ಆ್ಯಪ್ನಗರ

ಅಗತ್ಯವಾದ್ರೆ ಮುಸ್ಲಿಮರಿಂದ ಎನ್‌ಡಿಎಗೆ ಬೆಂಬಲ: ಸಿದ್ದು, ಗುಂಡೂರಾವ್ ವಿರುದ್ಧ ರೋಷನ್ ಬೇಗ್ ಕಿಡಿ

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗುವ ಬಗ್ಗೆ ಎಕ್ಸಿಟ್‌ ಪೋಲ್‌ಗಳಲ್ಲಿ ಬರುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ರೋಷನ್‌ ಬೇಗ್‌ ಕಿಡಿಕಾರಿದ್ದಾರೆ. ಜತೆಗೆ ಸಂದರ್ಭ ಬಂದರೆ ಮುಸಲ್ಮಾನರು ಎನ್‌ಡಿಎಗೆ ಬೆಂಬಲಿಸುವ ನಿಲುವನ್ನೂ ತೆಗೆದುಕೊಳ್ಳಬೇಕಾಗುತ್ತದೆ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Vijaya Karnataka 21 May 2019, 11:01 am
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗುವ ಬಗ್ಗೆ ಎಕ್ಸಿಟ್‌ ಪೋಲ್‌ಗಳಲ್ಲಿ ಬರುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ರೋಷನ್‌ ಬೇಗ್‌ ಕಿಡಿಕಾರಿದ್ದಾರೆ. ಜತೆಗೆ ಸಂದರ್ಭ ಬಂದರೆ ಮುಸಲ್ಮಾನರು ಎನ್‌ಡಿಎಗೆ ಬೆಂಬಲಿಸುವ ನಿಲುವನ್ನೂ ತೆಗೆದುಕೊಳ್ಳಬೇಕಾಗುತ್ತದೆ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
Vijaya Karnataka Web dinesh-new


ರೋಷನ್‌ ಬೇಗ್‌ ಈ ಹಿಂದೆಯೂ ಪ್ರದೇಶ ಕಾಂಗ್ರೆಸ್‌ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರಿಗೆ ಒಂದೇ ಕ್ಷೇತ್ರದಲ್ಲಿ ಟಿಕೆಟ್‌ ನೀಡಿದ್ದರ ಬಗ್ಗೆಯೂ ಆಕ್ಷೇಪಿಸಿದ್ದರು. ಈ ವಿಚಾರದಲ್ಲಿ ಅಲ್ಪಸಂಖ್ಯಾತ ಮುಖಂಡರು ಪಕ್ಷದ ವೇದಿಕೆಯಲ್ಲೂ ಆಕ್ರೋಶ ತೋಡಿಕೊಂಡಿದ್ದರು. ಮತದಾನೋತ್ತರ ಸಮೀಕ್ಷೆಗಳಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ ಬರುವ ಸುಳಿವು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿರುವ ಬೇಗ್‌, ಇಂಥ ಫಲಿತಾಂಶ ಬರುವುದನ್ನು ಮೊದಲೇ ನಿರೀಕ್ಷಿಸಲಾಗಿತ್ತು ಎಂದಿದ್ದಾರೆ.

''ರಾಜ್ಯದಲ್ಲಿ ಕಾಂಗ್ರೆಸ್‌ನ ವೈಫಲ್ಯಕ್ಕೆ ದಿನೇಶ್‌ ಗುಂಡೂರಾವ್‌, ಸಿದ್ದರಾಮಯ್ಯ ಅವರೇ ಕಾರಣ. ರಾಜ್ಯದಲ್ಲಿ ಪಕ್ಷದ ಪ್ರಚಾರ ವೈಖರಿ ನೋಡಿದಾಗಲೇ ಇದೊಂದು ಪ್ಲಾಪ್‌ಶೊ ಎನ್ನುವುದು ಗೊತ್ತಾಗಿತ್ತು. ಆದರೆ, ಪಕ್ಷದ ನಾಯಕರು ಭ್ರಮೆಯಲ್ಲಿದ್ದರು. ಈಗಲಾದರೂ ಅವರು ನೆಲದ ಮೇಲೆ ನಿಂತುಕೊಂಡು ವಾಸ್ತವವನ್ನು ಅರಿತುಕೊಳ್ಳಲಿ,'' ಎಂದು ಚಾಟಿ ಬೀಸಿದ್ದಾರೆ.

ಊಳಿಗದ ಆಳಲ್ಲ

''ಸ್ವಾಭಿಮಾನದ ರಕ್ಷಣೆಯಾದರೆ ಮುಸ್ಲಿಮರು ಬೆಂಬಲಿಸುತ್ತಾರೆ. ಅವರನ್ನು ಊಳಿಗದ ಆಳುಗಳಂತೆ ನೋಡಿಕೊಂಡರೆ ಪರ್ಯಾಯ ಮಾರ್ಗದ ಬಗ್ಗೆಯೂ ಯೋಚಿಸಬೇಕಾಗುತ್ತದೆ. ಕೇಂದ್ರದಲ್ಲಿ ಮತ್ತೆ ಎನ್‌ಡಿಎ ಸರಕಾರ ರಚನೆಯಾಗಲಿದೆ. ಈ ಸಂದರ್ಭದಲ್ಲಿ ಮುಸ್ಲಿಮರೂ ತಮ್ಮ ಭವಿಷ್ಯದ ಬಗ್ಗೆ ಯೋಚಿಸಬೇಕಾಗುತ್ತದೆ. ಅಗತ್ಯ ಕಂಡರೆ ಎನ್‌ಡಿಎಗೆ ಬೆಂಬಲಿಸುವ ಬಗ್ಗೆಯೂ ಪರಿಶೀಲಿಸಬೇಕಾಗುತ್ತದೆ,'' ಎನ್ನುವ ಮೂಲಕ ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ