ಆ್ಯಪ್ನಗರ

'ಆಪರೇಷನ್ ಕಮಲ' ಸಿದ್ದರಾಮಯ್ಯ v/s ಸಿಟಿ ರವಿ ಟ್ವೀಟ್ ವಾರ್

ಉಪಚುನಾವಣಾ ಅಖಾಡದಲ್ಲಿ ಆಪರೇಷನ್ ಕಮಲ ಭಾರೀ ಸದ್ದು ಮಾಡುತ್ತಿದ್ದು ಟ್ವಿಟ್ಟರ್‌ನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಸಚಿವ ಸಿಟಿ ರವಿ ನಡುವಿನ ಟ್ವೀಟ್ ವಾರ್‌ಗೆ ಕಾರಣವಾಗಿದೆ.

Vijaya Karnataka Web 27 Nov 2019, 6:10 pm
ಬೆಂಗಳೂರು: ಆಪರೇಷನ್ ಕಮಲ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಸಚಿವ ಸಿಟಿ ರವಿ ನಡುವೆ ಟ್ವಿಟ್ಟರ್‌ನಲ್ಲಿ ವಾರ್ ಶುರುವಾಗಿದೆ. ಉಪಚುನಾವಣಾ ಪ್ರಚಾರದಲ್ಲಿ ಆಪರೇಷನ್ ಕಮಲವನ್ನು ಉಲ್ಲೇಖಿಸಿ ಶಾಸಕರನ್ನು ಹಣ ನೀಡಿ ಬಿಜೆಪಿ ಖರೀದಿ ಮಾಡಿದೆ ಎಂದು ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆ.
Vijaya Karnataka Web congress leader siddaramaiah and c t ravi twitter fight about operation lotus
'ಆಪರೇಷನ್ ಕಮಲ' ಸಿದ್ದರಾಮಯ್ಯ v/s ಸಿಟಿ ರವಿ ಟ್ವೀಟ್ ವಾರ್


ಹದಿನೇಳು ಶಾಸಕರನ್ನು ಬಿಜೆಪಿ ದುಡ್ಡು ಕೊಟ್ಟೇ ಖರೀದಿಸಿದ್ದಕ್ಕೆ ಸಾಂದರ್ಭಿಕ ಸಾಕ್ಷ್ಯಗಳಿವೆ. ಈಗಿನ ಡಿಸಿಎಂ ಅಶ್ವಥನಾರಾಯಣ, ಶಾಸಕರಾದ ವಿಶ್ವನಾಥ್, ಲಿಂಬಾವಳಿ ಮತ್ತು ಯೋಗೇಶ್ವರ್ ಮನೆಗೆ ಬಂದು 5 ಕೋಟಿ ರೂ. ನೀಡಿದ್ದರು ಎಂದು ಮಾಜಿ ಸಚಿವ ಶ್ರೀನಿವಾಸಗೌಡ ವಿಧಾನಸಭೆಯಲ್ಲಿಯೇ ಹೇಳಿಲ್ವೆ? ಇನ್ನು ಏನು ಸಾಕ್ಷಿ ಬೇಕು? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.


ದೇವದುರ್ಗಕ್ಕೆ ಬಿಎಸ್‌ವೈ ಹೋಗಿ ಜೆಡಿಎಸ್ ಶಾಸಕನ ಖರೀದಿಗೆ ಯತ್ನಿಸಿದ್ದು ಅಡಿಯೋ ಟೇಪ್‌ನಲ್ಲಿಲ್ವೇ? ಅದು ತಮ್ಮದೇ ಧ್ವನಿ ಎಂದು ಅವರು ಒಪ್ಪಿಕೊಂಡಿಲ್ವೆ? ಇದರ ಅರ್ಥ ಏನು?ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಯಾವುದು? ಎಂದು ಪ್ರಶ್ನಿಸಿದ್ದರು.

ಉಪಚುನಾವಣೆ ಕ್ಷೇತ್ರ ಪರಿಚಯ: ಹುಣಸೂರು ಅಖಾಡಲ್ಲಿ ವಿಶ್ವನಾಥ್ V/s ಸಿದ್ದರಾಮಯ್ಯ!


ಆದರೆ ಇದಕ್ಕೆ ಟ್ವಿಟ್ಟರ್‌ನಲ್ಲಿ ಉತ್ತರಿಸಿರುವ ಸಿಟಿ ರವಿ "ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಬಿಜೆಪಿ ನಾಯಕರು ನನಗೆ ₹ 5 ಕೋಟಿ ಮುಂಗಡ ನೀಡಿರಲಿಲ್ಲ. ಆಪರೇಷನ್‌ ಕಮಲ ಪ್ರಯತ್ನವನ್ನು ವಿಫಲಗೊಳಿಸಲು ಸುಳ್ಳು ಹೇಳಿದೆ" ಎಂದು ಇದೇ ಶ್ರೀನಿವಾಸಗೌಡ ಉಲ್ಟಾ ಹೊಡೆದಿದ್ದಾರೆ.ಹಗಲು ರಾತ್ರಿ ನಿರಂತರವಾಗಿ ಸುಳ್ಳು ಹೇಳುವ ಸಿದ್ದರಾಮಯ್ಯನವರೇ , ಬಿಜೆಪಿಯ ಬಗ್ಗೆ ಟೀಕೆ ಮಾಡುವ ನೈತಿಕತೆ ನಿಮಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಸಮ್ಮಿಶ್ರ ಸರಕಾರ ಉರುಳಿಸಿದ್ದು ಶಾಸಕರಲ್ಲ, ಸಿದ್ದರಾಮಯ್ಯ: ನಳಿನ್‌ ಕುಮಾರ್‌ ಕಟೀಲ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ