ಆ್ಯಪ್ನಗರ

ಪ್ರವಾಹ ಸಂಕಷ್ಟ: ಕೇಂದ್ರದಿಂದ ಹೆಚ್ಚಿನ ಪರಿಹಾರ ಮೊತ್ತಕ್ಕೆ ಬಿಜೆಪಿ ಸಂಸದರು ಪ್ರಯತ್ನಿಸಲಿ, ಖರ್ಗೆ ಒತ್ತಾಯ

ರಾಜ್ಯದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಹಾನಿ ಉಂಟಾಗಿದ್ದು ಈ ಬಾರಿಯಾದರೂ ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಮೊತ್ತ ದೊರಕುವಂತೆ ಮಾಡಲು ಬಿಜೆಪಿಯ ಲೋಕಸಭಾ ಹಾಗೂ ರಾಜ್ಯಸಭಾ ಸಂಸದರು ಪ್ರಯತ್ನಿಸಲಿ ಎಂದು ಖರ್ಗೆ ಒತ್ತಾಯಿಸಿದ್ದಾರೆ.

Vijaya Karnataka Web 10 Aug 2020, 9:59 am
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಹಾಗೂ ಪ್ರವಾಹದಿಂದ ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗಿದ್ದು ಈ ಬಾರಿಯಾದರೂ ಕೇಂದ್ರದಿಂದ ಹೆಚ್ಚಿನ ಪರಿಹಾರಕ್ಕೆ ರಾಜ್ಯದ ಬಿಜೆಪಿ ಸಂಸದರು ಪ್ರಯತ್ನ ಪಡಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
Vijaya Karnataka Web mallikarjun karge


ಕಳೆದ ವರ್ಷ ಮಳೆ ಹಾಗೂ ಪ್ರವಾಹದಿಂದ ರಾಜ್ಯದಲ್ಲಿ ಅಂದಾಜು 38,000 ಕೋಟಿ ನಷ್ಟ ಉಂಟಾಗಿದೆ. ರಾಜ್ಯ ಸರ್ಕಾರ ಇಷ್ಟು ಪ್ರಮಾಣದ ನಷ್ಟವನ್ನು ಅಂದಾಜಿಸಿದ್ದರೂ ರಾಜ್ಯಕ್ಕೆ ಕೇಂದ್ರದಿಂದ ಕೇವಲ 1,800 ಕೋಟಿಗಿಂತ ಹೆಚ್ಚಿನ ಪರಿಹಾರ ಮೊತ್ತ ಸಿಗಲಿಲ್ಲ.

ರಸಗೊಬ್ಬರ ಸಿಗದೆ ರೈತರು ಕಂಗಾಲು: ಅಗತ್ಯಕ್ಕಿಂತ ಹೆಚ್ಚು ಪೂರೈಕೆ ಎನ್ನುವ ಸರಕಾರ; ಅಂಗಡಿಗಳಲ್ಲಿ ನೋ ಸ್ಟಾಕ್‌

ಈ ವರ್ಷವೂ ಪ್ರವಾಹದಿಂದ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಿಂದ ಪ್ರತಿನಿಧಿಸುವ ಬಿಜೆಪಿಯ ರಾಜ್ಯ ಸಭಾ ಹಾಗೂ ಲೋಕಸಭಾ ಸದಸ್ಯರು ಈ ಬಾರಿಯಾದರೂ ಹೆಚ್ಚಿನ ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವಂತೆ ಪ್ರಯತ್ನ ಪಡಬೇಕಾಗಿದೆ ಎಂದಿದ್ದಾರೆ.

ರಾಜ್ಯದ ಮಡಿಕೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮಡಿಕೇರಿಯಲ್ಲಿ ಭೂಕುಸಿತದಿಂದ ದೊಡ್ಡ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಅಲ್ಲದೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲೂ ಪ್ರವಾಹದಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

ಪ್ರವಾಹ ಪರಿಸ್ಥಿತಿಯ ಕುರಿತಾಗಿ ಕಂದಾಯ ಸಚಿವ ಆರ್‌. ಅಶೋಕ್‌ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ವಿಡಿಯೋ ಸಂವಾದದಲ್ಲಿ ಭಾಗಿಯಾಗಿ ಮಾಹಿತಿ ನೀಡಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ