ಆ್ಯಪ್ನಗರ

ವಾರಾಂತ್ಯದೊಳಗೆ ಜೆಡಿಎಸ್‌ -ಕಾಂಗ್ರೆಸ್‌ ಸಮನ್ವಯ ಸಮಿತಿ ಸಭೆ

ಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಹೆಚ್ಚುತ್ತಿದ್ದು, ವಿಧಾನಮಂಡಲ ಅಧಿವೇಶನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ವಾರಾಂತ್ಯದೊಳಗೆ ಜೆಡಿಎಸ್‌ ...

Vijaya Karnataka 28 Nov 2018, 5:00 am
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಹೆಚ್ಚುತ್ತಿದ್ದು, ವಿಧಾನಮಂಡಲ ಅಧಿವೇಶನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ವಾರಾಂತ್ಯದೊಳಗೆ ಜೆಡಿಎಸ್‌ -ಕಾಂಗ್ರೆಸ್‌ ಸಮನ್ವಯ ಸಮಿತಿ ಸಭೆ ನಡೆಯುವ ನಿರೀಕ್ಷೆಯಿದೆ.
Vijaya Karnataka Web congress-flag


ಸಿಎಂ ಗಮನಕ್ಕೆ ತಂದು ಸಮನ್ವಯ ಸಮಿತಿಯ ಸಭೆ ಕರೆಯಲು ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು, ಬಹುತೇಕ ಶನಿವಾರ ಅಥವಾ ಭಾನುವಾರ ಸಭೆ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಸಮ್ಮಿಶ್ರ ಸರಕಾರದಲ್ಲಿ ದಿನದಿಂದ ದಿನಕ್ಕೆ ಜೆಡಿಎಸ್‌ ಮೇಲುಗೈ ಸಾಧಿಸುತ್ತಿದ್ದು, ದೊಡ್ಡ ಮಿತ್ರವಾಗಿ ಹೆಚ್ಚು ಶಾಸಕರನ್ನು ಹೊಂದಿರುವ ಕಾಂಗ್ರೆಸ್‌ ಗೌಣವಾಗುತ್ತಿದೆ. ಅಧಿಕಾರಿಗಳ ವರ್ಗಾವಣೆ, ಅಭಿವೃದ್ಧಿ ಕೆಲಸಗಳಲ್ಲೂ ಜೆಡಿಎಸ್‌ ಶಾಸಕರಿಗೆ ಮಹತ್ವ ಸಿಗುತ್ತಿದೆ. ಸಚಿವ ಸಂಪುಟ ವಿಸ್ತರಣೆಯಾಗಿ ಪೂರ್ಣ ಪ್ರಮಾಣದ ಸಂಪುಟ ಅಸ್ತಿತ್ವದಲ್ಲಿದ್ದರೆ ಇಂತಹ ಸ್ಥಿತಿ ಎದುರಾಗುತ್ತಿರಲಿಲ್ಲ ಎಂದು ಕಾಂಗ್ರೆಸ್‌ ಶಾಸಕರು ಸಿದ್ದರಾಮಯ್ಯ ಅವರ ಬಳಿ ಅವಲತ್ತುಕೊಳ್ಳುತ್ತಿದ್ದಾರೆ. ಹೀಗಾಗಿ, ಸಂಪುಟ ವಿಸ್ತರಣೆ ಹಾಗೂ ನಿಗಮ, ಮಂಡಳಿ ನೇಮಕದಂತಹ ಅಧಿಕಾರ ಹಂಚಿಕೆಯ ಅಗತ್ಯ ಕುರಿತು ಚರ್ಚಿಸಲು ಶೀಘ್ರ ಸಮನ್ವಯ ಸಮಿತಿ ಸಭೆ ಕರೆಯಲು ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಪದೇಪದೇ ಮುಂದೂಡಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಶೇಷವಾಗಿ ಕಾಂಗ್ರೆಸ್‌ ಶಾಸಕರಲ್ಲಿ ಅಸಮಾಧಾನ ಮನೆಮಾಡಿದ್ದು, ಬೆಳಗಾವಿ ಅಧಿವೇಶನದಲ್ಲಿ ಸಮನ್ವಯ ಸಾಧಿಸುವುದು ಕಷ್ಟವಾಗಬಹುದು ಎಂಬ ಕಾರಣಕ್ಕೆ ಈ ಸಭೆ ಕರೆಯಲು ನಿರ್ಧರಿಸಲಾಗಿದೆ. ಸಮನ್ವಯ ಸಮಿತಿಯನ್ನು ವಿಸ್ತರಣೆ ಮಾಡುವ ಅನಿವಾರ್ಯತೆಯೂ ಎದುರಾಗಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಅವರಿಗೆ ಸಮಿತಿಯಲ್ಲಿ ಸ್ಥಾನ ಕಲ್ಪಿಸಬೇಕಿದೆ. ಈ ಕಾರಣಕ್ಕೆ ಸಮನ್ವಯ ಸಮಿತಿ ಸಭೆ ಕರೆಯಲು ಅಧ್ಯಕ್ಷರು ಹಿಂದೇಟು ಹಾಕುತ್ತಿದ್ದಾರೆ. ಆದರೂ, ಪಕ್ಷದ ಸಹೋದ್ಯೋಗಿಗಳ ಒತ್ತಡದ ಹಿನ್ನೆಲೆಯಲ್ಲಿ ಸಭೆ ಕರೆಯಲು ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ