ಬೆಂಗಳೂರು: ಡಿ.ಕೆ ಶಿವಕುಮಾರ್ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದಕ್ಕಾಗಿ ಹಿರಿಯ ಕಾಂಗ್ರೆಸ್ ಮುಖಂಡ ಡಾ. ಜಿ ಪರಮೇಶ್ವರ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಭಾನುವಾರ ಪರಮೇಶ್ವರ್ ಅವರನ್ನು ಡಿಕೆಶಿ ಭೇಟಿಯಾಗಿ ಚರ್ಚೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪರಮೇಶ್ವರ್, ರಾಜ್ಯ ಹಾಗೂ ರಾಷ್ಟ್ರದ ರಾಜಕಾರಣ ಕವಲು ದಾರಿಯಲ್ಲಿದೆ, ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಒಬ್ಬ ಸಮರ್ಥ ನಾಯಕನ ಅಗತ್ಯ ಇದೆ ಎಂದರು.
ಡಿ.ಕೆ ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಸಿದ್ದರಾಮಯ್ಯ ಬಣದ ವಿರೋಧವಿತ್ತು. ಆದರೆ ಪರಮೇಶ್ವರ್ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರು ಡಿಕೆಶಿ ಪರವಾಗಿದ್ದರು. ಹೈಕಮಾಂಡ್ ಜೊತೆಗಿನ ಮಾತುಕತೆಯ ಸಂದರ್ಭದಲ್ಲೂ ಡಿಕೆಶಿ ಪರವಾಗಿ ಬ್ಯಾಟಿಂಗ್ ಮಾಡಿದ್ದರು.
ಬಿಎಸ್ವೈ ಆಡಳಿತದಲ್ಲಿ ಪುತ್ರನ ಹಸ್ತಕ್ಷೇಪ, ಚರ್ಚೆಗೆ ಗ್ರಾಸವಾದ ವಿಜಯೇಂದ್ರ ನಡೆ
ಇದೀಗ ಡಿಕೆಶಿಗೆ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಿದ್ದು ಪರಮೇಶ್ವರ್ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಸಂತಸ ಉಂಟು ಮಾಡಿದೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ವಿಶ್ವಾಸವನ್ನು ಪರಮೇಶ್ವರ್ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರು ವ್ಯಕ್ತಪಡಿಸಿದ್ದಾರೆ.
ಆರ್ಎಸ್ಎಸ್ ಸಭೆಗೆ ತಕರಾರು ಎತ್ತಿದ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಸುರೇಶ್ ಕುಮಾರ್
ನಮ್ಮಲ್ಲಿ ಒಗ್ಗಟ್ಟಿದೆ ಎಂದ ಡಿ.ಕೆ ಶಿವಕುಮಾರ್
ನಾವೆಲ್ಲಾ ಒಗ್ಗಟ್ಟಾಗಿದ್ದೇವೆ, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ನ ಎಲ್ಲಾ ಹಿರಿಯ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ, 28 ಅಸೆಂಬ್ಲಿ ಬ್ಲಾಕ್ಗಳಿಗೆ ಹೋಗಿ ಕಾರ್ಯಕರ್ತರನ್ನು ಭೇಟಿ ಮಾಡುತ್ತೇನೆ ಎಂದರು.
ಕೆಲ ಕಾಂಗ್ರೆಸ್ ಹಿರಿಯ ನಾಯಕರು ಮನೆಯಲ್ಲಿದ್ದಾರೆ, ಅವರನ್ನೆಲ್ಲ ಹುಡುಕಿ ಕೆಲಸಕ್ಕೆ ಕರೆದುಕೊಂಡು ಬರುತ್ತೇನೆ ಎಂದ ಅವರು ಅವರಿಂದಲೇ ಇರುವ ಪಕ್ಷ ಇದು, ಅವರ ಅಗತ್ಯ ಈಗ ಬೇಕಾಗಿದೆ ಎಂದರು.
ಭಾನುವಾರ ಪರಮೇಶ್ವರ್ ಅವರನ್ನು ಡಿಕೆಶಿ ಭೇಟಿಯಾಗಿ ಚರ್ಚೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪರಮೇಶ್ವರ್, ರಾಜ್ಯ ಹಾಗೂ ರಾಷ್ಟ್ರದ ರಾಜಕಾರಣ ಕವಲು ದಾರಿಯಲ್ಲಿದೆ, ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಒಬ್ಬ ಸಮರ್ಥ ನಾಯಕನ ಅಗತ್ಯ ಇದೆ ಎಂದರು.
ಡಿ.ಕೆ ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಸಿದ್ದರಾಮಯ್ಯ ಬಣದ ವಿರೋಧವಿತ್ತು. ಆದರೆ ಪರಮೇಶ್ವರ್ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರು ಡಿಕೆಶಿ ಪರವಾಗಿದ್ದರು. ಹೈಕಮಾಂಡ್ ಜೊತೆಗಿನ ಮಾತುಕತೆಯ ಸಂದರ್ಭದಲ್ಲೂ ಡಿಕೆಶಿ ಪರವಾಗಿ ಬ್ಯಾಟಿಂಗ್ ಮಾಡಿದ್ದರು.
ಬಿಎಸ್ವೈ ಆಡಳಿತದಲ್ಲಿ ಪುತ್ರನ ಹಸ್ತಕ್ಷೇಪ, ಚರ್ಚೆಗೆ ಗ್ರಾಸವಾದ ವಿಜಯೇಂದ್ರ ನಡೆ
ಇದೀಗ ಡಿಕೆಶಿಗೆ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಿದ್ದು ಪರಮೇಶ್ವರ್ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಸಂತಸ ಉಂಟು ಮಾಡಿದೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ವಿಶ್ವಾಸವನ್ನು ಪರಮೇಶ್ವರ್ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರು ವ್ಯಕ್ತಪಡಿಸಿದ್ದಾರೆ.
ಆರ್ಎಸ್ಎಸ್ ಸಭೆಗೆ ತಕರಾರು ಎತ್ತಿದ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಸುರೇಶ್ ಕುಮಾರ್
ನಮ್ಮಲ್ಲಿ ಒಗ್ಗಟ್ಟಿದೆ ಎಂದ ಡಿ.ಕೆ ಶಿವಕುಮಾರ್
ನಾವೆಲ್ಲಾ ಒಗ್ಗಟ್ಟಾಗಿದ್ದೇವೆ, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ನ ಎಲ್ಲಾ ಹಿರಿಯ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ, 28 ಅಸೆಂಬ್ಲಿ ಬ್ಲಾಕ್ಗಳಿಗೆ ಹೋಗಿ ಕಾರ್ಯಕರ್ತರನ್ನು ಭೇಟಿ ಮಾಡುತ್ತೇನೆ ಎಂದರು.
ಕೆಲ ಕಾಂಗ್ರೆಸ್ ಹಿರಿಯ ನಾಯಕರು ಮನೆಯಲ್ಲಿದ್ದಾರೆ, ಅವರನ್ನೆಲ್ಲ ಹುಡುಕಿ ಕೆಲಸಕ್ಕೆ ಕರೆದುಕೊಂಡು ಬರುತ್ತೇನೆ ಎಂದ ಅವರು ಅವರಿಂದಲೇ ಇರುವ ಪಕ್ಷ ಇದು, ಅವರ ಅಗತ್ಯ ಈಗ ಬೇಕಾಗಿದೆ ಎಂದರು.