ಆ್ಯಪ್ನಗರ

ಸಿದ್ದು, ಡಿಕೆಶಿ ದಿಲ್ಲಿ ಭೇಟಿ ಕುತೂಹಲ..! ಸೋನಿಯಾ, ರಾಹುಲ್‌ ಜೊತೆಗಿನ ಮೀಟಿಂಗ್ ಅಜೆಂಡಾ ಏನು..?

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಬೆಳವಣಿಗೆ, ಪದಾಧಿಕಾರಿಗಳ ನೇಮಕ ಹಾಗೂ ಮುಂದಿನ ತಂತ್ರಗಾರಿಕೆಗಳ ಬಗ್ಗೆ ಸಿದ್ದರಾಮಯ್ಯ ದೆಹಲಿಯಲ್ಲಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಜೊತೆಗೆ ಚರ್ಚೆ ನಡೆಸಲಿದ್ದಾರೆ.

Vijaya Karnataka Web 19 Jul 2021, 6:55 pm

ಹೈಲೈಟ್ಸ್‌:

  • ರಾಷ್ಟ್ರೀಯ ನಾಯಕರೊಂದಿಗೆ ನಡೆಸಲಿದ್ದಾರೆ ಚರ್ಚೆ
  • ಭವಿಷ್ಯದ ಸಿಎಂ ಯಾರು ಎಂಬ ಪ್ರಶ್ನೆ ಸೇರಿದಂತೆ ಹಲವು ಕುತೂಹಲ
  • ಸಿದ್ದುಗೆ ಡಿಕೆಶಿ ಹಾಗೂ ಜಮೀರ್ ಕೂಡಾ ಸಾಥ್
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Siddaramaiah and DK Shivakumar
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ದೆಹಲಿಗೆ ತೆರಳಿದರು. ಸೋಮವಾರ ಸಂಜೆ ದೆಹಲಿ ಪ್ರವಾಸ ಕೈಗೊಂಡ ಅವರು ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ತಲೆದೋರಿರುವ ಭವಿಷ್ಯದ ಸಿಎಂ ಯಾರು ಎಂಬ ಪ್ರಶ್ನೆ ಹಾಗೂ ಇನ್ನಿತರ ಗೊಂದಲಗಳ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸ ಕುತೂಹಲ ಕೆರಳಿಸಿದೆ. ಸಿದ್ದರಾಮಯ್ಯ ಜೊತೆಗೆ ಡಿಕೆಶಿ ಕೂಡಾ ದೆಹಲಿ ಪ್ರವಾಸಕ್ಕೆ ತೆರಳಲಿದ್ದಾರೆ. ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸಕ್ಕೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಸಾಥ್ ನೀಡಿದರು.

ಕಾಂಗ್ರೆಸ್ ಆಂತರಿಕ ಭಿನ್ನಮತ: ಶುಕ್ರವಾರ ಡಿಕೆಶಿ ಹಾಗೂ ಸಿದ್ದರಾಮಯ್ಯ ನಡೆಸಲಿದ್ದಾರೆ ಚರ್ಚೆ
ದೆಹಲಿ ಪ್ರವಾಸದ ಬಗ್ಗೆ ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ನನ್ನನ್ನು ವರಿಷ್ಠರು ಯಾಕಾಗಿ ದೆಹಲಿಗೆ ಕರೆದಿದ್ದಾರೆ ಎಂದು ನಿಮಗೆ ಹೇಳಕ್ಕೆ ಆಗುತ್ತಾ..? ನನಗೂ ಅದರ ಬಗ್ಗೆ ಗೊತ್ತಿಲ್ಲ. ರಾಹುಲ್ ಗಾಂಧಿ ನಮ್ಮ ವರಿಷ್ಠರು ಕರೆದಿದ್ದಾರೆ, ಹೋಗುತ್ತಿದ್ದೇನೆ ಎಂದಿದ್ದಾರೆ.

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ..! ಮೈಲಾರ ಲಿಂಗೇಶ್ವರ ಗೊರವಯ್ಯರ ಭವಿಷ್ಯ..!
ಪದಾಧಿಕಾರಿಗಳ ನೇಮಕ ವಿಚಾರಕ್ಕೆ ಕರೆದಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಿಮಗೆ ಹೇಳಿದ್ದಾರಾ..? ಯಾವ ವಿಚಾರಕ್ಕೆ ಕರೆದಿದ್ದಾರೆ ಅನ್ನೋದು ಯಾರಿಗೆ ಗೊತ್ತು..? ಸುಮ್ಮನೆ ಊಹಾಪೋಹ ಮಾಡಬೇಡಿ ಎಂದರು. ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಬೆಳವಣಿಗೆ, ಪದಾಧಿಕಾರಿಗಳ ನೇಮಕ ಹಾಗೂ ಮುಂದಿನ ತಂತ್ರಗಾರಿಕೆಗಳ ಬಗ್ಗೆ ಸಿದ್ದರಾಮಯ್ಯ ದೆಹಲಿಯಲ್ಲಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಜೊತೆಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ