ಆ್ಯಪ್ನಗರ

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ಕಾಂಗ್ರೆಸ್ ಪ್ರತಿಭಟನೆ, ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ ಸುರೇಶ್ ಆಕ್ರೋಶ

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ಸೋಮವಾರ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ವಿರುದ್ಧ ಪ್ರಕರಣ ದಾಖಲಾಗಿದ್ದಕ್ಕೆ ಸಂಸದ ಡಿಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 30 Jun 2020, 3:29 pm
ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್‌ ದರ ಏರಿಕೆ ವಿರೋಧಿ ಸೋಮವಾರ ಕಾಂಗ್ರೆಸ್ ಬೆಂಗಳೂರಿನಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ನಡೆಸಿದ ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾಕ್ಕಾಗಿ ಸಂಸದ ಡಿಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web dk suresh


ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ಕೇಸ್‌ ದಾಖಲು ಮಾಡಿರುವುದಕ್ಕೆ ಸ್ವಾಗತ ಎಂದು ವ್ಯಂಗ್ಯವಾಡಿದ ಅವರು ಸರ್ಕಾರಕ್ಕೆ ಕಾಂಗ್ರೆಸ್‌ ಬಿಟ್ಟು ಬೇರೆಯವರ ವಿರುದ್ಧ ಕೇಸ್‌ ಹಾಕಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಸಹಕಾರ ಕ್ಷೇತ್ರದಲ್ಲಿ ಅಸಹಕಾರ ಸಲ್ಲ; ಸಚಿವ ಎಸ್ ಟಿ ಸೋಮಶೇಖರ್‌

ಬಿಜೆಪಿ ನಾಯಕರು ಹಾಗೂ ಸಚಿವರ ಖಾಸಗಿ ಕಾರ್ಯಕ್ರಮಗಳ ಬಗ್ಗೆ ಚಕಾರ ಎತ್ತದ ಸರ್ಕಾರ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದಕ್ಕೆ ಕೇಸ್‌ ದಾಖಲು ಮಾಡುವ ಮೂಲಕ ಜನಪರ ಹೋರಾಟಕ್ಕೆ ಅಡ್ಡಿ ಉಂಟು ಮಾಡುತ್ತಿದೆ ಎಂದು ಆರೋಪಿಸಿದರು.

ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರಕ್ಕೆ ವಿರೋಧ ಪಕ್ಷವಾಗಿ ಕಾಂಗ್ರೆಸ್ ಎಲ್ಲಾ ರೀತಿಯ ಸಹಕಾರ ನೀಡಿದೆ. ಆದರೆ ಸರ್ಕಾರಕ್ಕೆ ದಪ್ಪ ಚರ್ಮ ಇದೆ. ಜನರ ಸಮಸ್ಯೆ ಅರ್ಥ ಆಗುವುದಿಲ್ಲ.ರಾಜ್ಯದ ಕೆಲವು ಸಚಿವರ ನಡವಳಿಕೆ ಅಹಸ್ಯ ಮೂಡಿಸುತ್ತದೆ. ಇದನ್ನು ಮುಚ್ಚಿಹಾಕಲು ನಮ್ಮ ಮೇಲೆ ಕೇಸ್ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು ಪಿಎಂ ಭಾಷಣದಲ್ಲಿ 21 ಲಕ್ಷ ಕೋಟಿ ಕ್ಕಿಂತ ಹೆಚ್ಚಿನ ಪರಿಹಾರ ಕೊಡುವ ನಿರೀಕ್ಷೆ ಇದೆ ಎಂದು ವ್ಯಂಗ್ಯವಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ