ಆ್ಯಪ್ನಗರ

ಮೈ ಚಳಿ ಬಿಟ್ಟು ಕೆಲಸ ಮಾಡಿ: ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ಸಿಎಂ

ಆಡಳಿತ ಯಂತ್ರಕ್ಕೆ ವೇಗ ನೀಡುವ ಉದ್ದೇಶದಿಂದ ಎಲ್ಲ್ಲಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜತೆಗೆ ಸಭೆ ನಡೆಸಿದ ಸಿಎಂ, ಮುಂದಿನ ಮೂರು ತಿಂಗಳು ಸರಕಾರದ ವರ್ಚಸ್ಸು ಅಳೆಯುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಮೈ ಚಳಿ ಬಿಟ್ಟು ಕೆಲಸ ಮಾಡುವಂತೆ ಸೂಚನೆ ನೀಡಿದರು.

Vijaya Karnataka 28 Nov 2018, 6:30 am
ಬೆಂಗಳೂರು: ರಾಜ್ಯದಲ್ಲಿ ಸರಕಾರ ಇನ್ನೂ ಟೇಕಾಫ್‌ ಆಗಿಲ್ಲ ಎಂದು ಸಾರ್ವಜನಿಕ ಅಭಿಪ್ರಾಯ ರೂಪುಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಮಂಗಳವಾರ ಚುರುಕು ಮುಟ್ಟಿಸಿದ್ದಾರೆ.
Vijaya Karnataka Web cm4


ಆಡಳಿತ ಯಂತ್ರಕ್ಕೆ ವೇಗ ನೀಡುವ ಉದ್ದೇಶದಿಂದ ಎಲ್ಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜತೆಗೆ ಸಭೆ ನಡೆಸಿದ ಅವರು, ಮುಂದಿನ ಮೂರು ತಿಂಗಳು ಸರಕಾರದ ವರ್ಚಸ್ಸು ಅಳೆಯುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಮೈ ಚಳಿ ಬಿಟ್ಟು ಕೆಲಸ ಮಾಡುವಂತೆ ಸೂಚನೆ ನೀಡಿದರು.

ಚುನಾವಣೆಗೆ ಮುನ್ನ ನೀಡಿದ ವಾಗ್ದಾನದಂತೆ ಸಾಲ ಮನ್ನಾ ಯೋಜನೆ ಜಾರಿಗೆ ತಂದರೂ ಇದಕ್ಕೆ ಸಂಬಂಧಪಟ್ಟಂತೆ ಏನೇನು ಕೆಲಸವಾಗಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ನೀವು ಸಮರ್ಪಕವಾಗಿ ಕೆಲಸ ಮಾಡದೇ ಇದ್ದರೆ ಪ್ರತಿಪಕ್ಷ ಬಿಜೆಪಿ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಇದೇ ಅಭಿಪ್ರಾಯವನ್ನು ಜನರ ಮನಸಿನಲ್ಲಿ ಬಿತ್ತುತ್ತವೆ. ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡಬಾರದು. ಅದೇ ರೀತಿ ರಾಜ್ಯದ 100 ತಾಲೂಕುಗಳಲ್ಲಿ ಬರ ಇದೆ. ನಮ್ಮ ಅಧಿಕಾರಿಗಳು ಬರ ಹಾಗೂ ಅತಿವೃಷ್ಟಿ ಸಂದರ್ಭದಲ್ಲಿ ಸಮರ್ಪಕವಾಗಿ ಕೆಲಸ ಮಾಡಿದ್ದಾರೆ. ಆದರೆ, ಇಷ್ಟು ಸಾಲುವುದಿಲ್ಲ. ಇನ್ನಷ್ಟು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಮುಂದಿನ ಮೂರು ತಿಂಗಳಲ್ಲಿ ನಾವು ಇನ್ನಷ್ಟು ಸಂಕಷ್ಟ ಎದುರಿಸಬೇಕಾಗಬಹುದು. ಜಲಾಶಯಗಳು ಭರ್ತಿಯಾಗಿದ್ದರೂ ಬರ ಭೀಕರವಾಗಬಹುದು. ಹೀಗಾಗಿ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹೆಚ್ಚು ಜವಾಬ್ದಾರಿ ತೆಗೆದುಕೊಳ್ಳಬೇಕು. ಖುದ್ದು ಪಂಚಾಯಿತಿ ಮಟ್ಟಕ್ಕೆ ಹೋಗಿ ಪರಿಶೀಲನೆ ನಡೆಸಿ ಸರಕಾರದ ಹಣ ಪೋಲಾಗದಂತೆ ಮುತುವರ್ಜಿ ವಹಿಸಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಮೈತ್ರಿ ಸರಕಾರದ ಪ್ರಮುಖ ಯೋಜನೆಗಳಾದ ಬಡವರ ಬಂಧು, ಸಾಲಮನ್ನಾದ ಜತೆಗೆ ಹಿಂದಿನ ಸರಕಾರದ ಯೋಜನೆಗಳ ಅನುಷ್ಠಾನ, ಕೆಂದ್ರ ಸರಕಾರದ ಅನುದಾನದ ಬಳಕೆ ಮುಂತಾದ ವಿಚಾರಗಳ ಬಗ್ಗೆ ಮಾಹಿತಿ ಪಡೆದಿದ್ದು, ಲೋಕಸಭಾ ಚುನಾವಣೆಗೆ ಮುನ್ನ ಆಡಳಿತ ಯಂತ್ರಕ್ಕೆ ಚುರುಕುಮುಟ್ಟಿಸಲು ಪ್ರಯತ್ನ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ