ಆ್ಯಪ್ನಗರ

ಬಚ್ಚೇಗೌಡ ವಿರುದ್ಧದ ಮುನಿಸಿಗೆ ಮುಲಾಮು ಹಚ್ಚಲು ಎಂಟಿಬಿ ನಿವಾಸಕ್ಕೆ ಹಾಜರಾದ ಸಿಎಂ

ಎಂಟಿಬಿ ನಾಗರಾಜ್‌ ಅವರು ಬಚ್ಚೇಗೌಡ ಮತ್ತು ಮಗ ಶರತ್‌ ಬಚ್ಚೇಗೌಡ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಎಂಟಿಬಿ ನಾಗರಾಜ್ ಅವರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದರು.

Vijaya Karnataka Web 10 Dec 2019, 5:46 pm
ಬೆಂಗಳೂರು: ಎಂಟಿಬಿ ನಾಗರಾಜ್‌ ಅವರು ಬಚ್ಚೇಗೌಡ ಮತ್ತು ಮಗ ಶರತ್‌ ಬಚ್ಚೇಗೌಡ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಎಂಟಿಬಿ ನಾಗರಾಜ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ತಮ್ಮ ನಿವಾಸಕ್ಕೆ ಆಗಮಿಸಿದ ಯಡಿಯೂರಪ್ಪ ಅವರಿಗೆ ಎಂಟಿಬಿ ನಾಗರಾಜ್‌ ಹೂಗುಚ್ಚ ನೀಡಿ ಸ್ವಾಗತಿಸಿದರು.
Vijaya Karnataka Web MTB


ನಾನು ಬಿಜೆಪಿಗೆ ಬರುವಾಗ ಅಪ್ಪ - ಮಗ ಇಬ್ಬರು (ಬಚ್ಚೇಗೌಡ ಮತ್ತು ಶರತ್‌ ಬಚ್ಚೇಗೌಡ) ಒಪ್ಪಿಗೆ ಕೊಟ್ಟಿದ್ರು. ಆದರೆ, ನಂತರ ಇಬ್ಬರೂ ಉಲ್ಟಾ ಹೊಡೆದಿದ್ದಾರೆ ಎನ್ನುವ ಮೂಲಕ ಸಿಎಂ ವಿರುದ್ಧವೂ ಅಸಮಾಧಾನ ಹೊರಹಾಕಿದ್ದರು.

ನಾನು ಉಪಚುನಾವಣೆಯಲ್ಲಿ ಸೋಲಲು ಬಿಜೆಪಿ ಸಂಸದರಾದ ಬಿಎನ್ ಬಚ್ಚೇಗೌಡರೇ ನೇರ ಕಾರಣ. ಬಚ್ಚೇಗೌಡರು ಶಾಸಕರಾಗಿ, ಸಚಿವರಾಗಿ, ಈಗ ಸಂಸದರಾಗಿ ಬಿಜೆಪಿ ಪಕ್ಷದಿಂದ ಎಲ್ಲವನ್ನೂ ಪಡೆದವರಾಗಿದ್ದರು. ಇವರ ಒಪ್ಪಿಗೆ ನಂತರವೇ ನಾನು ಬಿಜೆಪಿಗೆ ಬಂದಿದ್ದು. ಆದರೂ, ನನ್ನ ಪರವಾಗಿ ಕೆಲಸ ಮಾಡದೆ ಮಗನನ್ನ ಬೆಂಬಲಿಸಿ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ವಿಪಕ್ಷ ನಾಯಕ ಸ್ಥಾನದಲ್ಲಿ ಸಿದ್ದು ಮುಂದುವರಿಕೆ ? ಎಂ. ಬಿ. ಪಾಟೀಲ್‌ ವಿಶ್ವಾಸ

ಈ ಕುರಿತು ಸಿಎಂ ಯಡಿಯೂರಪ್ಪ ಅವರಿಗೆ ದೀರ್ಘ ಪತ್ರ ಬರೆದಿದ್ದ ಎಂಟಿಬಿ ನಾಗರಾಜ್‌, ಶರತ್ ಬಚ್ಚೇಗೌಡ ಅವರನ್ನು ಯಾವುದೇ ಕಾರಣಕ್ಕೂ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಒತ್ತಾಯಿಸಿದ್ದರು. ಇದಕ್ಕೆ ಸಿಎಂ ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿತ್ತು. ಜತೆಗೆ ಶೀಘ್ರದಲ್ಲಿಯೇ ಹೈಕಮಾಂಡ್ ಜೊತೆ ಚರ್ಚಿಸಿ ವಿಧಾನ ಪರಿಷತ್ಗೆ ನಾಮ ನಿರ್ದೇಶನ ಮಾಡುವ ಮೂಲಕ ನಿಮಗೆ ಸಚಿವ ಸ್ಥಾನ ನೀಡುವುದಾಗಿ ಎಂಟಿಬಿಗೆ ಮಾತು ನೀಡಿದ್ದಾರೆ ಎಂಬ ಸುದ್ದಿಯೂ ಹರಿದಾಡಿತ್ತು. ಇದೀಗ ಸಿಎಂ ಯಡಿಯೂರಪ್ಪ ಅವರೇ ಖುದ್ದು ಎಂಟಿಬಿ ನಿವಾಸಕ್ಕೆ ಹಾಜರಾಗಿರುವುದು ಈ ಎಲ್ಲ ಅಂತೆ ಕಂತೆಗಳಿಗೂ ಜೀವ ಬಂದಂತಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ