ಆ್ಯಪ್ನಗರ

ಡಿಕೆಶಿ ನೇತೃತ್ವದಲ್ಲಿ ನಡೆದ ವಿಶೇಷ ಪೂಜೆಗೆ ಸತೀಶ್ ಜಾರಕಿಹೊಳಿ ಗೈರು, ಕಾರಣ ಏನು?

ನೂತನ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ವಿಶೇಷ ಪೂಜೆ ಹಾಗೂ ಹೋಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಗೈರಾಗಿದ್ದಾರೆ.ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಪೂಜೆಯಲ್ಲಿ ಭಾಗಿಯಾಗಿದ್ದರು.

Vijaya Karnataka Web 14 Jun 2020, 3:46 pm
ಬೆಂಗಳೂರು: ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಭಾನುವಾರ ನೂತನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಹೋಮ ಹಾಗೂ ವಿಶೇಷ ಪೂಜೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಗೈರಾಗಿದ್ದಾರೆ. ಒಟ್ಟು ಮೂವರು ಕಾರ್ಯಾಧ್ಯಕ್ಷರ ಪೈಕಿ ಸಲೀಮ್ ಅಹಮ್ಮದ್ ಹಾಗೂ ಈಶ್ವರ್ ಖಂಡ್ರೆ ಪೂಜೆಯಲ್ಲಿ ಉಪಸ್ಥಿತರಿದ್ದರು. ಆದರೆ ಸತೀಶ್ ಜಾರಕಿಹೊಳಿ ಗೈರು ಕುತೂಹಲ ಕೆರಳಿಸಿದೆ.
Vijaya Karnataka Web dks pooje


ಸತೀಶ್ ಜಾರಕಿಹೊಳಿ ತಮ್ಮ ಭಿನ್ನ ಸಿದ್ದಾಂತದ ಮೂಲಕ ಗುರುತಿಸಿಕೊಂಡವರು. ಧಾರ್ಮಿಕ ವಿಧಿವಿಧಾನಗಳಲ್ಲಿ ಅಷ್ಟಾಗಿ ಕಾಣಿಸಿಕೊಂಡವರಲ್ಲ. ಮೌಢ್ಯದ ವಿರುದ್ಧ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಸುದ್ದಿಯಾದವು.

ಜುಲೈ 2 ಕ್ಕೆ ಡಿಕೆಶಿ ಪದಗ್ರಹಣ ಫಿಕ್ಸ್? ಹೋಮ ನಡೆದ ಸ್ಥಳದಲ್ಲೇ ಪ್ರತಿಜ್ಞಾವಿಧಿ ಸ್ವೀಕಾರ!

ಬುದ್ಧ, ಅಂಬೇಡ್ಕರ್‌ ತತ್ವಗಳನ್ನು ಹೆಚ್ಚಾಗಿ ಪಾಲನೆ ಮಾಡುವ ರಾಜಕಾರಣಿಯಾಗಿ ಅವರು ಗುರುತಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಅವರು ವೈದಿಕ ವಿಧಿಗಳಾದ ಹೋಮ, ಪೂಜೆಯಲ್ಲಿ ಭಾಗಿಯಾಗಿರದ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಜುಲೈ 2ಕ್ಕೆ ಡಿಕೆ ಶಿವಕುಮಾರ್‌ ಪದಗ್ರಹಣ, 8,000ಕ್ಕೂ ಹೆಚ್ಚು ಕಡೆ ಲೈವ್‌ ವೀಕ್ಷಣೆಗೆ ವ್ಯವಸ್ಥೆ

ಇದರ ಹೊರತಾಗಿ ಬೇರೆ ಏನಾದರೂ ರಾಜಕೀಯ ಕಾರಣ ಇದೆಯಾ ಎಂಬುವುದು ಕೂಡಾ ಕುತೂಹಲ ಕೆರಳಿಸಿದೆ. ಈ ನಡುವೆ ಕೆಪಿಸಿಸಿ ನೂತನ ಕಚೇರಿಯಲ್ಲಿ ನಡೆದ ಹೋಮ ಹಾಗೂ ವಿಶೇಷ ಪೂಜೆಯಲ್ಲಿ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಹೋಮ ಹಾಗೂ ಪೂಜೆ ವಿಚಾರ ಸಾಮಾಜಿಕ ಜಾಲತಾಣಗಳಲ್ಲೂ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಪಕ್ಷದ ಕಚೇರಿಯಲ್ಲಿ ಸಹಜವಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳದ ಕಾಂಗ್ರೆಸ್‌ ಡಿಕೆಶಿ ಸಾರಥ್ಯದಲ್ಲಿ ಭಿನ್ನ ಹಾದಿಯನ್ನು ತುಳಿದಿದೆ ಎಂದು ಚರ್ಚೆ ನಡೆಯುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ