ಆ್ಯಪ್ನಗರ

ಬಿಎಸ್‌ವೈ ಸೂಚನೆಗಳು ಹೇಳಿಕೆಗಷ್ಟೇ ಸೀಮಿತ, ಡಿಕೆಶಿ ಆಕ್ರೋಶ

ಸಿಎಂ ಬಿ.ಎಸ್ ಯಡಿಯೂರಪ್ಪನವರು ನೀಡುತ್ತಿರುವ ಸೂಚನೆಗಳು ಕೇವಲ ಹೇಳಿಕೆಗಷ್ಟೇ ಸೀಮಿತ ಆದರೆ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದಿಷ್ಟು.

Vijaya Karnataka Web 14 Apr 2020, 5:36 pm
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ಸೂಚನೆಗಳು ಕೇವಲ ಹೇಳಿಕೆಗಷ್ಟೇ ಸೀಮಿತವಾಗಿದ್ದು, ಬದಲಾಗಿ ಅಧಿಕೃತ ಸುತ್ತೋಲೆಯನ್ನು ಹೊರಡಿಸುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.
Vijaya Karnataka Web dk 3


ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಬಿಎಸ್ವೈ ಅವರು ಮಾತನಾಡಿದ್ದನ್ನು ಗಮನಿಸಿದ್ದೇನೆ.ಅಲ್ಪಸಂಖ್ಯಾತರ ವಿರುದ್ಧ ಯಾರೂ ಹೇಳಿಕೆ ನೀಡಬಾರದು ಎಂದು ಹೇಳಿದ್ದರು, ರೈತರಿಗೆ ಒಂದು ರೂಪಾಯಿ ಸಹ ನಷ್ಟವಾಗಲು ಬಿಡುವುದಿಲ್ಲ ಎಂದು ಸಚಿವ ಸಂಪುಟ ಸಭೆಯ ಬಳಿಕ ಹೇಳಿದ್ದರು. ಆದರೆ ಈ ಸಂಬಂಧ ಯಾವುದೇ ಸುತ್ತೋಲೆಯನ್ನೂ ಹೊರಡಿಸಲಿಲ್ಲ, ಅದು ಕೇವಲ ಹೇಳಿಕೆಗಷ್ಟೇ ಸೀಮಿತ ಎಂದರು.

ರಾಯಚೂರು: ಬಾರ್‌ ಬಾಗಿಲು ಮುರಿದು 50 ಸಾವಿರ ರೂ. ಮೌಲ್ಯದ ಮದ್ಯ ಕಳವು

ಇದೀಗ ಕಾರ್ನರ್ ಸೈಟ್ ಗಳನ್ನು ಹರಾಜು ಹಾಕುವುದಾಗಿ ಬಿಎಸ್‌ವೈ ಹೇಳುತ್ತಿದ್ದಾರೆ, ಈ ಬಗ್ಗೆಯೂ ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲ. ಸುತ್ತೋಲೆ ಬಂದ ಬಳಿಕವೇ ಈ ವಿಚಾರವಾಗಿ ಪ್ರತಿಕ್ರಿಯೆ ನೀಡುವೆ. ಏಕೆಂದರೆ ಅಧಿಕಾರಿಗಳು ಸುತ್ತೋಲೆ ಇಲ್ಲದೆ ಕೆಲಸ ಮಾಡುವುದಿಲ್ಲ, ಹಾಗಾಗಿ ನಾನು ಈ ಬಗ್ಗೆ ಮಾತನಾಡುವ ಅಗತ್ಯತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲಾಕ್‌ಡೌನ್‌ನಿಂದಾಗಿ ಹಂಪಿಯಲ್ಲಿ ಸಿಲುಕಿದ ಹಿರಿಯ ನಟಿ ಜಯಂತಿ! ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಪುತ್ರ

ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನ ವಿರುದ್ಧ ಹಗಲಿರುಳು ಎನ್ನದೇ ಶ್ರಮಿಸುತ್ತಿರುವ, ದೇಶದ ವೈದ್ಯರ ಆರೋಗ್ಯ ರಕ್ಷಣೆಗೆ ಉತ್ಕೃಷ್ಟ ಗುಣಮಟ್ಟದ 'ಡಾಕ್ಟರ್ಸ್ ಕಿಟ್', ವೈದ್ಯರು, ದಾದಿಯರು, ಸಫಾಯಿ ಕರ್ಮಚಾರಿಗಳು ಹಾಗೂ ಈ ಎಲ್ಲರ ಕುಟುಂಬಗಳ ಆರೋಗ್ಯ ರಕ್ಷಣೆಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಕ್ರಮಗಳನ್ನು ನೀಡಿಲ್ಲ.

ಯುದ್ಧೋಪಾದಿಯಲ್ಲಿ ಜನರ ರಕ್ಷಣೆಗೆ ನಿಂತಿರುವ, ಪೊಲೀಸರು, ಎಲ್ಲಾ ಪಕ್ಷಗಳ ಕಾರ್ಯಕರ್ತರು, ಸ್ವಯಂ ಸೇವಕರು, ಸಂಘ-ಸಂಸ್ಥೆಗಳು ಸೇರಿದಂತೆ ಎಲ್ಲರಿಗೂ ಆರೋಗ್ಯ ಮತ್ತು ಆರ್ಥಿಕ ಭದ್ರತೆಯ ಕಾರ್ಯಕ್ರಮಗಳನ್ನು ನೀಡುವ ನಿರೀಕ್ಷೆ ಹೊಂದಿದ್ದೆವು. ಈ ಯಾವುದನ್ನೂ ಕಲ್ಪಿಸದ ಪ್ರಧಾನಿಗಳ ಭಾಷಣ ನಮಗೆ ನಿರಾಸೆ ತಂದಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ