ಆ್ಯಪ್ನಗರ

ಎಐಸಿಸಿಗೆ ಸೋಲಿಗೆ ಕಾರಣ ವರದಿ: ದಿನೇಶ್‌ ಗುಂಡೂರಾವ್‌

ರಾಜ್ಯದಲ್ಲಿ ಕಾಂಗ್ರೆಸ್‌ ಸೋಲಿಗೆ ಕಾರಣಗಳನ್ನು ಪಟ್ಟಿ ಮಾಡಿ ಶೀಘ್ರದಲ್ಲೇ ಎಐಸಿಸಿ ವರಿಷ್ಠರಿಗೆ ವರದಿ ಸಲ್ಲಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ...

Vijaya Karnataka 26 May 2019, 5:00 am
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸೋಲಿಗೆ ಕಾರಣಗಳನ್ನು ಪಟ್ಟಿ ಮಾಡಿ ಶೀಘ್ರದಲ್ಲೇ ಎಐಸಿಸಿ ವರಿಷ್ಠರಿಗೆ ವರದಿ ಸಲ್ಲಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.
Vijaya Karnataka Web dinesh gundurao


''ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ಮಿತ್ರಪಕ್ಷಗಳು ಒಟ್ಟಿಗೆ ಚುನಾವಣೆ ಎದುರಿಸಿದರೂ ಅನಿರೀಕ್ಷಿತ ಸೋಲಾಗಿದೆ. ಇದಕ್ಕೆ ಹಲವು ಕಾರಣಗಳಿದ್ದು, ವರಿಷ್ಠರಿಗೆ ವರದಿ ಸಲ್ಲಿಸುತ್ತೇನೆ ಮತ್ತು ಹೈಕಮಾಂಡ್‌ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ'' ಎಂದು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ''ರಾಜಕೀಯದಲ್ಲಿ ಸೋಲು ಗೆಲುವು ಸಾಮಾನ್ಯ. ಚುನಾವಣೆಯಲ್ಲಿ ಸೋತ ಕೂಡಲೇ ಪಕ್ಷ ಮುಳುಗಿ ಹೋಗುವುದಿಲ್ಲ. ಪಕ್ಷ ಸಂಘಟನೆ ಮತ್ತು ಶಿಸ್ತು ಪಾಲನೆಗೆ ಇನ್ನುಮುಂದೆ ಹೆಚ್ಚು ಒತ್ತು ನೀಡಲಾಗುವುದು'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ