ಆ್ಯಪ್ನಗರ

ಮಾಣಿಕ್ ಷಾ ಮೈದಾನದಲ್ಲಿ ಸಿಎಂ ಧ್ವಜಾರೋಹಣ: ಸರಕಾರಿ ಶಾಲೆಗಳ ಸುಧಾರಣೆಗೆ ಕ್ರಮ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದರು.

Vijaya Karnataka Web 15 Aug 2019, 12:17 pm
ಬೆಂಗಳೂರು: ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಗರ ಜಿಲ್ಲಾಡಳಿತ ಹಾಗೂ ಬಿಬಿಎಂಪಿ ಜಂಟಿಯಾಗಿ ಆಯೋಜಿಸಿರುವ 73ನೇ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದರು.
Vijaya Karnataka Web bsy2


ಇದರ ಬೆನ್ನಲ್ಲೆ ಸೇನಾ ಹೆಲಿಕಾಪ್ಟರ್‌ನಿಂದ ಗುಲಾಬಿ ಪಕಳೆಗಳನ್ನು ತ್ರಿವರ್ಣ ಧ್ವಜದ ಮೇಲೆ ಸುರಿಸಲಾಯಿತು. ಸಿಎಂ ತೆರದ ಜೀಪ್ ನಲ್ಲಿ ಮೈದಾನದಲ್ಲಿ ಒಂದು ಸುತ್ತು ಹಾಕಿ ಪೋಲೀಸ್ ಪಡೆಗಳಿಂದ ವಂದನೆ ಸ್ವೀಕರಿಸಿದರು.

ರಾಷ್ಟ್ರಗೀತೆ, ನಾಡಗೀತೆ ಹಾಗೂ ರೈತಗೀತೆಯನ್ನು ಹಾಡಲಾಯಿತು. ನಗರದ ನಾನಾ ಶಾಲೆಗಳಿಗೆ ಸೇರಿದ 2 ಸಾವಿರ ಮಕ್ಕಳಿಂದ ದೇಶಭಕ್ತಿ ಉದ್ದೀಪಿಸುವ ಕಾರ್ಯಕ್ರಮ ನಡೆಯಿತು.


ದೇಶದ ಸ್ವಾತಂತ್ರ್ಯ ಹೋರಾಟದ ವೇಳೆ ಘಟಿಸಿದ್ದ ಜಲಿಯನ್ ವಾಲಾಭಾಗ ಹತ್ಯಾಕಾಂಡದ ಪ್ರಕರಣದ ಕುರಿತು ಚಿಣ್ಣರು ಮನೋಜ್ಞ ಪ್ರದರ್ಶನ ನೀಡಿ ಸಭಿಕರ ಭಾರಿ ಚಪ್ಪಾಳೆ ಗಿಟ್ಟಿಸಿದರು.


ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯವನ್ನುದೇಶಿಸಿ ಭಾಷಣ ಮಾಡಿದ ಸಿಎಂ, ರೈತರ ಅಭಿವೃದ್ಧಿಗೆ ರಾಜ್ಯ ಸರಕಾರ ಬದ್ಧ ಎಂದು ಹೇಳಿದರು. ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ 370 ರದ್ದು ಸ್ವಾಗತಿಸಿದ ಸಿಎಂ, ಕಾಶ್ಮೀರ ವಿಷಯದಲ್ಲಿ ಕೇಂದ್ರ ಸರಕಾರ ದಿಟ್ಟ ನಿರ್ಧಾರ ಕೈಗೊಂಡಿದೆ ಎಂದು ಶ್ಲಾಘೀಸಿದರು.


ಇತ್ತೀಚಿನ ಅತಿವೃಷ್ಟಿಯಿಂದ ರಾಜ್ಯ ಹರಚ್ಚು ಹಾನಿ ಸಂಭವಿಸಿದೆ. ಇದನ್ನು ಎದುರಿಸಲು ಸರಕಾರ ಎಲ್ಲ ಪ್ರಯತ್ನ ನಡೆಸಿದೆ. ಸಂತ್ರಸ್ತರಿಗೆ ಅಗತ್ಯ ಪರಿಹಾತ ಒದಗಿಸಲಾಗಿದೆ. ಪರಿಹಾರ ಕಾರ್ಯ ಭರದಿಂದ ಸಾಗಿದೆ. ಎಲ್ಲರೂ ಸೇರಿ ಸಂತ್ರಸ್ತರ ನೆರವಿಗೆ ಬರಬೇಕಿದೆ. ಕೃಂದ್ರದಿಂದ ಹೆಚ್ಚಿನ ಪರಿಹಾರ ಪೇಯಲು ಯತ್ನಿಸಲಾಗುತ್ತಿದೆ. ಇದಕ್ಕೆ ಕೇಂದ್ರ ಸ್ಪಂದಿಸುವ ಆಶಯ ಇದೆ ಎಂದರು.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳ ತಂಡ ತಮಗೆ ವಹಿಸಿರುವ ಜಿಲ್ಲೆಗಳಲ್ಲಿ ರಕ್ಷಣೆ ಹಾಗೂ ಪರಿಹಾರ ಕ್ರಮಗಳ ಉಸ್ತುವಾರಿ ವಹಿಸಿದ್ದಾರೆ. ಕರ್ನಾಟಕವು ಮುಂಚೂಣಿ ರಾಜ್ಯವಾಗಿದ್ದು, ಭಾರತದ ಅಭಿವೃದ್ಧಿ ಯಲ್ಲಿ ಶಿಖರ ಪ್ರಾಯವಾಗಿದೆ. ಜನ ಹಿತಕ್ಕಾಗಿ ನಮ್ಮ ಸರಕಾರ ಬದ್ಧ ಎಂದು ಹೇಳಿದರು.

ಹಾಲಿ ಕೈಗಾರಿಕಾ ನೀತಿ ಮುಂದಿನ ಸೆಪ್ಟೆಂಬರ್ ಗೆ ಕೊನೆಗೊಳ್ಳಲಿದ್ದು, 2-3ನೇ ಹಂತದ ನಗರಗಳಲ್ಲಿ ಉದ್ದಿಮೆ ಬೆಳವಣಿಗೆ ಹಿನ್ನೆಲೆಯಲ್ಲಿ ಹೊಸ ಕೈಗಾರಿಕಾ ನೀತಿಯನ್ನು ರೂಪಿಸಲಾಗುವುದು ಎಂದು ತಿಳಿಸಿದರು.

ಎಸ್ಸಿ-ಎಸ್ಟಿ, ಅಹಿಂದ ಸಮುದಾಯ ಗಳ ಸಮಗ್ರ ಅಭಿವೃದ್ಧಿಗೆ ಸರಕಾರ ಪ್ರಾಮುಖ್ಯತೆ ನೀಡಲಿದೆ ಸರಕಾರಿ ಶಾಲೆಗಳ ಸುಧಾರಣೆ ಹಾಗೂ ಗುಣಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

'ಕಾಯಕವೇ ಕೈಲಾಸ ಎಂಬ ನುಡಿಯಂತೆ ನಡೆದು ನನಗೆ ದೊರೆತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಸಮೃದ್ಧ ಕರ್ನಾಟಕ ನಿರ್ಮಿಸುವ ಕನಸು ನನ್ನದು. ಪ್ರತಿಯೊಬ್ಬ ಕನ್ನಡಿಗ ನೆಮ್ಮದಿ, ಸ್ವಾಭಿಮಾನದಿಂದ ಬದುಕುವಂತಾಗಬೇಕು' ಎನ್ನುವುದು ನನ್ನ ಆಶಯ ಎಂದು ಹೇಳಿದರು.

'ಸಾಧನೆಯೇ ಮಾತಾಗಬೇಕೇ ಹೊರತು, ಮಾತುಗಳೇ ಸಾಧನೆಯಾಗಬಾರದು. ಕರ್ನಾಟಕದ ಅಭಿವೃದ್ಧಿಯ ಮೂಲಕ ದೇಶದ ಬೆಳವಣಿಗೆಗೆ ನಮ್ಮ ಕಿರು ಕಾಣಿಕೆ ನೀಡೋಣ' ಎಂದರು.

ಕಾರ್ಯಕ್ರಮದಲ್ಲಿ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಮುಖ್ಯ ಕಾರ್ಯದರ್ಶಿ ಟಿ.ಎಂ
ವಿಜಯಭಾಸ್ಕರ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ನಗರ ಜಿಲ್ಲಾಧಿಕಾರಿ ಹಾಗೂ ಸರಕಾರದ ಹಿರಿಯ ಅಧಿಕಾರಿಗಳು, ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ