ಯ ಹಾಗೂ ಕೇಂದ್ರ ಸರಕಾರದ ನಾನಾ ಇಲಾಖೆಗಳು, ವಿಪತ್ತು ನಿರ್ವಹಣಾ ಸಂಸ್ಥೆಗಳು ಹಾಗೂ ಸ್ವಯಂ ಸೇವಕರ ನೆರವಿನೊಂದಿಗೆ ಪ್ರವಾಹ, ಭೂ ಕುಸಿತದಲ್ಲಿ ಸಿಲುಕಿದ ಕೊಡಗಿನ ನಾಗರಿಕರನ್ನು ಕಾಪಾಡಲು 24 ಗಂಟೆ ಪರಿಶ್ರಮ ವಹಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್‌ ಅನಾಹುತ ಸಂಭವಿಸಿದ ದಿನದಿಂದಲೇ ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿ ಉಸ್ತುವಾರಿ ಕೆಲಸ ನೋಡಿಕೊಳ್ಳುತ್ತಿದ್ದಾರೆ. ನಮ್ಮ ಮನವಿಗೆ ಸ್ಪಂದಿಸಿದ ರಕ್ಷಣಾ ಸಚಿವರು ಎಲ್ಲ ರೀತಿಯ ಬೆಂಬಲವನ್ನು ನೀಡಿದ್ದಾರೆ. ಜತೆಗೆ ಇಲ್ಲಿನ ಜನರ ಯಾತನೆಯನ್ನು ಅರಿಯಲು ಕೊಡಗಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಶಿಷ್ಟಾಚಾರ ಪಾಲನೆಗೆ ಅಗತ್ಯ ಕ್ರಮ ವಹಿಸಿದರೂ ಕೆಲವು ಅನನುಕೂಲ ಆಗಿರುವುದು ದುರದೃಷ್ಟಕರ,'' ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ