ಆ್ಯಪ್ನಗರ

Bypoll Results 2018: ಗೆಲುವಿನಿಂದ ಮೈ ಮರೆಯಬಾರದು, ಎಚ್ಚೆತ್ತುಕೊಳ್ಳಬೇಕು ಎಂದ ಕುಮಾರಸ್ವಾಮಿ

ಮುಂದಿನ ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲಬೇಕಾಗಿದೆ.

Vijaya Karnataka Web 6 Nov 2018, 5:59 pm
ಬೆಂಗಳೂರು: ರಾಜ್ಯದ ಜನತೆಗೆ ದೀಪಾವಳಿ ಶುಭಾಶಯ. ಈ ಬಾರಿಯ ಚುನಾವಣೆ ಮೈತ್ರಿ ಸರಕಾರಕ್ಕೆ ಭಾರಿ ಸಂಭ್ರಮ ಮೂಡಿಸಿದೆ. ಐದು ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ನಾವು ಗೆದ್ದಿರುವುದು ಜನತೆಗೆ ಸರಕಾರದ ಬಗ್ಗೆ ಇರುವ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
Vijaya Karnataka Web ಕುಮಾರಸ್ವಾಮಿ
ಕುಮಾರಸ್ವಾಮಿ


ಶಕ್ತಿಸೌಧ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಉಪ ಚುನಾವಣೆಯ ಗೆಲುವು ನಮ್ಮ ಮೈತ್ರಿ ಸರಕಾರಕ್ಕೆ ತೃಪ್ತಿ ತಂದಿದೆ. ಐದು ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆದ್ದಿರುವುದು ವೈಯಕ್ತಿವಾಗಿ ಸಂತಸ ತಂದಿದೆ ಎಂದರು.

ಶಿವಮೊಗ್ಗದಲ್ಲಿ ಕೊನೆ ಕ್ಷಣದವರೆಗೂ ಚುನಾವಣೆ ಅಭ್ಯರ್ಥಿ ಆಯ್ಕೆ ಮಾಡುವ ಗೊಂದಲ ಉಂಟಾಗಿದ್ದರಿಂದ ಹಿನ್ನೆಡೆಯಾಯಿತು. ಆದರೆ ಶಿವಮೊಗ್ಗದಲ್ಲಿ ನಮ್ಮ ಸೋಲು ಸೋಲಲ್ಲ. ನೈತಿಕವಾಗಿ ನಾವು ಗೆಲುವು ಸಾಧಿಸಿದ್ದೇವೆ ಎಂದು ವಿಶ್ಲೇಷಿಸಿದರು.

ಈ ಬಾರಿಯ ಚುನಾವಣೆ ಗೆಲುವಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌, ಡಿಕೆ ಶಿವಕುಮಾರ್‌, ಆರ್‌ವಿ ದೇಶಪಾಂಡೆ, ಕಾಂಗ್ರೆಸ್‌ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಜೆಡಿಎಸ್ ನಾಯಕರ ಸಂಘಟಿತ ಹೋರಾಟದ ಫಲವಾಗಿ ಐದು ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರದಲ್ಲಿ ಗೆಲುವು ದಕ್ಕಿದೆ.



ಕಳೆದ ಐದು ತಿಂಗಳಲ್ಲಿ ನಾವು ಅಭಿವೃದ್ಧಿ ಯೋಜನೆಗಳು ಕೈಗೊಂಡಿದ್ದರಿಂದ ಜನ ಬೆಂಬಲ ವ್ಯಕ್ತವಾಗಿದೆ. ಕೆಲವು ಕಡೆ ಯೋಜನೆಗಳು ಇನ್ನೂ ಅನುಷ್ಠಾನ ಆಗಿಲ್ಲ. ಆದರೂ ಜನರಿಗೆ ಈ ಸರಕಾರದ ಬಗ್ಗೆ ಭರವಸೆ ಮೂಡಿರುವುದು ಈ ಫಲಿತಾಂಶದಿಂದ ವ್ಯಕ್ತವಾಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.



ಮುಂದಿನ ಲೋಕಸಭಾ ಚುನಾವಣೆಗೆ ಇದೊಂದು ದಿಕ್ಸೂಚಿಯಾಗಲಿದೆ. ಉಪ ಚುನಾವಣೆಯ ಗೆಲುವಿನಿಂದ ನಾವು ಮೈರೆತು ಹೋಗಬಾರದು. ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡು ಮುಂದಿನ ಚುನಾವಣೆ ಎದುರಿಸಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ