ಆ್ಯಪ್ನಗರ

3 ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುವುದು ನಮ್ಮ ಗುರಿ: ಸಿಎಂ ಎಚ್‌ಡಿಕೆ

ಶಿವಮೊಗ್ಗದಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ಹಾಕಬೇಕು ಎಂದು ಕಾಂಗ್ರೆಸ್‌ ಮುಖಂಡರು ಸಲಹೆ ನೀಡಿದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಅವರಿಗೆ ನಾಮಪತ್ರ ಸಲ್ಲಿಸಲು ಸೂಚನೆ ನೀಡಿದ್ದೇವೆ. ಅ.15ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಿಎಂ ತಿಳಿಸಿದರು.

Vijaya Karnataka Web 14 Oct 2018, 10:29 pm
ಮಂಗಳೂರು: ರಾಜ್ಯದ ಶಿವಮೊಗ್ಗ, ಮಂಡ್ಯ ಹಾಗೂ ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ನಡೆಯುವ ಮರು ಚುನಾವಣೆಯನ್ನು ಗೆಲ್ಲುವುದು ನಮ್ಮ ಮೈತ್ರಿ ಕೂಟದ ಗುರಿ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
Vijaya Karnataka Web cm hdk mng 2.


ನಗರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಶಿವಮೊಗ್ಗದಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ಹಾಕಬೇಕು ಎಂದು ಕಾಂಗ್ರೆಸ್‌ ಮುಖಂಡರು ಸಲಹೆ ನೀಡಿದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಅವರಿಗೆ ನಾಮಪತ್ರ ಸಲ್ಲಿಸಲು ಸೂಚನೆ ನೀಡಿದ್ದೇವೆ. ಅ.15ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದರು.

ಸುಬ್ರಹ್ಮಣ್ಯ ಸ್ವಾಮೀಜಿ ಅವರ ನಿರಶನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಮೈತ್ರಿ ಸರಕಾರ ಇರುವಾಗ ಯಾರೂ ಪ್ರತಿಭಟನೆ, ನಿರಶನ ಕೈಗೊಳ್ಳಲಾರದು. ಏನೇ ಸಮಸ್ಯೆ ಇದ್ದರೂ ಅದನ್ನು ಕೂತು ಬಗೆಹರಿಸೋಣ. ಸುಬ್ರಹ್ಮಣ್ಯ ಸ್ವಾಮೀಜಿಗೆ ನಾನೇ ಮನವಿ ಮಾಡುತ್ತೇನೆ ಎಂದು ಹೇಳಿದರು.

ಉಸ್ತುವಾರಿ ಸಚಿವರನ್ನು ದೇವಸ್ಥಾನಕ್ಕೆ ಯಾರೂ ಕರೆದು ಪ್ರಸಾದ ನೀಡಬೇಡಿ ಎಂಬುದರಲ್ಲಿ ಅರ್ಥವಿಲ್ಲ. ಕೀಳು ಅಭಿರುಚಿಯ ಕೆಲವರು ಇಂತಹಾ ಹೇಳಿಕೆ ನೀಡುತ್ತಾರೆ. ಅದಕ್ಕೆ ಮಹತ್ವ ನೀಡುವುದು ಬೇಡ ಎಂದು ಅವರು ಹೇಳಿದರು.

ಎಂಎಲ್‌ಸಿ ಬಿ.ಎಂ.ಫಾರೂಕ್‌ ಅವರು ಉಳ್ಳಾಲ ಪರಿಸರದಲ್ಲಿ ಮರಳು ರಾಶಿ ಹಾಕಿ ಕಾಮಗಾರಿ ನಡೆಸಿದ್ದ ಪ್ರಶ್ನೆಗೆ ಯಾರೂ ಪರಿಸರಕ್ಕೆ ಹಾನಿ ಮಾಡಿದರೂ ಅದು ತಪ್ಪೇ. ಒಂದು ವೇಳೆ ಅಕ್ರಮ ನಡೆದಿದ್ದರೆ ಅಧಿಕಾರಿಗಳಿಂದ ವರದಿ ತರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ