ಆ್ಯಪ್ನಗರ

ರಾಜ್ಯ ಸರಕಾರಕ್ಕೆ ಜಾತಿ ಗಣತಿ ಅಧಿಕಾರವಿಲ್ಲ, ಹೈಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ರಾಜ್ಯ ಸರಕಾರಕ್ಕೆ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ನಡೆಸುವ ಅಧಿಕಾರ ಇಲ್ಲ. ಜನಗಣತಿ ಕಾರ್ಯ ಸಂಪೂರ್ಣ ಕೇಂದ್ರದ ವ್ಯಾಪ್ತಿಗೆ ಬರುವ ವಿಚಾರ ಎಂದು ಕೇಂದ್ರ ಸರಕಾರ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ.

Vijaya Karnataka Web 11 Aug 2020, 8:53 am
ಬೆಂಗಳೂರು: ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ನಡೆಸುವ ಅಧಿಕಾರ ರಾಜ್ಯ ಸರಕಾರಕ್ಕೆ ಇಲ್ಲ ಎಂದು ಕೇಂದ್ರ ಸರಕಾರ ಹೈಕೋರ್ಟ್‌ಗೆ ಸೋಮವಾರ ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು 2015ರಲ್ಲಿ ನಡೆಸಿದ್ದ ಜಾತಿ ಗಣತಿ ಪ್ರಶ್ನಿಸಿ ಬೀದರ್‌ನ ಶಿವರಾಜ ಕಣಶೆಟ್ಟಿ ಮತ್ತಿತರರು ಸಲ್ಲಿಸಿದ್ದ ಪಿಐಎಲ್‌ ಸಿಜೆ ಎ.ಎಸ್‌.ಓಕ್‌ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
Vijaya Karnataka Web Karnataka high court


ಕೇಂದ್ರ ಸರಕಾರದ ಪರ ವಕೀಲರು, ರಾಜ್ಯ ಸರಕಾರಗಳಿಗೆ ಜನಗಣತಿ ನಡೆಸುವ ಅಧಿಕಾರವಿಲ್ಲ. ಜನಗಣತಿ ಕಾರ್ಯ ಸಂಪೂರ್ಣ ವಾಗಿ ಕೇಂದ್ರ ಸರಕಾರದ ವ್ಯಾಪ್ತಿಗೆ ಬರುವ ವಿಚಾರ ಎಂದರು. ಈಗಾಗಲೇ ಜಾತಿ ಗಣತಿ ಪೂರ್ಣಗೊಂಡಿದೆ. ಆದರೆ ಜಾತಿ ಗಣತಿ ನಡೆಸುವ ಅಧಿಕಾರ ರಾಜ್ಯ ಸರಕಾರ ಗಳಿಗಿಲ್ಲ ಎಂದು ಕೇಂದ್ರ ಸರಕಾರ ಹೇಳುತ್ತಿದೆ. ಇಂತಹ ಸಂದರ್ಭದಲ್ಲಿ ಜಾತಿ ಗಣತಿಯನ್ನು ರಾಜ್ಯ ಸಮರ್ಥಿಸಿಕೊಳ್ಳಲಿದೆಯೇ? ಜಾತಿ ಗಣತಿಯ ಅಧಿಸೂಚನೆ ಹೊರಡಿಸಲಿದೆ ಎಂಬ ಬಗ್ಗೆ ಆ.26ರೊಳಗೆ ನಿಲುವು ತಿಳಿಸಬೇಧಿಕು, ಎಂದು ನ್ಯಾಯಧಿಪೀಠ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ 2015ರ ಏಪ್ರಿಲ್‌ 11ರಿಂದ ಜಾತಿ ಜನಗಣತಿ ಆರಂಭಿಸಿತ್ತು. ಈಗಾಗಲೇ ಗಣತಿ ಕಾರ್ಯ ಪೂರ್ಣಗೊಂಡಿದ್ದು, ಅಂತಿಮ ವರದಿ ಪ್ರಟಿಸಬೇಕಿದೆ. ಜಾತಿ ಜನಗಣತಿ ಆರಂಭಕ್ಕೂ ಮುನ್ನವೇ 2015ರ ಮಾರ್ಚ್ 5ರಂದು ಬೀದರ್‌ನ ಶಿವರಾಜ ಕಣಶೆಟ್ಟಿ ಹಾಗೂ ಇತರರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ರಾಜ್ಯದಲ್ಲಿ ಜಾತಿ ಜನಗಣತಿ ನಡೆಸದಂತೆ ಆದೇಶಿಸಲು ಕೋರಿದ್ದರು. ಆಗ ರಾಜ್ಯ ಸರಕಾರ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸುತ್ತಿಧಿರುಧಿವುದು ಜಾತಿ ಜನಗಣತಿ ಅಲ್ಲ. ಬದಲಾಗಿ, ರಾಜ್ಯದಲ್ಲಿಹಿಂದುಳಿದ ವರ್ಗಗಳ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಎಂದು ಕೋರ್ಟ್‌ಗೆ ತಿಳಿಸಿತ್ತು. ಹಾಗಾಗಿ, ನ್ಯಾಯಾಲಯ ಸಮೀಕ್ಷೆ ನಡೆಸಲು ಅನುಮತಿ ನೀಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ