ಆ್ಯಪ್ನಗರ

ಚಂಡಮಾರುತದ ಎಫೆಕ್ಟ್‌; ರಾಜ್ಯದಲ್ಲಿ ಜೋರಾಗುತ್ತಿದೆ ಚಳಿ, ಹಲವೆಡೆ ತಾಪಮಾನ 10 ಡಿಗ್ರಿ

ರಾಜ್ಯದಲ್ಲಿ ಚಳಿಗಾಲದ ಆರಂಭದಲ್ಲೇ ತಾಪಮಾನ ವೇಗವಾಗಿ ಇಳಿಕೆಯಾಗುತ್ತಿದೆ...ಇದರಿಂದ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಚಳಿಯ 'ಬಿಸಿ' ಹೆಚ್ಚಾಗುತ್ತಿದೆ.

Vijaya Karnataka Web 8 Dec 2019, 9:09 am
ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ಆರಂಭದಲ್ಲೇ ತಾಪಮಾನ ವೇಗವಾಗಿ ಇಳಿಕೆಯಾಗುತ್ತಿದೆ. ಬೀದರ್‌ನಲ್ಲಿ 11 ಡಿಗ್ರಿ, ಆಗುಂಬೆಯಲ್ಲಿ 10 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.
Vijaya Karnataka Web ಚಳಿಗಾಲ
ಚಳಿಗಾಲ


ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ವಾಡಿಕೆಗಿಂತ ಇಳಿಕೆಯಾಗಿದೆ. ಬೀದರ್‌ನಲ್ಲಿ ಶನಿವಾರ 11.6 ಡಿಗ್ರಿ ಹಾಗೂ ಆಗುಂಬೆಯಲ್ಲಿ 10.9 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿದ್ದು, ತೀವ್ರವಾದ ಚಳಿ ಕಂಡು ಬಂದಿದೆ. ಬೀದರ್‌ನಲ್ಲಿವಾಡಿಕೆಗೆ ಹೋಲಿಸಿದರೆ ಕನಿಷ್ಠ ತಾಪಮಾನ 4.1 ಡಿಗ್ರಿಯಷ್ಟು ಇಳಿದಿದೆ.

ಅಲ್ಲಲ್ಲಿ ಮಳೆ

ಈ ನಡುವೆ, ಅರಬ್ಬೀ ಸಮುದ್ರದಲ್ಲಿ 'ಪವನ್‌' ಚಂಡಮಾರುತದಿಂದ ಕರಾವಳಿಯಲ್ಲಿ ಅಲೆಗಳಬ್ಬರ ಜೋರಾಗಿದೆ. ಅರಬ್ಬೀ ಸಮುದ್ರದಲ್ಲಿ ಮತ್ತೊಂದು ವಾಯುಭಾರ ಕುಸಿತ ಕಂಡು ಬಂದಿದ್ದು, ಇದರ ಪರಿಣಾಮದಿಂದ ದಕ್ಷಿಣ ಒಳನಾಡಿನ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಚದುರಿದಂತೆ ತುಂತುರು ಮಳೆ ಸುರಿದಿದೆ. ಕರಾವಳಿಯಲ್ಲಿ ಅಲೆಗಳಬ್ಬರ ಜೋರಾಗಿರುವುದರಿಂದ ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ