ಆ್ಯಪ್ನಗರ

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ, ಲೀಟರ್‌ ಹಾಲಿಗೆ 1 ರೂ. ಪ್ರೋತ್ಸಾಹ ಧನ

ಸಿಎಂ ಎಚ್‌ ಡಿ ಕುಮಾರಸ್ವಾಮಿ ಶುಕ್ರವಾರ ಮಂಡಿಸಿದ 'ರಾಜ್ಯ ಬಜೆಟ್‌ 2019'ರಲ್ಲಿ ಹಾಲು ಉತ್ಪಾದಕರಿಗೆ ಭರ್ಜರಿ ಅನುದಾನ ಘೋಷಿಸಿದ್ದಾರೆ. ಒಂದು ಲೀಟರ್‌ ಹಾಲಿಗೆ 1 ರೂ. ಪ್ರೋತ್ಸಾಹ ಧನ ಘೋಷಿಸಿದ್ದಾರೆ.

Vijaya Karnataka Web 8 Feb 2019, 1:39 pm
ಬೆಂಗಳೂರು: ರಾಜ್ಯದ ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿಗೆ ಸಿಎಂ ಎಚ್‌ ಡಿ ಕುಮಾರಸ್ವಾಮಿ 'ರಾಜ್ಯ ಬಜೆಟ್‌ 2019'ರಲ್ಲಿ ಒತ್ತು ನೀಡಿದ್ದು, ಲೀಟರ್‌ ಹಾಲಿಗೆ 1 ರೂ. ಪ್ರೋತ್ಸಾಹ ಧನ ಘೋಷಿಸಿದ್ದಾರೆ.
Vijaya Karnataka Web Milk


ಈಗಾಗಲೇ ರಾಜ್ಯದಲ್ಲಿ 5 ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಇನ್ನುಮುಂದೆ ಉತ್ಪಾದಕರಿಗೆ ಲೀಟರ್‌ ಹಾಲಿಗೆ 6 ರೂ. ಪ್ರೋತ್ಸಾಹ ಧನ ಸಿಗಲಿದೆ. ಇದಕ್ಕಾಗಿ 2,500 ರೂ. ಬಜೆಟ್‌ನಲ್ಲಿ ಮೀಸಲಿಟ್ಟಿರುವುದಾಗಿ ಮುಂಗಡ ಪತ್ರ ಮಂಡನೆ ವೇಳೆ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಕರ್ನಾಟಕ ಬಜೆಟ್ 2019: ಸಂಪೂರ್ಣ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

ಶುಕ್ರವಾರ ಪ್ರತಿಪಕ್ಷ ಬಿಜೆಪಿ ನಾಯಕರ ಗದ್ದಲಗಳ ನಡುವೆ ಆರಂಭಗೊಂಡ ಬಜೆಟ್‌ ಅಧಿವೇಶನದಲ್ಲಿ ಸಿಎಂ ಕುಮಾರಸ್ವಾಮಿ ಲೆಕ್ಕಪತ್ರಗಳನ್ನು ಓದಲು ಆರಂಭಿಸಿದರು. ಬಜೆಟ್‌ ಪ್ರತಿಗಳನ್ನು ನೀಡದೆ ಇರುವುದರ ಬಗ್ಗೆ ಚಕಾರ ಎತ್ತಿದ್ದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ನಂತರ ಸಭಾತ್ಯಾಗ ಮಾಡಿದರು. ಪ್ರತಿಪಕ್ಷಗಳ ನಾಯಕರಿಲ್ಲದೆ ಕುಮಾರಸ್ವಾಮಿ ಬಜೆಟ್‌ ಮಂಡನೆ ಮಾಡಿದರು.

Kumaraswamy Budget Highlights: ಬಜೆಟ್‌ ಮಂಡನೆ ವೇಳೆ ಹೈ ಡ್ರಾಮಾ, ಬಿಜೆಪಿ ಸಭಾತ್ಯಾಗ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ