ಆ್ಯಪ್ನಗರ

ಟಿಪ್ಪು ಜಯಂತಿ ಕಾರ್ಯಕ್ರಮದಿಂದ ಸಿಎಂ ದೂರ?

ಸಿಎಂ ಕುಮಾರಸ್ವಾಮಿ ಟಿಪ್ಪು ಜಯಂತಿಯಲ್ಲಿ ಭಾಗಿಯಾಗುತ್ತಿಲ್ಲ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಚರ್ಚೆಗಳು ನಡೆಯುತ್ತಿವೆ. ಟಿಪ್ಪು ಸಂಗ ಮಾಡಿ ವಿಜಯ್ ಮಲ್ಯ, ಸಿದ್ದರಾಮಯ್ಯ ಸೇರಿ ಹಲವರಿಗೆ ಬಂದ ಸ್ಥಿತಿ ಕಂಡು ಭಯ ಬಿದ್ದು ಟಿಪ್ಪು ಜಯಂತಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಕೈ ಕೊಟ್ಟಿರಬಹುದು ಎಂದು ಹಲವರು ವ್ಯಂಗ್ಯವಾಡಿದ್ದಾರೆ.

Vijaya Karnataka Web 9 Nov 2018, 8:49 pm
ಬೆಂಗಳೂರು: ಟಿಪ್ಪು ಜಯಂತಿ ಕುರಿತ ರಾಜ್ಯ ಸರಕಾರದ ಅಧಿಕೃತ ಕಾರ್ಯಕ್ರಮದಿಂದ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ದೂರ ಉಳಿಯುವ ಸಾಧ್ಯತೆ ಇದೆ. ನ.10ರಂದು ವಿಧಾನಸೌಧದಲ್ಲಿ ಆಯೋಜಿಸಿರುವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮುಖ್ಯಮಂತ್ರಿಯವರ ಹೆಸರು ಪ್ರಕಟಿಸಲಾಗಿಲ್ಲ.
Vijaya Karnataka Web kumaraswamy..


ಪ್ರತಿಪಕ್ಷದಲ್ಲಿದ್ದಾಗ ಕುಮಾರಸ್ವಾಮಿ ಅವರು, ಟಿಪ್ಪು ಜಯಂತಿ ಅನಗತ್ಯ ಎಂದಿದ್ದರು. ಕೆಲ ದಿನಗಳ ಹಿಂದೆ ಮಾಧ್ಯಮಗಳು ಟಿಪ್ಪು ಜಯಂತಿ ಬಗ್ಗೆ ಪ್ರಶ್ನಿಸಿದಾಗ ‘‘ನನಗೆ ಇದಕ್ಕಿಂತ ಮುಖ್ಯ ಕೆಲಸಗಳಿವೆ,’’ಎಂದು ಪ್ರತಿಕ್ರಿಯಿಸಿದ್ದರು.

ಆಮಂತ್ರಣ ಪತ್ರಿಕೆಯಲ್ಲಿ ಸಿಎಂ ಹೆಸರಿಲ್ಲ


ಸಿಎಂ ಕುಮಾರಸ್ವಾಮಿ ಟಿಪ್ಪು ಜಯಂತಿಯಲ್ಲಿ ಭಾಗಿಯಾಗುತ್ತಿಲ್ಲ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಚರ್ಚೆಗಳು ನಡೆಯುತ್ತಿವೆ. ಟಿಪ್ಪು ಸಂಗ ಮಾಡಿ ವಿಜಯ್ ಮಲ್ಯ, ಸಿದ್ದರಾಮಯ್ಯ ಸೇರಿ ಹಲವರಿಗೆ ಬಂದ ಸ್ಥಿತಿ ಕಂಡು ಭಯ ಬಿದ್ದು ಟಿಪ್ಪು ಜಯಂತಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಕೈ ಕೊಟ್ಟಿರಬಹುದು ಎಂದು ಹಲವರು ವ್ಯಂಗ್ಯವಾಡಿದ್ದಾರೆ.


ಮೂರು ದಿನ ವಿಶ್ರಾಂತಿ ಪಡೆಯಲಿರುವ ಮುಖ್ಯಮಂತ್ರಿಗಳು
ಇನ್ನೊಂದೆಡೆ, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ಇಂದಿನಿಂದ ನವೆಂಬರ್ 11 ರವರೆಗೆ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಈ ಮೂರು ದಿನಗಳ ಕಾಲ ಅವರು ತಮ್ಮ ಕುಟುಂಬದವರೊಂದಿಗೆ ಕಾಲ ಕಳೆಯಲಿದ್ದಾರೆ. ಈ ಅವಧಿಯಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದು ಬಂದಿದೆ.


ಈ ನಡುವೆ ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಸಚಿವರನ್ನು ನಿಯೋಜಿಸಿದ್ದಾರೆ.

ಸಹಕಾರ ಸಚಿವ ಬಂಡೆಪ್ಪ ಕಾಶಂಪುರ ಹಾಗೂ ವೆಂಕಟರಾವ್‌ ನಾಡಗೌಡ ಅಧಿಕೃತ ಪ್ರತಿನಿಧಿಗಳಾಗಿರುತ್ತಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ