ಆ್ಯಪ್ನಗರ

ಕೊರೊನಾ ಲಾಕ್‌ಡೌನ್: ಮದ್ಯ ನಿಷೇಧಕ್ಕೆ ಒತ್ತಾಯಿಸಿ ಬಿಎಸ್‌ವೈಗೆ ಎಚ್‌ಕೆ ಪಾಟೀಲ್ ಪತ್ರ

ಕೊರೊನಾ ಲಾಕ್‌ಡೌನ್ ಸಂದರ್ಭವನ್ನು ಬಳಸಿಕೊಂಡು ರಾಜ್ಯದಲ್ಲಿ ಮದ್ಯಪಾನ ನಿಷೇಧವನ್ನು ಜಾರಿಗೆ ತನ್ನಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಎಚ್‌ಕೆ ಪಾಟೀಲ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

Vijaya Karnataka Web 1 May 2020, 10:55 am
ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಲ್ಲಿದೆ. ಲಾಕ್‌ಡೌನ್ ಪರಿಣಾಮ ಮದ್ಯ ಮಾರಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿದೆ. ಕುಡಿತದ ಚಟ ಹೊಂದಿರುವವರು ಲಾಕ್‌ಡೌನ್‌ನಿಂದಾಗಿ ಮದ್ಯ ಸಿಗದೆ ಕಂಗಾಲಾಗಿದ್ದಾರೆ.ಜೊತೆಗೆ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
Vijaya Karnataka Web alcohal


ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ಮೇ 3 ರ ಬಳಿಕ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ಸರ್ಕಾರಕ್ಕೆ ಆದಾಯದ ಮೂಲವಾಗಿರುವ ಮದ್ಯವನ್ನು ಶೀಘ್ರದಲ್ಲೇ ಆರಂಭ ಮಾಡಲು ಸರ್ಕಾರವೂ ಯೋಚಿಸುತ್ತಿದೆ. ಈ ನಡುವೆ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್‌ಕೆ ಪಾಟೀಲ್ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದು ಮದ್ಯವನ್ನು ಸಂಪೂರ್ಣ ನಿಷೇಧ ಮಾಡಿ ಎಂದು ಒತ್ತಾಯಿಸಿದ್ದಾರೆ.


ಹಸಿರು ವಲಯದಲ್ಲಿ ಮದ್ಯ ಮಾರಾಟಕ್ಕೆ ಸಿಗುತ್ತಾ ಅವಕಾಶ? ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ!

ಕೊರೊನಾ ಲಾಕ್‌ಡೌನ್ ಕಾರಣದಿಂದಾಗಿ ಮದ್ಯ ಮಾರಾಟ ನಿಷೇಧದ ಪರಿಣಾಮ ಪತಿ, ಪತ್ನಿ, ಮಕ್ಕಳು ಹೆಚ್ಚು ಕಾಲ ಕೂಡಿ ಇರುವುದರಿಂದ ಪ್ರೀತಿ, ಪ್ರೇಮ, ಅನುಕಂಪ, ಅನುರಾಗ, ತ್ಯಾಗ ದಯೆ ಮೊದಲಾದ ಜೀವನ ಮೌಲ್ಯವನ್ನು ಸಹಜವಾಗಿ ಪಾಲಿಸಲಾಗುತ್ತಿದೆ.

ಮದ್ಯಪಾನ ಒಂದು ಚಟವಾಗಿ ಮಾಡಿಕೊಂಡವರು ತಾತ್ಕಾಲಿಕವಾಗಿ ತೊಂದರೆ ಅನುಭವಿಸಿದರೂ ಈಗ ಸಾರಾಯಿ ಇಲ್ಲದೆ ಬದುಕುತ್ತಿದ್ದಾರೆ. ಬೀಯರ್, ರಮ್, ಬ್ರಾಂಡಿ ಕುಡಿಯುವ ಹವ್ಯಾಸಗಳಿಗೆ ಕಡಿವಾಣ ಬಿದ್ದಿದೆ. ಕಳ್ಳಬಟ್ಟಿ ಕುಡಿಯುವವರು ಸಹ ಅದಿಲ್ಲದೆ ಬದುಕುತ್ತಿದ್ದಾರೆ. ಅಮಲು ಮುಕ್ತ, ಸುಸಂಸ್ಕೃತ ಸಮಾಜ ನಿರ್ಮಾಣದತ್ತ ನಾವು ಅರಿವಿಲ್ಲದೆ ದಾಪುಗಾಲು ಹಾಕುತ್ತಿದ್ದೇವೆ. ಇದರಿಂದ ಅಪಾರ ಲಾಭವಾಗುತ್ತಿದೆ.

ಲಾಕ್‌ಡೌನ್ ಉಲ್ಲಂಘಿಸಿ ಮದ್ಯ ಮಾರಾಟ: 11 ಅಂಗಡಿ ಲೈಸೆನ್ಸ್‌ ರದ್ದು

ಮದ್ಯಪಾನದಿಂದ ಮೇಲ್ವರ್ಗದಲ್ಲಿ ಆಲಸ್ಯ, ಸರಿ ಮಾರ್ಗದಿಂದ ದೂರ ಸರಿಯುವಿಕೆ, ಅಧಿಕಾರ ದುರುಪಯೋಗ, ಜಗಳ, ಅಶಾಂತಿ ತಲೆದೋರುವಿಕೆ ಜೊತೆಗೆ ಭ್ರಷ್ಟ ವ್ಯವಸ್ಥೆ ನಿರ್ಮಾಣಕ್ಕೆ ಕಾರಣವಾಗುವ ಭಯಂಕರವಾದ ಪರಿಣಾಮ ಬೀರುವ ಮದ್ಯಪಾನ ನಿಷೇಧಿಸುವುದು ಇಂದಿನ ಅತ್ಯಂತ ಅವಷ್ಯಕತೆಯಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಬೊಕ್ಕಸಕ್ಕೆ ಆದಾಯ ತರುವ ಒಂದು ಮೂಲ ಇಲ್ಲದಂತೆ ಮಾಡುವುದು ಜಾಣತನವಾಗದೆಂದು ಅಭಿಪ್ರಾಯ ವ್ಯಕ್ತಪಡಿಸುವವರಿಗೇನು ಕಡಿಮೆ ಇಲ್ಲ ಇದನ್ನು ಬೆಂಬಲಿಸುವವರು ಇದ್ದಾರೆ ಎಂದು ಎಚ್‌ಕೆ ಪಾಟೀಲ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ನಿಟ್ಟಿನಲ್ಲಿ ಲಾಕ್‌ಡೌನ್ ಅವಕಾಶವನ್ನು ಬಳಸಿಕೊಂಡು ರಾಜ್ಯದಲ್ಲಿ ಮದ್ಯಪಾನ ನಿಷೇಧವನ್ನು ಜಾರಿಗೆ ತನ್ನಿ ಎಂದು ಅವರು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ