ಮುಲಾಜಿಲ್ಲದೇ ಮುಖ್ಯಮಂತ್ರಿ ಕುಮಾರಸ್ವಾಮಿ ಜನತೆ ಕ್ಷಮೆ ಕೇಳಲಿ: ಬಿಎಸ್ವೈ
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೂಡಲೇ ಜನತೆಯ ಬಳಿ ಕ್ಷಮೆಯಾಚಿಸಬೇಕು ಎಂದು ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ.
Vijaya Karnataka Web 28 May 2018, 5:51 pm
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೂಡಲೇ ಜನತೆಯ ಬಳಿ ಕ್ಷಮೆಯಾಚಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಮುಲಾಜಿನಲ್ಲಿದ್ದೇನೆ ಎಂಬ ಅವರ ಹೇಳಿಕೆ ನಾಡಿನ ಜನತೆಗೆ ಮಾಡಿದ ಅಪಮಾನ. ಅವರು ರಾಜ್ಯದ ಜನರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆಯೇ ಹೊರತು, ಕಾಂಗ್ರೆಸ್ ಪಾರ್ಟಿಯ ಹೆಸರಲ್ಲಿ ಅಲ್ಲ. ರಾಜ್ಯದ ಜನರ ಸೇವೆ ಮಾಡಲು ಅವರು ಮುಖ್ಯಮಂತ್ರಿಯಾಗಿದ್ದಾರೆಯೋ ಅಥವಾ ಕಾಂಗ್ರೆಸ್ ಪಾರ್ಟಿಯ ಸೇವೆ ಮಾಡಲು ಸಿಎಂ ಆಗಿದ್ದಾರೋ ? ಅವರು ಕಾಂಗ್ರೆಸ್ಗಾಗಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಟೀಕಿಸಿದರು.
ಕುಮಾರಸ್ವಾಮಿ ಮೊದಲ ಆದ್ಯತೆ ರೈತರ ಸಾಲ ಮನ್ನಾಕ್ಕೆ ನೀಡಬೇಕಿತ್ತು. ಪ್ರಮಾಣ ವಚನ ಸ್ವೀಕರಿಸಿ ಇಷ್ಟು ದಿನ ಆದರೂ ಯಾವುದೇ ನಿರ್ಧಾರ ಪ್ರಕಟವಾಗಿಲ್ಲ. ಸಾಲ ಮನ್ನಾ ನಿರ್ಧಾರ ಪ್ರಕಟಿಸಲು ಇದೀಗ 1 ವಾರದ ಕಾಲಾವಕಾಶ ಕೇಳಿದ್ದಾರೆ. 1 ವಾರದ ಬಳಿಕ ಮತ್ತೆ ಎಷ್ಟು ದಿನಕ್ಕೆ ಮುಂದೂಡಲಾಗುತ್ತದೆ ತಿಳಿಯದು ಎಂದು ಆರೋಪಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಮುಲಾಜಿನಲ್ಲಿದ್ದೇನೆ ಎಂಬ ಅವರ ಹೇಳಿಕೆ ನಾಡಿನ ಜನತೆಗೆ ಮಾಡಿದ ಅಪಮಾನ. ಅವರು ರಾಜ್ಯದ ಜನರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆಯೇ ಹೊರತು, ಕಾಂಗ್ರೆಸ್ ಪಾರ್ಟಿಯ ಹೆಸರಲ್ಲಿ ಅಲ್ಲ. ರಾಜ್ಯದ ಜನರ ಸೇವೆ ಮಾಡಲು ಅವರು ಮುಖ್ಯಮಂತ್ರಿಯಾಗಿದ್ದಾರೆಯೋ ಅಥವಾ ಕಾಂಗ್ರೆಸ್ ಪಾರ್ಟಿಯ ಸೇವೆ ಮಾಡಲು ಸಿಎಂ ಆಗಿದ್ದಾರೋ ? ಅವರು ಕಾಂಗ್ರೆಸ್ಗಾಗಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಟೀಕಿಸಿದರು.
ಕುಮಾರಸ್ವಾಮಿ ಮೊದಲ ಆದ್ಯತೆ ರೈತರ ಸಾಲ ಮನ್ನಾಕ್ಕೆ ನೀಡಬೇಕಿತ್ತು. ಪ್ರಮಾಣ ವಚನ ಸ್ವೀಕರಿಸಿ ಇಷ್ಟು ದಿನ ಆದರೂ ಯಾವುದೇ ನಿರ್ಧಾರ ಪ್ರಕಟವಾಗಿಲ್ಲ. ಸಾಲ ಮನ್ನಾ ನಿರ್ಧಾರ ಪ್ರಕಟಿಸಲು ಇದೀಗ 1 ವಾರದ ಕಾಲಾವಕಾಶ ಕೇಳಿದ್ದಾರೆ. 1 ವಾರದ ಬಳಿಕ ಮತ್ತೆ ಎಷ್ಟು ದಿನಕ್ಕೆ ಮುಂದೂಡಲಾಗುತ್ತದೆ ತಿಳಿಯದು ಎಂದು ಆರೋಪಿಸಿದರು.