ಆ್ಯಪ್ನಗರ

ಇಂದು ಸಂಜೆ ಬಿಎಸ್‌ವೈ ಪ್ರಮಾಣವಚನ ಸ್ವೀಕಾರ: ಬಿಜೆಪಿ, ರಾಜ್ಯಪಾಲರ ಕ್ರಮಕ್ಕೆ ಕಾಂಗ್ರೆಸ್, ಜೆಡಿಎಸ್‌ ಆಕ್ಷೇಪ

4 ನೇ ಬಾರಿ ಸಿಎಂ ಆಗಿ ಇಂದು ಸಂಜೆ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್‌ ಟ್ವೀಟ್‌ ಮೂಲಕ ವಿರೋಧ ವ್ಯಕ್ತಪಡಿಸಿವೆ.

Vijaya Karnataka Web 26 Jul 2019, 11:58 am
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶುಕ್ರವಾರ ಸಂಜೆ ಪ್ರಮಾಣವಚನ ಸ್ವೀಕಾರ ಮಾಡಲು ರಾಜ್ಯಪಾಲರ ಬಳಿ ಒಪ್ಪಿಗೆ ಪಡೆದಿದ್ದಾರೆ. ಇಂದು ಸಂಜೆ 6 ಗಂಟೆ ವೇಳೆಗೆ ನಾಲ್ಕನೇ ಬಾರಿಗೆ ಸಿಎಂ ಆಗಲು ಯಡಿಯೂರಪ್ಪ ಅಂತಿಮ ಸಿದ್ಧತೆಯಲ್ಲಿ ತೊಡಗಿದ್ದಾರೆ. ಆದರೆ, ಬಿಜೆಪಿಯ ಈ ನಡೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.
Vijaya Karnataka Web Kumaraswamy siddaramaiah


ಈ ಸಂಬಂಧ ಶುಕ್ರವಾರ ಬೆಳಗ್ಗೆ ಕರ್ನಾಟಕ ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್, '' ಬಿಜೆಪಿಗೆ ಸಂಖ್ಯಾಬಲ ಇಲ್ಲದ ಕಾರಣ ಯಾವುದೇ ಕಾರಣಕ್ಕೂ ಹಕ್ಕು ಮಂಡನೆಯಾಗಲಿ ಅಥವಾ ಪ್ರಮಾಣ ವಚನವಾಗಿ ಸ್ವೀಕರಿಸಲು ಸಾಧ್ಯವೇ ಇಲ್ಲ. ಬಿಜೆಪಿ ಕರ್ನಾಟಕ ಮತ್ತು ಯಡಿಯೂರಪ್ಪ ಅವರಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೂಲಭೂತ ಹಾಗೂ ಸಾಮಾನ್ಯ ಜ್ಞಾನ ಹೊಂದುವುದು ಅವಶ್ಯಕ'' ಎಂದು ಟೀಕೆ ಮಾಡಿದೆ.

ಅಲ್ಲದೆ, ರಾಜ್ಯದ ಒಟ್ಟು ಸದಸ್ಯ ಬಲದ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್, ಕರ್ನಾಟಕದ ಒಟ್ಟು ಸದಸ್ಯ ಬಲ 224. ಈ ಪೈಕಿ, ಬಿಜೆಪಿಯ ಬಲ 105. ಒಬ್ಬ ಪಕ್ಷೇತರರನ್ನು ಸೇರಿಸಿದರೆ 106. ಸದ್ಯ ಮೂವರನ್ನು ಅನರ್ಹಗೊಳಿಸಿದ ಬಳಿಕ 221 ಸಂಖ್ಯಾಬಲ ಹೊಂದಿದ್ದು, ಈ ಪೈಕಿ ಬಹುಮತ ಸಾಬೀತಿಗೆ 111 ಬೇಕಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಬಿಜೆಪಿ ಹಾಗೂ ಯಡಿಯೂರಪ್ಪ ಹಕ್ಕು ಮಂಡನೆಯಾಗಲಿ ಅಥವಾ ಪ್ರಮಾಣವಚನವಾಗಲಿ ಸ್ವೀಕರಿಸಲು ಸಾಧ್ಯವೇ ಇಲ್ಲ ಎಂದಿದ್ದಾರೆ.


ಅಲ್ಲದೆ, ಈ ಸಂಬಂಧ ಮಾಜಿ ಸಿಎಂ ಹಾಗೂ ಸಿಎಲ್‌ಪಿ ನಾಯಕರಾಗಿದ್ದ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ಸಹ ಟ್ವೀಟ್‌ ಮಾಡಿದ್ದು, ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ಟೀಕೆ ಮಾಡಿದ್ದಾರೆ. ಇದು ಅಸಂವಿಧಾನಿಕ ಕ್ರಮ ಎಂದೂ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ಸಹ ವಿರೋಧ ವ್ಯಕ್ತಪಡಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ