ಆ್ಯಪ್ನಗರ

ಪಕ್ಷ, ಸರಕಾರ ಉಳಿಸಿಕೊಳ್ಳಲು 'ಕೈ' ಕಮಾಂಡ್‌ ಪ್ಲಾನ್‌

ಪಕ್ಷ ನಿಷ್ಠ ನಾಲ್ಕೈದು ಸಚಿವರಿಂದ ಕೂಡಲೇ ರಾಜೀನಾಮೆ ಕೊಡಿಸಿ ಅತೃಪ್ತ ಶಾಸಕರಿಗೆ ಮಣೆ ಹಾಕಲು ಕಾಂಗ್ರೆಸ್ ವರಿಷ್ಠ ನಾಯಕರು ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ.

Vijaya Karnataka Web 1 Jul 2019, 5:21 pm
ಬೆಂಗಳೂರು: ಆಪರೇಷನ್‌ ಕಮಲದ ಭೀತಿಯಲ್ಲಿರುವ ಕಾಂಗ್ರೆಸ್ ಈಗ ಪಕ್ಷ ಹಾಗೂ ಸರಕಾರ ಎರಡನ್ನೂ ಉಳಿಸಿಕೊಳ್ಳಲು ಮುಂದಾಗಿದೆ.
Vijaya Karnataka Web ಸಿದ್ದರಾಮಯ್ಯ, ಪರಮೇಶ್ವರ್
ಸಿದ್ದರಾಮಯ್ಯ, ಪರಮೇಶ್ವರ್


ವಿಜಯನಗರ ಶಾಸಕ ಆನಂದ್‌ ಸಿಂಗ್‌, ಗೋಕಾಕ ಶಾಸಕ ರಮೇಶ್‌ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಹಿರಿಯ ನಾಯಕರು ಸಮಾಲೋಚನೆ ನಡೆಸಿದರು.

ಮೊದಲಿಗೆ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌, ಕಾಂಗ್ರೆಸ್‌ನ ಟ್ರಬಲ್‌ ಶೂಟರ್ ಡಿ.ಕೆ. ಶಿವಕುಮಾರ್‌ ಚರ್ಚಿಸಿದರು.

ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ತೆರಳಿದ ಪರಮೇಶ್ವರ್‌, ಶಿವಕುಮಾರ್‌, ದಿನೇಶ್ ಗುಂಡೂರಾವ್‌ ಸಮಾಲೋಚನೆ ನಡೆಸಿದರು.

ಕಾಂಗ್ರೆಸ್‌ನ ಅತೃಪ್ತ ಶಾಸಕರನ್ನು ಕಾವೇರಿಗೆ ಕರೆಸಿಕೊಂಡು ಸಿದ್ದರಾಮಯ್ಯ ಚರ್ಚಿಸಿದರು.

ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸಿದ್ದರಾಮಯ್ಯ ಕೂಡಲೇ ಕಾಂಗ್ರೆಸ್‌ ಹೈ ಕಮಾಂಡ್‌ಗೆ ಮಾಹಿತಿ ನೀಡಿದ್ದಾರೆ.

ಸಿದ್ದರಾಮಯ್ಯ ಮಾಹಿತಿ ಆಲಿಸಿದ ಹೈಕಮಾಂಡ್‌ ಈಗ ಪಕ್ಷ, ಸರಕಾರ ಎರಡನ್ನೂ ಉಳಿಸಿಕೊಳ್ಳಲು ಮುಂದಾಗಿದೆ.

ಅತೃಪ್ತ ಶಾಸಕರನ್ನು ಉಳಿಸಿಕೊಳ್ಳಲು ಸಚಿವ ಸ್ಥಾನದ ಭರವಸೆ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ