ಆ್ಯಪ್ನಗರ

10 ಕೋಟಿ ರೂ.ಗೂ ಹೆಚ್ಚು ನೆರವು ನೀಡಿದರೆ ಪ್ರವಾಹ ಪೀಡಿತ ಗ್ರಾಮಗಳ ಹೆಸರು ಬದಲು ಪ್ರಸ್ತಾವನೆ: ಸಿಎಂ ಸ್ಪಷ್ಟನೆ ನೀಡಿದ್ದೇನು ಗೊತ್ತಾ?

ಪ್ರವಾಹ ಪೀಡಿತ ಗ್ರಾಮಗಳ ಅಭಿವೃದ್ದಿಗಾಗಿ 10 ಕೋಟಿ ರೂ. ಗಳಿಗೂ ಹೆಚ್ಚು ನೆರವು ನೀಡುವವರ ಹೆಸರನ್ನು ಗ್ರಾಮಕ್ಕೆ ಇಡುವ ಪ್ರಸ್ತಾವನೆ ಬಗ್ಗೆ ಸಿಎಮ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ದಾನಿಗಳು ಮುಂದೆ ಬರಲಿ ಎಂಬ ಕಾರಣಕ್ಕಾಗಿ ಅವರನ್ನು ಉತ್ತೇಜಿಸಲು ಈ ಪ್ರಸ್ತಾವನೆ ಮುಂದಿಡಲಾಗಿದೆಯೇ ಹೊರತು ಯಾವುದೇ ತೀರ್ಮಾನ ಆಗಿಲ್ಲ ಎಂದು ಸರಕಾರದ ಮೂಲಗಳು ತಿಳಿಸಿವೆ.

Vijaya Karnataka Web 16 Aug 2019, 10:49 am
ಬೆಂಗಳೂರು: ರಾಜ್ಯದ ಹಲವೆಡೆ ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆ ಪ್ರವಾಹ ಪೀಡಿತ ಗ್ರಾಮಗಳ ಅಭಿವೃದ್ದಿಗಾಗಿ 10 ಕೋಟಿ ರೂ. ಗಳಿಗೂ ಹೆಚ್ಚು ನೆರವು ನೀಡುವವರ ಹೆಸರನ್ನು ಗ್ರಾಮಕ್ಕೆ ಇಡಲಾಗುವುದು ಎಂದು ಸರಕಾರ ಪ್ರಸ್ತಾವನೆ ಇಟ್ಟಿತ್ತು. ಇದಕ್ಕೆ ಹಲವರಿಂದ ಸಾಕಷ್ಟು ವಿರೋಧ ಕೇಳಿಬಂದಿತ್ತು. ಈ ಹಿನ್ನೆಲೆ ಸಿಎಂ ಸ್ಪಷ್ಟನೆ ನೀಡಿದ್ದಾರೆ.
Vijaya Karnataka Web yeddyurappa 1


ಪ್ರವಾಹ ಪೀಡಿತ ಗ್ರಾಮಗಳ ಅಭಿವೃದ್ದಿಗಾಗಿ 10 ಕೋಟಿ ರೂ. ಗಳಿಗೂ ಹೆಚ್ಚು ನೆರವು ನೀಡುವ ಸಂಸ್ಥೆಗಳ ಹೆಸರನ್ನು ಅಲ್ಲಿ ನಿರ್ಮಿಸಲಾಗುವ ನೂತನ ಬಡಾವಣೆಗಳಿಗೆ ಇಡಲಾಗುವುದು. ಗ್ರಾಮದ ಹೆಸರನ್ನು ಬದಲಾಯಿಸುವ ಪ್ರಸ್ತಾಪವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಕನ್ನಡ ಹಾಗೂ ಇಂಗ್ಲೀಷ್‌ನಲ್ಲಿ ಟ್ವೀಟ್‌ ಮಾಡಲಾಗಿದೆ. ಗ್ರಾಮಗಳ ಹೆಸರು ಬದಲಾವಣೆ ಮಾಡಲ್ಲ. ಅಲ್ಲಿ ನಿರ್ಮಿಸಲಾಗುವ ನೂತನ ಬಡಾವಣೆಗಳಿಗೆ ಇಡಲಾಗುವುದು ಎಂದು ಸ್ಪಷ್ಟನೆ ನೀಡಲಾಗಿದೆ.


ರಾಜ್ಯದಲ್ಲಿ ಪ್ರವಾಹಕ್ಕೆ ತುತ್ತಾಗಿರುವ ಗ್ರಾಮಗಳ ಪುನರ್‌ ನಿರ್ಮಾಣಕ್ಕೆ ಉದ್ದಿಮೆದಾರರು/ಕಂಪನಿಗಳು 10 ಕೋಟಿ ನೆರವು ನೀಡಿದರೆ ಅಂಥವರ ಹೆಸರನ್ನು ಗ್ರಾಮಕ್ಕೆ ನಾಮಕರಣ ಮಾಡಲಾಗುವುದು ಎಂಬ ಬಿಜೆಪಿ ಸರಕಾರದ ಪ್ರಸ್ತಾವನೆಗೆ ಅಪಸ್ವರ ಕೇಳಿ ಬರುತ್ತಿತ್ತು. ರಾಜ್ಯದ ಪ್ರತಿ ಗ್ರಾಮದ ಹೆಸರಿಗೂ ಅದರದ್ದೇ ಆದ ಹಿನ್ನೆಲೆ ಇದೆ. ನೆರೆ ಪರಿಸ್ಥಿತಿಯಿಂದ ತಮ್ಮದೆಲ್ಲವನ್ನೂ ಕಳೆದುಕೊಂಡಿರುವ ಜನರು ತಮ್ಮ ಗ್ರಾಮದ ಹೆಸರನ್ನೂ ಕಳೆದುಕೊಳ್ಳುವಂತೆ ಮಾಡಬೇಡಿ. ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ ಎಂದು ಜೆಡಿಎಸ್‌ ಆಕ್ರೋಶಭರಿತ ಟ್ವೀಟ್‌ ಮಾಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ