ಆ್ಯಪ್ನಗರ

ಸರ್ಕಾರದ ಪ್ರವಾಹ ಪರಿಹಾರ ಕೇಂದ್ರಗಳು ನಿರಾಶ್ರಿತರ ಪಾಲಿಗೆ ನರಕ! ದಿನೇಶ್ ಗುಂಡೂರಾವ್ ಕಿಡಿ

ರಾಜ್ಯ ಸರ್ಕಾರದ ಪ್ರವಾಹ ಪರಿಹಾರ ಕೇಂದ್ರಗಳು ನಿರಾಶ್ರಿತರ ಪಾಲಿಗೆ ನರಕ ಕೇಂದ್ರಗಳಾಗಿ ಮಾರ್ಪಟ್ಟಿವೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಈ ಕುರಿತಾಗಿ ಅವರು ಟ್ವೀಟ್‌ ಮಾಡಿದ್ದು ಅದರ ವಿವರಗಳು ಹೀಗಿವೆ.

Vijaya Karnataka Web 16 Oct 2020, 11:06 am
ಬೆಂಗಳೂರು: ಉತ್ತರ ಕರ್ನಾಟಕ ಜಿಲ್ಲೆ ಭಾರೀ ಪ್ರವಾಹದಿಂದ ತತ್ತರಿಸಿದೆ. ಪ್ರವಾಹದಿಂದ ಬೀದಿಗೆ ಬಂದ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದರೂ ನಿರಾಶ್ರಿತರ ಪಾಲಿಗಿದು ನರಕ ಕೇಂದ್ರಗಳಾಗಿದೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
Vijaya Karnataka Web dinesh gundu Rao


ಈ ಕುರಿತಾಗಿ ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ದಿನೇಶ್ ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರವಾಹ ಪೀಡಿತ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸರ್ಕಾರ ತೆರೆದಿರುವ ಪರಿಹಾರ ಕೇಂದ್ರಗಳು ನಿರಾಶ್ರಿತರ ಪಾಲಿಗೆ ನರಕದ ಕೇಂದ್ರಗಳಾಗಿವೆ.ಸರಿಯಾದ ವ್ಯವಸ್ಥೆಯಿಲ್ಲದೆ, ಊಟ ಉಪಚಾರವಿಲ್ಲದೆ ನೆರೆ ಸಂತ್ರಸ್ತರು ಪರದಾಡುತ್ತಿರುವ ಬಗ್ಗೆ ವರದಿ ಬರುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಪ್ರವಾಹಕ್ಕೆ ಉತ್ತರ ಕರ್ನಾಟಕ ತತ್ತರ, ಈ ಬಾರಿಯಾದ್ರೂ ಸಿಗುತ್ತಾ ಕೇಂದ್ರದಿಂದ ಸೂಕ್ತ ಪರಿಹಾರ?

ಮನೆ ಮಠ ಇಲ್ಲದೆ ನೊಂದ ಸಂತ್ರಸ್ತರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಪ್ರವಾಹ ಪರಿಸ್ಥಿತಿ ನಿಭಾಯಿಸುವದಕ್ಕಿಂತಲೂ ಉಪ ಚುನಾವಣೆಯೇ ಮುಖ್ಯವಾದಂತಿದೆ. ಪ್ರವಾಹ ಪೀಡಿತರ ನೋವಿಗೆ ಸ್ಪಂದಿಸುವ ಕನಿಷ್ಠ ಕಾಳಜಿಯೂ ಸರ್ಕಾರದಿಂದ ಕಾಣಿಸುತ್ತಿಲ್ಲ ಎಂದಿದ್ದಾರೆ.

ಸರ್ಕಾರ ತೋರುಗಾಣಿಕೆಯ‌ ಪರಿಹಾರ ಕ್ರಮವನ್ನೇ ದೊಡ್ಡ ಸಾಧನೆ ಎಂದು ಬೆನ್ನು ತಟ್ಟಿಕೊಳ್ಳುತ್ತಿದೆ. ಜನರ ಶಾಪ ತಟ್ಟುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಲಿ ಎಂದು ಅವರು ಆಗ್ರಹ ಮಾಡಿದ್ದಾರೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಪ್ರವಾಹ ಸೃಷ್ಟಿಯಾಗಿದೆ. ಪ್ರವಾಹದಿಂದ ನೂರಾರು ಜನರು ಸಂತ್ರಸ್ತರಾಗಿದ್ದಾರೆ. ರಸ್ತೆ, ಸೇತುವೆ ಹಾಗೂ ಕಟ್ಟಡಗಳಿಗೆ ಹಾನಿ ಉಂಟಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ