ಆ್ಯಪ್ನಗರ

ಬೌರಿಂಗ್ ಆಸ್ಪತ್ರೆ ನಿರ್ದೇಶಕರ ರಜಾ ವಿವಾದ, ಮುಂದುವರಿದ ಖಂಡ್ರೆ v/s ಸುಧಾಕರ್‌ ಫೈಟ್

ಬೌರಿಂಗ್ ಆಸ್ಪತ್ರೆ ನಿರ್ದೇಶಕರ ರಜಾ ವಿವಾದ ಕುರಿತಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹಾಗೂ ಸಚಿವ ಡಾ. ಸುಧಾಕರ್‌ ನಡುವಿನ ಟ್ವೀಟ್‌ ವಾರ್ ಮುಂದುವರಿದಿದೆ. ಟ್ವಿಟ್ಟರ್‌ನಲ್ಲಿ ಮತ್ತಷ್ಟು ಪ್ರಶ್ನೆಗಳನ್ನು ಖಂಡ್ರೆ ಕೇಳಿದ್ದಾರೆ.

Vijaya Karnataka Web 10 Jul 2020, 4:33 pm
ಬೆಂಗಳೂರು: ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕ ಡಾ ಮಂಜುನಾಥ್ ಅವರನ್ನು ಆರು ವಾರಗಳ ದಿಢೀರ್‌ ರಜೆಯ ಮೇಲೆ ಕಳುಹಿಸಿರುವ ಸರ್ಕಾರದ ನಡೆ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರದ ಕುರಿತಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸಚಿವ ಡಾ. ಕೆ ಸುಧಾಕರ್ ಅವರನ್ನು ಮತ್ತೆ ತರಾಟೆಗೆ ತೆಗೆದುಕೊಂಡಿದ್ದಾರೆ.
Vijaya Karnataka Web ishwar kandre


ಕೋವಿಡ್ ಸಾಮಗ್ರಿ ಖರೀದಿಯಲ್ಲಿ ಅಕ್ರಮ ಎಸೆಗಿದ ಭ್ರಷ್ಟ ಬಿಜೆಪಿ ಸರ್ಕಾರ ಈಗ ಆಸ್ಪತ್ರೆ ವೈದ್ಯರನ್ನ ಧಿಡೀರ್ ರಜೆ ಮೇಲೆ ಕಳಿಸಿದೆ. ರಾಜ್ಯದ ಪ್ರಮುಖ ಕೋವಿಡ್ ಆಸ್ಪತ್ರೆಯಾದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕ ಡಾ ಮಂಜುನಾಥ್ ರನ್ನ ಆರು ವಾರಗಳ ಕಾಲ ಧಿಡೀರ್ ರಜೆ ಮೇಲೆ ಕಳುಹಿಸಲಾಗಿದೆ ಎಂದು ಗುರುವಾರ ಟ್ವೀಟ್ ಮಾಡಿದ್ದರು.

ಬೌರಿಂಗ್ ಆಸ್ಪತ್ರೆಯ ನಿರ್ದೇಶಕರನ್ನು ರಜೆಗೆ ಕಳುಹಿಸಿದ್ದು ಏಕೆ? ರಾಜ್ಯ ಸರ್ಕಾರಕ್ಕೆ ಈಶ್ವರ್‌ ಖಂಡ್ರೆ ಪ್ರಶ್ನೆ


ಇದಕ್ಕೆ ಸ್ಪಷ್ಟನೆ ನೀಡಿದ್ದ ಸುಧಾಕರ್‌ “ಡಾ.ಮಂಜುನಾಥ್ ಅವರನ್ನು ತಾತ್ಕಾಲಿಕವಾಗಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಡೀನ್ ಹಾಗು ನಿರ್ದೇಶಕರ ಹುದ್ದೆಗೆ ಪ್ರಭಾರದಲ್ಲಿರಿಸಲಾಗಿತ್ತು. ಪ್ರಸ್ತುತ ಅವರು ಸ್ವಂತ ಕೋರಿಕೆ ಮೇರೆಗೆ ರಜೆಯಲ್ಲಿ ತೆರಳಿದ್ದು, ಕೋವಿಡ್ ಪರಿಸ್ಥಿತಿಯಲ್ಲಿ ಸಮರ್ಥ ನಿರ್ವಹಣೆಗಾಗಿ ಪ್ರಾಧ್ಯಾಪಕರಿಗೆ ಪ್ರಭಾರ ವಹಿಸಲಾಗಿದೆ” ಎಂದು ಟ್ವೀಟ್ ಮಾಡಿದ್ದರು. ಅಲ್ಲದೆ ರಾಜ್ಯದ ವಿರೋಧ ಪಕ್ಷದ ಕಾರ್ಯಾಧ್ಯಕ್ಷರಾಗಿ ವಾಸ್ತವಾಂಶ ಅರಿಯದೆ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡುವುದು ಶೋಭೆ ತರುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದರು.


ಇದೀಗ ಮತ್ತೆ ಈಶ್ವರ್‌ ಖಂಡ್ರೆ ಟ್ವೀಟ್‌ ಮಾಡುವ ಮೂಲಕ ಮತ್ತಷ್ಟು ಆರೋಪಗಳನ್ನು ಮಾಡಿದ್ದಾರೆ. “ಸಿ ಅಂಡ್ ಆರ್ ನಿಯಮ ಉಲ್ಲಂಘಿಸಿ, ಎಂಸಿಐ ಕಣ್ತಪ್ಪಿಸಿ, ಹಿರಿತನ‌ ಕಡೆಗಣಿಸಿ ಬೇರೆ ಸಂಸ್ಥೆಯ ವೈದ್ಯರನ್ನೇ ನಿರ್ದೇಶಕರನ್ನಾಗಿಸೋದು ಏಕೆ? ಇದು ಯಾರ "ತುರ್ತು" ಹಿತಾಸಕ್ತಿ??? ಉತ್ತರಿಸಿ ಎಂದು ಆಗ್ರಹಿಸಿದ್ದಾರೆ. ಜೊತೆಗೆ ಬೌರಿಂಗ್ ಆಸ್ಪತ್ರೆ‌ಗೆ ನೂತನ ನಿರ್ದೇಶಕರ ನೇಮಕಾತಿ ಪಾರದರ್ಶವಾಗಿದ್ದಿದ್ದರೆ ಅದೇ ಆಸ್ಪತ್ರೆಯ ವೈದ್ಯರೇ ಆಕ್ಷೇಪ ವ್ಯಕ್ತಪಡಿಸಿ ನಿಮಗೇಕೆ ಪತ್ರ ಬರೆಯುತ್ತಿದ್ದರು? ಎಂದು ಪ್ರಶ್ನಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ