ಆ್ಯಪ್ನಗರ

ಅಧಿವೇಶನ ಮೊಟಕುಗೊಳಿಸಲು ಕಾಂಗ್ರೆಸ್‌ ವಿರೋಧ; ಕನಿಷ್ಠ 15 ದಿನಗಳ ಕಾಲ ಸದನ ನಡೆಸುವಂತೆ ಆಗ್ರಹ

ವಿಧಾನಮಂಡಲದ ಅಧಿವೇಶನವನ್ನು ಮೊಟಕುಗೊಳಿಸಲು ಚಿಂತನೆ ನಡೆಸಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್‌ ಪಕ್ಷ ತನ್ನ ನಿಲುವಿಗೆ ಅಂಟಿಕೊಂಡಿದ್ದು, ಒಂದೋ ಕನಿಷ್ಠ 15 ದಿನಗಳ ಕಾಲ ಸದನ ನಡೆಸುವಂತೆ ಕೇಳಿಕೊಂಡಿದೆ, ಇಲ್ಲವೇ ಮಸೂದೆಗಳನ್ನು ಮಂಡನೆ ಮಾಡಬೇಡಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.

Vijaya Karnataka Web 21 Sep 2020, 2:23 pm
ಬೆಂಗಳೂರು: ಕೊರೊನಾ ಕಾರಣದಿಂದ ವಿಧಾನಮಂಡಲದ ಅಧಿವೇಶನವನ್ನು ಮೊಟಕುಗೊಳಿಸಲು ಚಿಂತನೆ ನಡೆಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಪಕ್ಷ ಪಕ್ಷ ಕಾಂಗ್ರೆಸ್‌ನಿಂದ ವಿರೋಧ ವ್ಯಕ್ತವಾಗಿದೆ.
Vijaya Karnataka Web mansoon session


ಅಧಿವೇಶನ ಮೊಟಕುಗೊಳಿಸುವ ವಿಚಾರದ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ; ನಾರಾಯಣ

ಅಧಿವೇಶನವನ್ನು 3 ದಿನಕ್ಕೆ ಸೀಮಿತಗೊಳಿಸುವ ಸಂಬಂಧ ಸಿಎಂ ಯಡಿಯೂರಪ್ಪ ಅವರೇ ಪ್ರತಿಪಕ್ಷದ ನಾಯಕರಿಗೆ ಕರೆ ಮಾಡಿ ಸಹಕಾರ ಕೋರಿದ್ದರು. ಆದರೆ ಕಾಂಗ್ರೆಸ್‌ ಮಾತ್ರ ಅಧಿವೇಶನವನ್ನು ಮೊಟಕುಗೊಳಿಸದಿರಲು ನಿರ್ಧರಿಸಿದೆ. ಅಲ್ಲದೇ ಕೊರೊನಾ ಕಾರಣವೊಡ್ಡಿ ಕಲಾಪವನ್ನು ನಿಲ್ಲಿಸುವ ಬದಲು ಕನಿಷ್ಠ ಹದಿನೈದು ದಿನಗಳ ಕಾಲ ಸದನವನ್ನು ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡಿದೆ.

‘ಸಿದ್ರಾಮಯ್ಯನೋರೇ, ನಿಮ್ಗೆ ಯಾರು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ?’; ಕೆಎಸ್‌ ಈಶ್ವರಪ್ಪ

ವಿಧಾನಮಂಡಲದ ಅಧಿವೇಶನವನ್ನು ಮೊಟಕುಗೊಳಿಸಲು ಚಿಂತನೆ ನಡೆಸಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್‌ ಪಕ್ಷ ತನ್ನ ನಿಲುವಿಗೆ ಅಂಟಿಕೊಂಡಿದ್ದು, ಒಂದೋ ಕನಿಷ್ಠ 15 ದಿನಗಳ ಕಾಲ ಸದನ ನಡೆಸುವಂತೆ ಕೇಳಿಕೊಂಡಿದೆ, ಇಲ್ಲವೇ ಮಸೂದೆಗಳನ್ನು ಮಂಡನೆ ಮಾಡಬೇಡಿ ಎಂದು ಕಾಂಗ್ರೆಸ್ ಆಗ್ರಹಿಸಿದೆ. ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರಕ್ಕೆ ಬರಲು ಕಲಾಪ ಸಲಹಾ ಸಮಿತಿ ಸಭೆಯನ್ನು ಮುಖಂಡರು ನಡೆಸುತ್ತಿದ್ದಾರೆ.

‘ನಿನಗೆ ಯಾವ ಕೆಲಸ ಮಾಡೋ ಯೋಗ್ಯತೆ ಇಲ್ಲ’ ವಿಧಾನಸೌಧದಲ್ಲಿ ಪರಸ್ಪರ ಹೊಡೆದಾಟಕ್ಕೆ ಮುಂದಾದ ಬಿಜೆಪಿ ನಾಯಕರು..!

ಕಲಾಪ ಸಲಹಾ ಸಮಿತಿಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಸಲಹಾ ಸಮಿತಿ ಸದಸ್ಯರು ಇದ್ದಾರೆ. ಸದ್ಯ ಕಲಾಪ ಸಲಹಾ ಸಮಿತಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಚರ್ಚೆ ನಡೆಸಿ ಸದನ ಮುಂದುವರಿಸುವ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ