ಆ್ಯಪ್ನಗರ

ಮುಂದಿನ ಆರು ತಿಂಗಳು ಮಾತ್ರ ಬಿಎಸ್‌ವೈ ಸಿಎಂ! ಸತೀಶ್‌ ಜಾರಕಿಹೊಳಿ ಭವಿಷ್ಯ

ಬಿಎಸ್‌ ಯಡಿಯೂರಪ್ಪ ಮುಂದಿನ ಆರು ತಿಂಗಳಗಳ ಕಾಲ ಮಾತ್ರ ಸಿಎಂ ಸ್ಥಾನದಲ್ಲಿರುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದಿಷ್ಟು.

Vijaya Karnataka Web 2 Aug 2020, 1:37 pm
ಬೆಂಗಳೂರು: ಬಿಎಸ್‌ ಯಡಿಯೂರಪ್ಪ ಮುಂದಿನ ಆರು ತಿಂಗಳು ಮಾತ್ರ ಸಿಎಂ ಸ್ಥಾನದಲ್ಲಿ ಇರುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ಪಕ್ಷದ ಕೆಲವರೇ ಈ ಬಗ್ಗೆ ನನಗೆ ಮಾಹಿತಿ ನೀಡಿದ್ದಾರೆ ಎಂದರು.
Vijaya Karnataka Web sateesh jarakiholi


ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು ಬಿಎಸ್‌ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಬದಲಾವಣೆ ಮಾಡುವುದು ಬಿಡುವುದು ಅವರ ಪಕ್ಕಕ್ಕೆ ಬಿಟ್ಟ ವಿಚಾರವಾಗಿದೆ. ಬಿಎಸ್‌ವೈ ಸಿಎಂ ಆಗಿ ಇದ್ದರೂ ನಮಗೆ ಲಾಭ ಇಲ್ಲದಿದ್ದರೂ ಲಾಭವೇ ಎಂದರು.

ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸದ ಪದಾಧಿಕಾರಿಗಳ ಪಟ್ಟಿ !

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವಷ್ಟು ದಿನ ನಮಗೆ ಲಾಭವಾಗಲಿದೆ ಎಂದ ಸತೀಶ್ ಜಾರಕಿಹೊಳಿ ನನಗೆ ಬಂದ ಮಾಹಿತಿಯ ಪ್ರಕಾರ ಯಡಿಯೂರಪ್ಪ ಮುಂದಿನ ಆರು ತಿಂಗಳುಗಳ ಕಾಲವಷ್ಟೇ ಸಿಎಂ ಸ್ಥಾನದಲ್ಲಿ ಇರುತ್ತಾರೆ ಎಂದರು.

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ತೀವ್ರಗೊಳ್ಳುತ್ತಿದ್ದು ಬಿಎಸ್‌ವೈ ಸಿಎಂ ಪಟ್ಟ ಕಳೆದುಕೊಳ್ಳುತ್ತಾರೆ ಎಂದೇ ಹೇಳಲಾಗುತ್ತಿದೆ. ಆದರೆ ಮುಂದಿನ ಮೂರು ವರ್ಷಗಳ ಕಾಲ ಬಿಎಸ್‌ವೈ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎನ್ನುತ್ತಿದ್ದಾರೆ ಅವರ ಆಪ್ತರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ