ಆ್ಯಪ್ನಗರ

“ಯಾರ ಮಾನಸಿಕ ಸ್ಥಿತಿ ಸರಿಯಿಲ್ಲ” ಸಿದ್ದು V/S ಡಿವಿಎಸ್ ಜಟಾಪಟಿ

ಸಿದ್ದರಾಮಯ್ಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂಬ ಡಿವಿ ಸದಾನಂದ ಗೌಡರ ಆರೋಪಕ್ಕೆ ಸಿದ್ದರಾಮಯ್ಯ ಟ್ವಿಟ್ಟರ್‌ನಲ್ಲಿ ತಿರುಗೇಟು ನೀಡಿದ್ದು ಡಿವಿಎಸ್ ಬಗ್ಗೆ ಅನುಕಂಪವಿದೆ ಎಂದಿದ್ದಾರೆ. ಅಲ್ಲದೆ ನನ್ನನ್ನು ಅತೀ ಹೆಚ್ಚು ಟೀಕಿಸಿದವರಿಗೆ ಪ್ರಧಾನಿ ಮೋದಿ ಬಹುಮಾನ ನೀಡುವ ಭರವಸೆ ನೀಡಿರಬಹುದು ಎಂದು ವ್ಯಂಗ್ಯವಾಡಿದ್ದಾರೆ.

Vijaya Karnataka Web 22 Nov 2019, 1:09 pm
ಬೆಂಗಳೂರು: ಉಪಚುನಾವಣಾ ಸಮರ ರಂಗೇರುತ್ತಿದ್ದು ರಾಜಕೀಯ ಪಕ್ಷಗಳ ನಾಯಕರ ನಡುವಿನ ವಾಕ್ಸಮರವೂ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ನಡುವೆ ಮಾತಿನ ಚಕಮುಕಿ ತೀವ್ರ ಸ್ವರೂಪ ಪಡೆದುಕೊಂಡಿದ್ದು ಡಿಸಿಎಸ್ ಹೇಳಿಕೆಗೆ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ.
Vijaya Karnataka Web congress leader siddaramaiah and central minister dv sadananda gowda tweet war
“ಯಾರ ಮಾನಸಿಕ ಸ್ಥಿತಿ ಸರಿಯಿಲ್ಲ” ಸಿದ್ದು V/S ಡಿವಿಎಸ್ ಜಟಾಪಟಿ


ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಮಾನಸಿಕ ಸ್ಥಿತಿ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಹೇಳಿಕೆ ನೀಡಿದ್ದರು. ದೇಶದಲ್ಲಿ ಕಾಂಗ್ರೆಸ್ ದಯನೀಯ ಸ್ಥಿತಿ ತಲುಪಿದರೂ ಸಿದ್ದರಾಮಯ್ಯನವರಿಗೆ ಬುದ್ಧಿ ಬಂದಿಲ್ಲ. ಕಾಂಗ್ರೆಸ್ ಹಿರಿಯ ಮುಖಂಡರು ಸಿದ್ದರಾಮಯ್ಯ ಜೊತೆಗಿಲ್ಲ. ಡಿಕೆ ಶಿವಕುಮಾರ್ ಹಾಗೂ ಪರಮೇಶ್ವರ್ ಕೂಡಾ ಅಸಮಧಾನಗೊಂಡಿದ್ದಾರೆ ಎಂದು ಹೇಳಿದ್ದರು.

ಡಿವಿ ಸದಾನಂದ ಗೌಡರ ಹೇಳಿಕೆಗೆ ಟ್ವಿಟ್ಟರ್‌ನಲ್ಲಿ ತಿರುಗೇಟು ನೀಡಿದ ಸಿದ್ದರಾಮಯ್ಯ, ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ, ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಭರವಸೆ ನೀಡಿದ ಹಾಗಿದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ ಎಂದು ಪ್ರಶ್ನಿಸಿದ್ದಾರೆ.

ಉಪ ಚುನಾವಣೆ ಕುರಿತಾದ ಎಚ್ಡಿಕೆ ಹೇಳಿಕೆಗಳನ್ನು ಜೆಡಿಎಸ್‌ ಪಕ್ಷದ ಶಾಸಕರೇ ನಂಬೋ ಸ್ಥಿತಿಯಲ್ಲಿಲ್ಲ!


‘ನಾನು ನೀರು ಕುಡೀತೀನಿ ಅಂದವರಿಗೆ ನೀರು ಕುಡಿಸ್ತೀನಿ’ ಡಿಕೆಶಿ ಗರಂ ಆಗಿದ್ದು ಯಾರ ವಿರುದ್ಧ?

ನನ್ನ ಮಾನಸಿಕ ಸ್ಥಿತಿ ಬಗ್ಗೆ ಬಡಬಡಿಸುತ್ತಿರುವ ಡಿವಿ ಸದಾನಂದ ಗೌಡರ ಬಗ್ಗೆ ಅನುಕಂಪ ಇದೆ. ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೆ, ಕಾನೂನು, ಅಂಕಿ ಅಂಶ ಹೀಗೆ ಎಲ್ಲ ಕಡೆಗಳಲ್ಲಿಯೂ ತಿರಸ್ಕೃತಗೊಂಡ ಗೌಡರು ಈಗ ಪಕ್ಷದಲ್ಲಿ 'ಗೊಬ್ಬರ'ವಾಗಿ ಹೋಗಿದ್ದಾರೆ. ಈ ಹತಾಶೆ ಅವರಿಂದ ಇಂತಹ ಹೇಳಿಕೆಗಳನ್ನು ಹೊರಡಿಸುತ್ತಿದೆ.

ಉಪಚುನಾವಣೆ ಕ್ಷೇತ್ರ ಪರಿಚಯ : 'ಹೊಸಕೋಟೆ ಕದನ' ದಲ್ಲಿ ಗೆಲ್ಲೋರು ಯಾರು?


ಏಕಾಂಗಿಯಾಗಿ ಹೋಗಿರುವ ಸದಾನಂದ ಗೌಡ ಅವರನ್ನು ಬಿಜೆಪಿಯಲ್ಲಿ ಯಾರೂ ಗಂಭೀರವಾಗಿ ಸ್ವೀಕರಿಸುತ್ತಿಲ್ಲ. ಇದಕ್ಕಾಗಿ ಅವರು ತಮ್ಮ ಜೋಕುಗಳಿಗೆ ತಾವೇ ನಕ್ಕು ರಾಜ್ಯದ ಜನರಿಗೆ ಮನರಂಜನೆ ನೀಡುತ್ತಾ ಇರುತ್ತಾರೆ ಎಂದು ಕಿಡಿಕಾರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ