ಆ್ಯಪ್ನಗರ

ಸರ್ಕಾರದ ಮೇಲೆ ಯಾವ ಭರವಸೆ ಇಟ್ಟು‌ ಮಕ್ಕಳನ್ನು ಶಾಲೆಗೆ ಕಳಿಸಬೇಕು? ದಿನೇಶ್ ಗುಂಡೂರಾವ್ ಪ್ರಶ್ನೆ

ಯಾವ ಭರವಸೆಯನ್ನು ಇಟ್ಟು‌ ಮಕ್ಕಳನ್ನು ಶಾಲೆಗೆ ಕಳಿಸಬೇಕು? ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಏನು ಹೇಳಿದ್ದಾರೆ ಎಂಬ ವಿವರ ಇಲ್ಲಿದೆ.

Vijaya Karnataka Web 29 Sep 2020, 1:07 pm
ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ಯಾವ ಭರವಸೆಯನ್ನು ಇಟ್ಟು‌ ಮಕ್ಕಳನ್ನು ಶಾಲೆಗೆ ಕಳಿಸಬೇಕು? ಹೀಗಂತ ಪ್ರಶ್ನೆ ಮಾಡಿದವರು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್.
Vijaya Karnataka Web dinesh gundu Rao


ಕೋವಿಡ್‌ ಹಿನ್ನೆಲೆಯಲ್ಲಿ ಶಾಲೆಗಳ ಪುನರಾರಂಭ ಕುರಿತಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪೋಷಕರ ಸಲಹೆ ಕೇಳಿದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಶಾಲೆ ಮತ್ತೆ ಆರಂಭಿಸಬೇಕೆಂಬ ಕಳಕಳಿಯನ್ನು ಒಪ್ಪುತ್ತೇನೆ. ಆದರೆ ಸರ್ಕಾರದ ಮೇಲೆ ಯಾವ ಭರವಸೆ ಇಟ್ಟು‌ ಮಕ್ಕಳನ್ನು ಶಾಲೆಗೆ ಕಳಿಸಬೇಕು? ಎಂದು ಪ್ರಶ್ನಿಸಿದ್ದಾರೆ.

ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅಧಿಕಾರ ಸ್ವೀಕಾರ


ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ದೃಢ ಕೇಸ್‌ಗಳಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಹೀಗಿರುವಾಗ ಮಕ್ಕಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡಲು ಸಾಧ್ಯವೆ? ಸಾಮಾಜಿಕ ಅಂತರದ ಬಗ್ಗೆ ಎಷ್ಟೇ ಜಾಗೃತಿ‌ ಮೂಡಿಸಿದರೂ ಮಕ್ಕಳ ಬೌಧಿಕ ಮಟ್ಟ ಪರಿಸ್ಥಿತಿಯ ಗಂಭೀರತೆ ಅರಿಯುವಷ್ಟು ಪ್ರಬುದ್ಧವಲ್ಲ. ಹಾಗಾಗಿ ಮಕ್ಕಳು ಶಾಲೆಗಳಲ್ಲಿ ಸಂಪೂರ್ಣವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ವಿಶ್ವಾಸವಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.


ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಮಕ್ಕಳನ್ನು ಅಪಾಯಕ್ಕೆ ದೂಡಿದಂತಾಗುವುದಿಲ್ಲವೆ? ಶಾಲೆ ಆರಂಭಿಸುವ ಬಗ್ಗೆ ಪೋಷಕರಿಂದ, ಜನಪ್ರತಿನಿಧಿಗಳಿಂದ ನೀವು ಸಲಹೆ‌ ಕೇಳಿದ್ದೀರಾ. ನಮ್ಮ ಮಕ್ಕಳನ್ನು ಶಾಲೆಗೆ ಕಳಿಸಲು ನಿಮ್ಮ ಸರ್ಕಾರ ಕೊಡುವ ಭರವಸೆಯೇನು? ಶಾಲೆ ತೆರೆಯಲು ಸರ್ಕಾರದಿಂದ ತೆಗೆದುಕೊಂಡಿರುವ ಮುಂಜಾಗೃತಾ ಕ್ರಮ ಮತ್ತು ಮಾಡಿಕೊಂಡಿರುವ ಪೂರ್ವ ಸಿದ್ಧತೆಯ ಬಗ್ಗೆ ಮೊದಲು ಮಾಹಿತಿ ಕೊಡಿ ಎಂದು ಟ್ವೀಟ್ ಮೂಲಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ