ಆ್ಯಪ್ನಗರ

ಬೆಂಗಳೂರು ಡೈರಿಯಲ್ಲೂ ಮೈತ್ರಿ: ಸಿಎಂ ನೇತೃತ್ವದಲ್ಲಿ ಸಭೆ

ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷಗಾದಿ ವಿಚಾರದಲ್ಲೂ ಕಾಂಗ್ರೆಸ್‌ -ಜೆಡಿಎಸ್‌ ಮಿತ್ರಪಕ್ಷಗಳ ಮಧ್ಯೆ ಮೈತ್ರಿಗೆ ಒಲವು ವ್ಯಕ್ತವಾಗಿದ್ದು, ಅಧಿಕಾರ ...

Vijaya Karnataka 22 May 2019, 5:00 am
ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷಗಾದಿ ವಿಚಾರದಲ್ಲೂ ಕಾಂಗ್ರೆಸ್‌ -ಜೆಡಿಎಸ್‌ ಮಿತ್ರಪಕ್ಷಗಳ ಮಧ್ಯೆ ಮೈತ್ರಿಗೆ ಒಲವು ವ್ಯಕ್ತವಾಗಿದ್ದು, ಅಧಿಕಾರ ಹಂಚಿಕೆಗೆ ಸೂತ್ರ ಸಿದ್ಧವಾಗುತ್ತಿದೆ.
Vijaya Karnataka Web kmf


ಒಕ್ಕೂಟದ ನೂತನ ನಿರ್ದೇಶಕ ಮಂಡಳಿ ಸದಸ್ಯರು ಮಂಗಳವಾರ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಎರಡೂ ಪಕ್ಷಗಳ ಪ್ರಮುಖರು ಚರ್ಚಿಸಿ ಒಮ್ಮತದಿಂದ ಅಧ್ಯಕ್ಷರನ್ನು ಆಯ್ಕೆ ಮಾಡಲು ನಿರ್ಧರಿಸಿದ್ದಾರೆ.

ಬೆಂಗಳೂರು ಡೈರಿಯಲ್ಲಿ ಅಧಿಕಾರ ಸೂತ್ರ ಹಿಡಿಯುವುದು ಎರಡೂ ಪಕ್ಷಗಳ ಮುಖಂಡರ ಪಾಲಿಗೆ ಪ್ರತಿಷ್ಠೆಯಾಗಿದೆ. ಅಧ್ಯಕ್ಷಗಾದಿಗಾಗಿ ಸಂಘರ್ಷ ನಡೆಸುವ ಬದಲು ಒಮ್ಮತದಿಂದ ನಡೆದುಕೊಳ್ಳಲು ಹಾಗೂ ಈ ವಿಚಾರದಲ್ಲಿ ಹಾಲುಒಕ್ಕೂಟದ ವ್ಯಾಪ್ತಿಯ ಎರಡೂ ಪಕ್ಷಗಳ ಶಾಸಕರು ಪರಸ್ಪರ ಚರ್ಚಿಸಿ ತೀರ್ಮಾನಕ್ಕೆ ಬರಲು ಸಭೆಯಲ್ಲಿ ಸಮ್ಮತಿಸಲಾಗಿದೆ.

ಡಿಸಿಎಂ ಡಾ. ಜಿ. ಪರಮೇಶ್ವರ್‌, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ವಸತಿ ಸಚಿವ ಎಂಟಿಬಿ ನಾಗರಾಜ…, ಸಂಸದರಾದ ಎಂ.ವೀರಪ್ಪ ಮೊಯ್ಲಿ, ಡಿ.ಕೆ. ಸುರೇಶ್‌, ಶಾಸಕರಾದ ಎಸ್‌.ಟಿ.ಸೋಮಶೇಖರ್‌, ಮಂಜುನಾಥ್‌ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ