ಆ್ಯಪ್ನಗರ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ, ಕೆಪಿಸಿಸಿ ಪ್ರಮುಖರಿಗೆ ರಾಹುಲ್‌ ಬುಲಾವ್‌

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸಿದ್ದರಿಂದ ಕಾರ್ಯತಂತ್ರ

Vijaya Karnataka Web 5 Jan 2018, 10:08 pm

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸಿದ್ದರಿಂದ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಸೇರಿದಂತೆ ಪ್ರದೇಶ ಕಾಂಗ್ರೆಸ್‌ನ ಪ್ರಮುಖರು ಜನವರಿ 13 ರಂದು ಹೊಸದಿಲ್ಲಿಗೆ ಬರುವಂತೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಬುಲಾವ್‌ ನೀಡಿದ್ದಾರೆ.

Vijaya Karnataka Web cm parameshwar to visit delhi
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ, ಕೆಪಿಸಿಸಿ ಪ್ರಮುಖರಿಗೆ ರಾಹುಲ್‌ ಬುಲಾವ್‌


ಜನವರಿ 27 ರಿಂದ 29 ರ ವರೆಗೆ ಖುದ್ದು ರಾಹುಲ್‌ ಅವರೇ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಚುನಾವಣೆ ತಂತ್ರಗಾರಿಕೆ ಸಂಬಂಧ ಒಂದು ಸುತ್ತಿನ ಚರ್ಚೆ ನಡೆಸಲು ರಾಜ್ಯ ಕಾಂಗ್ರೆಸ್‌ ನಾಯಕರನ್ನು ಆಹ್ವಾನಿಸಿದ್ದಾರೆ.

ಎಸ್‌.ಆರ್‌. ಪಾಟೀಲ್‌, ದಿನೇಶ್‌, ಡಿ.ಕೆ. ಶಿವಕುಮಾರ್‌ ಅವರೂ ದಿಲ್ಲಿಗೆ ತೆರಳಲಿದ್ದಾರೆ. ಖರ್ಗೆ, ಆಸ್ಕರ್‌ ಫರ್ನಾಂಡೀಸ್‌, ಬಿ.ಕೆ. ಹರಿಪ್ರಸಾದ್‌ ಅವರಿಗೂ ಭಾಗಿಯಾಗುವಂತೆ ಸೂಚನೆ ಬಂದಿದೆ. ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಮಾಡಿಸಿರುವ ಸಮೀಕ್ಷೆ ಮತ್ತು ಪ್ರಸ್ತುತ ರಾಜಕೀಯ ವಿದ್ಯಮಾನ ಆಧರಿಸಿ ರಾಹುಲ್‌ ಚರ್ಚೆ ನಡೆಸಲಿದ್ದಾರೆ. ಜತೆಗೆ ಅವರ ರಾಜ್ಯ ಪ್ರವಾಸದ ವೇಳೆ ಬಿಜೆಪಿಗೆ ಪ್ರತಿರೋಧವೊಡ್ಡಲು ಯಾವ ಬಗೆಯ ರಣನೀತಿ ಅನುಸರಿಸಬೇಕು ಎಂಬ ಬಗ್ಗೆಯೂ ಸಮಾಲೋಚನೆಯಾಗಲಿದೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ