ಆ್ಯಪ್ನಗರ

ಕೊನೆಗೂ ಬೆಂಗಳೂರಿಗೆ ಬಂದ ಅತೃಪ್ತ ಶಾಸಕರು: ಅಧಿವೇಶನಕ್ಕೆ ಹಾಜರ್‌?

ಕಾಂಗ್ರೆಸ್‌ ಪಕ್ಷದ ವಿರುದ್ಧ ಮುನಿಸಿಕೊಂಡು ಮುಂಬೈನಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಠಿಕಾಣಿ ಹೂಡಿದ್ದ ನಾಲ್ವರು ಅತೃಪ್ತ ಶಾಸಕರಾದ ರಮೇಶ್‌ ಜಾರಕಿಹೊಳಿ, ಉಮೇಶ್‌ ಜಾಧವ್‌, ಮಹೇಶ್‌ ಕುಮಟಳ್ಳಿ ಮತ್ತು ಬಿ. ನಾಗೇಂದ್ರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ

Vijaya Karnataka Web 13 Feb 2019, 8:50 am
ಬೆಂಗಳೂರು: ಕಳೆದ ಒಂದೂವರೆ ತಿಂಗಳಿಂದ ಮುಂಬೈನಲ್ಲಿ ಅಜ್ಞಾತವಾಸದಲ್ಲಿದ್ದ ಕಾಂಗ್ರೆಸ್‌ನ ನಾಲ್ವರು ಅತೃಪ್ತ ಶಾಸಕರು ಬೆಂಗಳೂರಿಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
Vijaya Karnataka Web ರಮೇಶ್‌ ಜಾರಕಿಹೊಳಿ
ರಮೇಶ್‌ ಜಾರಕಿಹೊಳಿ


ಕಾಂಗ್ರೆಸ್‌ ಪಕ್ಷದ ವಿರುದ್ಧ ಮುನಿಸಿಕೊಂಡು ಮುಂಬೈನಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಠಿಕಾಣಿ ಹೂಡಿದ್ದ ನಾಲ್ವರು ಅತೃಪ್ತ ಶಾಸಕರಾದ ರಮೇಶ್‌ ಜಾರಕಿಹೊಳಿ, ಉಮೇಶ್‌ ಜಾಧವ್‌, ಮಹೇಶ್‌ ಕುಮಟಳ್ಳಿ ಮತ್ತು ಬಿ. ನಾಗೇಂದ್ರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗಿದೆ.

ಈ ನಡುವೆ ಅತೃಪ್ತ ಶಾಸಕರ ಗುಂಪು ಸೇರಿದ್ದಾರೆ ಎಂಬ ವದಂತಿ ಇದ್ದ ಜೆಡಿಎಸ್‌ ಶಾಸಕ ನಾರಾಯಣಗೌಡ ಕೂಡ ಬೆಂಗಳೂರಿಗೆ ಆಗಮಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣಗೌಡ, ಮಹಾರಾಷ್ಟ್ರಕ್ಕೆ ಸ್ನೇಹಿತರು, ಕುಟುಂಬ ಸದಸ್ಯರನ್ನು ನೋಡಲು ಹೋದಾಗ ಅಸ್ವಸ್ಥಗೊಂಡಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮುಂಬೈನಲ್ಲೇ ಚಿಕಿತ್ಸೆ ಪಡೆಯುತ್ತಿದೆ. ಆದರೆ ಜೆಡಿಎಸ್‌ನ ವರಿಷ್ಠ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದೆ. ನನ್ನನ್ನು ಮುಟ್ಟಲು ಬಿಜೆಪಿಯವರಿಗೆ ಸಾಧ್ಯವಿಲ್ಲ ಎಂದು ತಿಳಿಸಿದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌, ಜೆಡಿಎಸ್‌ನ ನಾರಾಯಣಗೌಡ ಬೆಂಗಳೂರಿಗೆ ಆಗಮಿಸಿದ್ದಾರೆ. ನನಗೆ ದೊರೆತಿರುವ ಮಾಹಿತಿ ಪ್ರಕಾರ, ಮುಂಬೈನಲ್ಲಿ ಇದ್ದ ಶಾಸಕರೆಲ್ಲರೂ ಆಗಮಿಸಿದ್ದಾರೆ. ಮುಂಬೈ ಸೀನ್‌ ಕ್ಲೋಸ್‌ ಆಗಿದೆ. ಇನ್ನೇನಿದ್ದರೂ ಬೆಂಗಳೂರು ಸೀನ್‌ ಎಂದರು.

ಬೆಂಗಳೂರಿಗೆ ಆಗಮಿಸಿರುವ ಈ ಅತೃಪ್ತ ಶಾಸಕರು ಬುಧವಾರ ನಡೆಯಲಿರುವ ಅಧಿವೇಶನಕ್ಕೆ ಹಾಜರಾಗುತ್ತಾರಾ ಇಲ್ಲವಾ ಎನ್ನುವುದು ಇನ್ನೂ ಖಚಿತವಾಗಿಲ್ಲ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈಗಾಗಲೇ ಈ ನಾಲ್ವರು ಅತೃಪ್ತರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ಸಲ್ಲಿಸಿದ್ದಾರೆ.

ಅನರ್ಹತೆ ಭೀತಿ ಎದುರಿಸುತ್ತಿರುವ ನಾಲ್ವರು ಅತೃಪ್ತರು ಸ್ಪೀಕರ್‌ ರಮೇಶ್‌ ಕುಮಾರ್‌ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ