ಆ್ಯಪ್ನಗರ

ಕರ್ನಾಟಕವನ್ನು ಇಟಲಿ, ನ್ಯೂಯಾರ್ಕ್ ಮಾಡಬೇಡಿ! ಬಿಎಸ್‌ವೈಗೆ ಎಚ್‌ಕೆ ಪಾಟೀಲ್ ಪತ್ರ

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಕೆಲವೊಂದು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಎಚ್‌ಕೆ ಪಾಟೀಲ್‌ ಸಿಎಂ ಬಿಎಸ್‌ವೈಗೆ ಆಗ್ರಹಿಸಿದ್ದಾರೆ.

Vijaya Karnataka Web 7 Jul 2020, 12:50 pm
ಬೆಂಗಳೂರು: ಕರ್ನಾಟಕವನ್ನು ಇಟಲಿ, ನ್ಯೂಯಾರ್ಕ್ ಮಾಡಬೇಡಿ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಎಚ್‌ಕೆ ಪಾಟೀಲ್‌ ಅವರು ಪತ್ರವನ್ನು ಬರೆಯುವ ಮೂಲಕ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದ್ದು ಕೂಡಲೇ ಕೆಲವೊಂದು ತುರ್ತು ಕ್ರಮಗಳನ್ನು ಕೈಗೊಳ್ಳಿ ಎಂದು ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
Vijaya Karnataka Web hk patil


ರಾಜ್ಯದಲ್ಲಿ ಕೊರೊನಾ ಶಂಕಿತರು, ಸೋಂಕಿತರು ಒದ್ದಾಡುವಂತಾಗಿದೆ. ಉತ್ತಮ ಚಿಕಿತ್ಸೆ ಆಂಬುಲೆನ್ಸ್, ಗೌರವಯುತ ಅಂತ್ಯಸಂಸ್ಕಾರಗಳು ಮಾನವ ಹಕ್ಕುಗಳಾಗಿದ್ದು, ಜನರ ಅಪೇಕ್ಷೆ, ನಿರೀಕ್ಷೆಗಳನ್ನು ಗಮನದಲ್ಲಿರಿಸಿ ದೃಢ ಹೆಜ್ಜೆಗಳನ್ನಿಡಿ ಎಂದು ಅವರು ಆಗ್ರಹಿಸಿದ್ದಾರೆ.

ದಿನೇಶ್ ಗುಂಡೂರಾವ್ ಮನೆಯ ನಾಲ್ವರು ಸಿಬ್ಬಂದಿಗೆ ಕೊರೊನಾ, ಕುಟುಂಬಸ್ಥರಿಗೆ ನೆಗೆಟಿವ್

ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮಾಡುತ್ತಿರುವ ಪ್ರಯತ್ನಗಳು ಏನೇನು ಸಾಲದು, ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯುವ, ಗಂಭೀರ ರೋಗಿಗಳ ಕಾಳಜಿಯಲ್ಲಿ ಕೊರತೆ, ಇನ್ನೂ ಅನೇಕ ಕ್ರಮಗಳನ್ನು ಕೈಗೊಳ್ಳುವಲ್ಲಿ ಪ್ರಮಾದಗಳು ನಡೆದಿದೆ ಎಂದು ದೂರಿದ್ದಾರೆ.

ಸರ್ಕಾರದ ದೂರದೃಷ್ಟಿ ಹಾಗೂ ದಿಕ್ಸೂಚಿ ಇಲ್ಲದ ಕ್ರಮಗಳಿಂದಾಗಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಈ ನಿಟ್ಟಿನಲ್ಲಿ ಇತರರ ಸಲಹೆಗಳನ್ನು ಸರ್ಕಾರ ಪರಿಗಣಿಸಬೇಕು ಎಂದಿದ್ದಾರೆ. ರಾಜ್ಯದ ಪ್ರತಿಯೊಬ್ಬ ನಾಗರೀಕನು ಕೊರೊನಾ ವಿಮೆ ವ್ಯಾಪ್ತಿಗೆ ತರಬೇಕು, ಸಿಬ್ಬಂದಿ ಕೊರತೆ ಎದುರಾಗದಂತೆ ತುರ್ತು ಕೋವಿಡ್‌ ನೇಮಕಾತಿ ಮಾಡಬೇಕು, ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳನ್ನು ತಾತ್ಕಾಲಿಕವಾಗಿ ಅಂಬ್ಯುಲೆನ್ಸ್ ಆಗಿ ಪರಿವರ್ತನೆ ಮಾಡಬೇಕು ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಕುಟುಂಬ ಸದಸ್ಯನಿಗೆ ಕೊರೊನಾ ಸೋಂಕು..! ಮನೆ ಮಂದಿ ಮಾತ್ರ ಬಿಂದಾಸ್ ಸುತ್ತಾಟ..!

ಅಲ್ಲದೆ ಸಾಮೂಹಿಕ ತಪಾಸಣೆ, ಹಾಗೂ ಜೀವ ರಕ್ಷಕ ಔಷಧಿಗಳನ್ನು ಸಕಾಲದಲ್ಲಿ ಒದಗಿಸುವ ನಿಟ್ಟಿನಲ್ಲಿ ಕ್ರಮವನ್ನು ಸರ್ಕಾರ ಕೂಡಲೇ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ