ಆ್ಯಪ್ನಗರ

ರೈತ ಮಹಿಳೆ ನಿಂದನೆ: ಸಿಎಂ ಕುಮಾರಸ್ವಾಮಿ ವಿರುದ್ಧ ದೂರು

ಮುಖ್ಯಮಂತ್ರಿ ಕುಮಾರಸ್ವಾಮಿ ರೈತ ಮಹಿಳೆಯನ್ನು ಅವಮಾನಕರವಾಗಿ ನಿಂದಿಸಿರುವುದು, ಇಡೀ ರೈತರಿಗೆ ಮಾಡಿದ ಅಪಮಾನವಾಗಿದೆ.

Vijaya Karnataka 22 Nov 2018, 8:10 am
ಬೆಂಗಳೂರು: ರೈತ ಮಹಿಳೆಯ ಕುರಿತು ಹಗುರವಾಗಿ ಮಾತನಾಡಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಕಾರ್ಮಿಕ ಕಲ್ಯಾಣ ಪ್ರತಿಷ್ಠಾನದ ಅಧ್ಯಕ್ಷ ಮಲ್ಲಿಕಾರ್ಜುನ್‌ ಎಂಬುವರು ಪೊಲೀಸ್‌ ಮಹಾ ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.
Vijaya Karnataka Web kumarswamy


ಮುಖ್ಯಮಂತ್ರಿ ವಿರುದ್ಧವಾಗಿ ಆನ್‌ಲೈನ್‌ ಮೂಲಕ ಪೊಲೀಸ್‌ ಮಹಾ ನಿರ್ದೇಶಕರು, ಕರ್ನಾಟಕ ಮಹಿಳಾ ಆಯೋಗ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು, ಕೂಡಲೇ ಸಿಎಂ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಆಗ್ರಹಿಸಿದರು.

''ಮುಖ್ಯಮಂತ್ರಿ ಕುಮಾರಸ್ವಾಮಿ ರೈತ ಮಹಿಳೆಯನ್ನು ಅವಮಾನಕರವಾಗಿ ನಿಂದಿಸಿರುವುದು, ಇಡೀ ರೈತರಿಗೆ ಮಾಡಿದ ಅಪಮಾನವಾಗಿದೆ. ನಮ್ಮ ಮನವಿ ಪರಿಗಣಿಸಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು'' ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ