ಆ್ಯಪ್ನಗರ

ದೇಶದ್ರೋಹಿಗಳನ್ನು ಸಮರ್ಥಿಸುವ ಪ್ರಶ್ನೆಯೇ ಇಲ್ಲ- ಡಿಕೆಶಿ

ಅಮೂಲ್ಯ ಆಗಲಿ, ಮತ್ಯಾರೇ ಆಗಲಿ ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್‌ ಮಾಡಿದ ಅವರು, ದೇಶದ್ರೋಹಿಗಳನ್ನು ಸಮರ್ಥಿಸುವ ಪ್ರಶ್ನೆ ಇಲ್ಲ ಎಂದಿದ್ದಾರೆ.

Vijaya Karnataka Web 21 Feb 2020, 4:58 pm
ಬೆಂಗಳೂರು: ಅಮೂಲ್ಯ ಆಗಲಿ, ಮತ್ಯಾರೇ ಆಗಲಿ ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹೇಳಿದರು.
Vijaya Karnataka Web congress leader dk shivakumar reaction on pro pakistan slogan
ದೇಶದ್ರೋಹಿಗಳನ್ನು ಸಮರ್ಥಿಸುವ ಪ್ರಶ್ನೆಯೇ ಇಲ್ಲ- ಡಿಕೆಶಿ


ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ ಅಮೂಲ್ಯ ಪ್ರಕರಣವನ್ನು ಖಂಡಿಸಿದ ಡಿಕೆಶಿ, “ಆಕೆ ಪಾಕ್ ಪರ ಘೋಷಣೆ ಹಾಕಿದ ಬಗ್ಗೆ ಹೆಚ್ಚಿನ ತನಿಖೆ ಆಗಬೇಕು. ದೇಶವಿರೋಧಿ ಚಟುವಟಿಕೆಗೆ ಯಾವುದೇ ವೇದಿಕೆ ಆಗಲಿ ದುರ್ಬಳಕೆ ಆಗಬಾರದು. ದೇಶಭಕ್ತಿ, ದೇಶ ಕಟ್ಟುವ ವಿಚಾರದಲ್ಲಿ ಎಲ್ಲ ಭಾರತೀಯರ ಅಭಿಪ್ರಾಯವೂ ಒಂದೇ” ಎಂದು ಟ್ವೀಟ್‌ ಮಾಡಿದ್ದಾರೆ.

ನಾವು ಬಿರಿಯಾನಿ ತಿನ್ನಲು, ಜರತಾರಿ ಸೀರೆ ಕೊಡಲು ಹೋಗಿಲ್ಲ! ಉಗ್ರಪ್ಪ ಕಿಡಿ


ಬೆಂಗಳೂರಿನಲ್ಲಿ ಗುರುವಾರ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟದಲ್ಲಿ ಅಮೂಲ್ಯ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಳು. ಅಮೂಲ್ಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಓವೈಸಿ ಸದೆಬಡಿಯಲು ನಮಗೆ ಐದು ನಿಮಿಷ ಸಾಕು! ಸೋಮಶೇಖರ ರೆಡ್ಡಿ ಕಿಡಿ

ಈ ನಡುವೆ ಅಮೂಲ್ಯ ವಿರುದ್ಧದ ಪ್ರತಿಭಟನೆಯಲ್ಲಿ ಫ್ರೀ ಕಾಶ್ಮೀರ ಫಲಕ ಪ್ರದರ್ಶನ ಮಾಡಿದ ಯುವತಿಯೊಬ್ಬಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ