ಆ್ಯಪ್ನಗರ

ರಾಹುಲ್ ಬಳಿ ಯಾರ ಬಗ್ಗೆಯೂ ಚಾಡಿ ಹೇಳುವ ಪ್ರಯತ್ನ ಮಾಡಿಲ್ಲ ಎಂದ HDK

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಳಿ ಯಾರ ಬಗ್ಗೆಯೂ ಚಾಡಿ ಹೇಳುವ ಪ್ರಯತ್ನ ಮಾಡಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Vijaya Karnataka Web 19 Jun 2018, 3:22 pm
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಳಿ ಯಾರ ಬಗ್ಗೆಯೂ ಚಾಡಿ ಹೇಳುವ ಪ್ರಯತ್ನ ಮಾಡಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
Vijaya Karnataka Web HDK


ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ದಿಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಲವು ನಾಯಕರು ನೀಡಿದ ಗೌರವ ಅಚ್ಚರಿ ಮೂಡಿಸಿದೆ. ನನ್ನಿಂದ ಅವರು ದೊಡ್ಡ ಮಟ್ಟದ ನಿರೀಕ್ಷೆ ಹೊಂದಿದ್ದಾರೆಂದು ಹೇಳಿದರು.

ರೈತರ ಸಾಲ ಮನ್ನಾ ವಿಚಾರದಲ್ಲಿ ಚುನಾವಣೆಗೂ ಮುನ್ನ ನೀಡಿದ ಭರವಸೆಗಳಿಗೆ ಬದ್ಧನಾಗಿದ್ದೇನೆ. ಕೇಂದ್ರ ಸರಕಾರ ತೆಗೆದುಕೊಳ್ಳುವ 2 ಲಕ್ಷ ಕೋಟಿ ಬೆಲೆಯ ಬಾಂಡ್‌ನಲ್ಲಿ ಶೇ.25ರಷ್ಟು ರಾಜ್ಯಕ್ಕೆ ನೀಡಿ ಎಂದು ಮನವಿ ಮಾಡಿದ್ದೇನೆ. ಸಾವಿರಾರು ಕೋಟಿ ರೂಪಾಯಿ ಸಾಲ ಮನ್ನಾಕ್ಕೆ ಹಣ ಹೊಂದಿಸಲು ಸಮಯಾವಕಾಶ ಬೇಕಾಗುತ್ತದೆ ಎಂದು ಸಮಜಾಯಿಸಿದರು.

ಜುಲೈ ಎರಡನೇ ವಾರದಲ್ಲಿ ಸಂಪುಟ ಸಭೆ ಅಧಿವೇಶನ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ. ರೈತರ ಸಾಲ ಮನ್ನಾ ವಿಚಾರ ಸಂಬಂಧ ರಾಷ್ಟ್ರೀಯ ಬ್ಯಾಂಕ್ ಅಧಿಕಾರಗಳ ಜತೆ ಸಭೆ ನಡೆಸಿದ್ದೇನೆ. ರೈತರಿಗೆ ಹೊರೆಯಾಗದಂತೆ ಸಾಲ ಮನ್ನಾ ಮಾಡುವೆ ಎಂದು ಭರವಸೆ ನೀಡಿದರು.

ಲೋಕಸಭಾ ಚುನಾವಣೆವರೆಗೂ ನಾನೇ ಸಿಎಂ ಆಗಿರುತ್ತೇನೆ ಎಂಬ ಹೇಳಿಕೆ ವಿಚಾರಕ್ಕೆ ಪ್ರತ್ರಿಕ್ರಿಯೆ ನೀಡಿರುವ ಅವರು, 'ನಮ್ಮ ಸರಕಾರ ಐದು ವರ್ಷ ಇದೇ ಇರುತ್ತೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುವುದು ಬೇಡ' ಎಂದು ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ