ಆ್ಯಪ್ನಗರ

ಉಪ ಚುನಾವಣೆ ಸಂಪೂರ್ಣ ಜವಾಬ್ದಾರಿ ಸಿದ್ದರಾಮಯ್ಯ ಹೆಗಲಿಗೆ

ಅನರ್ಹ ಶಾಸಕರನ್ನು ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಬಿಜೆಪಿಯವರು ನಮ್ಮ ಪಕ್ಷ ಸಿದ್ಧಾಂತಗಳನ್ನು ಅರಿತು ಕಾಂಗ್ರೆಸ್‌ ಗೆ ಬರುವುದಾದರೆ ಸ್ವಾಗತ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Vijaya Karnataka Web 16 Oct 2019, 11:02 pm
ಹೊಸದಿಲ್ಲಿ: ಉಪಚುನಾವಣೆಯಲ್ಲಿಹೆಚ್ಚಿನ ಸ್ಥಾನ ಗೆಲ್ಲಲು ಪಕ್ಷ ಸಂಘಟನೆ ಮತ್ತು ಚುನಾವಣಾ ರಣತಂತ್ರ ಹೆಣೆಯುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ.
Vijaya Karnataka Web ಸಿದ್ದರಾಮಯ್ಯ, ಸೋನಿಯಾ ಗಾಂಧಿ
ಸಿದ್ದರಾಮಯ್ಯ, ಸೋನಿಯಾ ಗಾಂಧಿ


ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಸೋನಿಯಾ ಭೇಟಿಯಾಗಿ ಶುಭ ಕೋರಲು ದಿಲ್ಲಿಗೆ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಈ ವೇಳೆ ಉಪಚುಣಾವಣೆಯ ಸಂಪೂರ್ಣ ಜವಾಬ್ದಾರಿಯನ್ನು ಸಿದ್ದರಾಮಯ್ಯ ಅವರ ಹೆಗಲಿಗೆ ವಹಿಸಿದ್ದಾರೆ.

ಮುಂಬರುವ ಉಪಚುನಾವಣೆ, ಪದಾಧಿಕಾರಿಗಳ ಆಯ್ಕೆ ಮತ್ತು ಮಾಜಿ ಡಿಸಿಎಂ ಜಿ ಪರಮೇಶ್ವರ, ಡಿಕೆಶಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಮಾಹಿತಿ ಕೇಳಿ ಪಡೆದಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ

ಬಿಜೆಪಿ ಸರಕಾರವು ಕಣ್ಣು, ಕಿವಿ ಇಲ್ಲದ ಸರಕಾರ. ಅನೈತಿಕ ಮಾರ್ಗದಲ್ಲಿಬಿಎಸ್‌ ಯಡಿಯೂರಪ್ಪ ಸಿಎಂ ಕುರ್ಚಿಯಲ್ಲಿಕುತಿದ್ದಾರೆ. ಅಧಿವೇಶನದಲ್ಲಿಯಾವುದೇ ಚರ್ಚೆ ಇಲ್ಲದೆ ಬಜೆಟ್‌ ಪಾಸ್‌ ಮಾಡಿಕೊಂಡಿದ್ದಾರೆ. ಹೆಚ್ಚು ದಿನ ಅಧಿವೇಶನ ನಡೆದರೆ ಅವರ ಬಣ್ಣ ಎಲ್ಲಿಬಯಲಾಗುತ್ತದೋ ಎಂಬ ಬಯ ಬಿಜೆಪಿ ಅವರನ್ನು ಕಾಡಿತ್ತು. ವರ್ಗಾವಣೆಯನ್ನು ದಂಧೆಯಾಗಿ ಮಾಡಿಕೊಂಡಿರುವ ಯಡಿಯೂರಪ್ಪ ಹಣಕ್ಕಾಗಿ ಬಾಗಿಲು ತೆರೆದು ಕುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆಸಿ ವೇಣುಗೋಪಾಲ್‌ ಜತೆ ರೌಡಿ ಶೀಟರ್‌ ಚರ್ಚೆ ನಡೆಸಿರುವ ಕುರಿತ ಪ್ರಶ್ನೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಭೇಟಿ ಆಗಲು ಬಂದವರನ್ನು ನೀನು ರೌಡಿ ಶೀಟರಾ? ಅಂತ ಪ್ರಶ್ನೆ ಮಾಡೋಕೆ ಆಗುತ್ತಾ? ಕುತ್ತಿಗೆ ಹಿಡಿದು ಹೊರ ದಬ್ಬಲು ಸಾಧ್ಯವಾ?. ಸಾಮಾನ್ಯರ ಭೇಟಿಯಂತೆ ಇದು ಒಂದು ಸಹಜ ಘಟನೆ. ಅದಕ್ಕೆ ವ್ಯತಿರಿಕ್ತ ಹೇಳಿಕೆಗಳು ಸರಿಯಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ