ಆ್ಯಪ್ನಗರ

ರಾಜ್ಯಸಭಾ ಚುನಾವಣೆ: ದೇವೇಗೌಡರ ಸ್ಪರ್ಧೆಗೆ ಕೆ.ಎಚ್‌ ಮುನಿಯಪ್ಪ ಬೆಂಬಲ

ರಾಜ್ಯಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಸ್ಪರ್ಧೆಗೆ ಮಾಜಿ ಸಂಸದ ಕೆ.ಎಚ್‌ ಮುನಿಯಪ್ಪ ಬೆಂಬಲ ಸೂಚಿಸಿದ್ದಾರೆ. ದೇವೇಗೌಡರ ಸ್ಪರ್ಧೆಗೆ ಕಾಂಗ್ರೆಸ್ ಹೈಕಮಾಂಡ್ ಬೆಂಬಲ ಸೂಚಿಸಬೇಕು ಎಂದಿದ್ದಾರೆ.

Vijaya Karnataka Web 3 Jun 2020, 2:03 pm
ಬೆಂಗಳೂರು: ರಾಜ್ಯಸಭಾ ಚುನಾವಣೆಯ ಕಾವು ತೀವ್ರಗೊಂಡಿದ್ದು ಜೆಡಿಎಸ್‌ನಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹಾಗೂ ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ ಹೆಸರು ಮುಂಚೂನಿಯಲ್ಲಿದೆ. ಸದ್ಯದ ರಾಜಕೀಯ ಸನ್ನಿವೇಶದಲ್ಲಿ ಈ ಇಬ್ಬರು ಹಿರಿಯ ನಾಯಕರನ್ನು ರಾಜ್ಯಸಭೆಗೆ ಆಯ್ಕೆ ಮಾಡಬೇಕು ಎಂಬ ಅಭಿಪ್ರಾಯಗಳು ಕಾಂಗ್ರೆಸ್‌, ಜೆಡಿಎಸ್ ವಲಯದಲ್ಲಿ ಕೇಳಿಬರುತ್ತಿದೆ. ಇದೀಗ ಮಾಜಿ ಸಂಸದ ಕೆ.ಎಚ್‌ ಮುನಿಯಪ್ಪ ಅವರು ಎಚ್‌ಡಿ ದೇವೇಗೌಡರ ಸ್ಪರ್ಧೆಗೆ ಬೆಂಬಲ ಸೂಚಿಸಿದ್ದಾರೆ.
Vijaya Karnataka Web kh muniyappa


ಬೆಂಗಳೂರಿನಲ್ಲಿ ಮಾತನಾಡಿದ ಕೆ.ಎಚ್‌ ಮುನಿಯಪ್ಪ, ಎಚ್‌ಡಿ ದೇವೇಗೌಡರಿಗೆ ನಮ್ಮ ಹೈಕಮಾಂಡ್ ಅವಕಾಶ ಕೊಡಬೇಕು ಎನ್ನುವ ಮೂಲಕ, ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲದ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ಒಂದು ಸೀಟು ಕೋರೆಗೆ ಮತ್ತೊಂದು ಯಾರಿಗೆ?

ಅದೇ ರೀತಿಯಲ್ಲಿ ಮಲ್ಲಿಕಾರ್ಜುನ ಖರ್ಗೆಗೂ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಖರ್ಗೆ ದಲಿತ ಸಮುದಾಯದ ಪ್ರಶ್ನಾತೀತ ನಾಯಕರು. ಅವರಿಗೆ ಟಿಕೆಟ್ ನೀಡೋಕೆ ಯಾರಾದ್ರೂ ವಿರೋಧ ಮಾಡುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಎಚ್‌ಡಿಡಿ ಹಾಗೂ ಖರ್ಗೆ ಇಬ್ಬರು ಹಿರಿಯ ನಾಯಕರು. ಅವರಿಬ್ಬರು ರಾಜ್ಯಸಭೆಯಲ್ಲಿ ಇದ್ದರೆ ಉತ್ತಮ ಎಂದಿದ್ದಾರೆ.

ರಾಜ್ಯ ಸಭಾ ಚುನಾವಣೆಯಲ್ಲಿ ದೇವೇಗೌಡರು ಸ್ಪರ್ಧೆ ಮಾಡಬೇಕು ಎಂಬ ಒತ್ತಡ ಜೆಡಿಎಸ್‌ನಲ್ಲಿ ಕೇಳಿಬರುತ್ತಿದೆ. ಆದರೆ ಇದಕ್ಕೆ ಕಾಂಗ್ರೆಸ್ ಸಹಕಾರದ ಅಗತ್ಯವಿದೆ. ಸದ್ಯ ಯಾವಿದೇ ನಿರ್ಧಾರವನ್ನು ಎರಡು ಪಕ್ಷಗಳು ಮುಖಂಡರು ತೆಗೆದುಕೊಂಡಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ