ಆ್ಯಪ್ನಗರ

ಲಾಕ್‌ಡೌನ್ ಸಂಕಷ್ಟ: ಸಾಂಪ್ರದಾಯಿಕ ವೃತ್ತಿ ಅವಲಂಬಿತರ ಸಭೆ ಕರೆದ ಸಿದ್ದರಾಮಯ್ಯ

ರಾಜ್ಯದಲ್ಲಿ ಕೊರೊನಾ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಸಾಂಪ್ರದಾಯಿಕ ವೃತ್ತಿ ಅವಲಂಬಿತ ವರ್ಗಗಳು ಸಂಕಷ್ಟದಲ್ಲಿವೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ವರ್ಗಗಳ ಸಂಘಟನೆಗಳ ಮುಖಂಡರ ಜೊತೆಗೆ ಮಂಗಳವಾರ ಸಭೆ ನಡೆಸಲಿದ್ದಾರೆ.

Vijaya Karnataka Web 27 Apr 2020, 3:57 pm
ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಸಾಂಪ್ರದಾಯಿಕ ವೃತ್ತಿ ಅವಲಂಬಿತ ವರ್ಗಗಳ ಜೊತೆಗೆ ಮಾತುಕತೆ ನಡೆಸುವ ನಿಟ್ಟಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಸಭೆಯನ್ನು ಕರೆದಿದ್ದಾರೆ.
Vijaya Karnataka Web siddaramayha


ವಿಧಾನಸಭೆಯಲ್ಲಿರುವ ಸಿದ್ದರಾಮಯ್ಯ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ. ರಾಜ್ಯದಲ್ಲಿ ಲಾಕ್‍ಡೌನ್ ಹೇರಿ ಒಂದು ತಿಂಗಳಿಗಿಂತ ಹೆಚ್ಚು ದಿನಗಳಾಗುತ್ತಿದ್ದು, ನಿತ್ಯದ ದುಡಿಮೆಯನ್ನು ಆಧರಿಸಿ ಬದುಕುತ್ತಿದ್ದ ಹಾಗೂ ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸಿದವರ ಜೀವನ ದುಸ್ತರವಾಗಿದೆ.

ಈ ಕುರಿತಾಗಿ ಚರ್ಚೆ ನಡೆಸಲು ಸವಿತಾ ಸಮಾಜದವರು, ಮಡಿವಾಳರು, ನೇಕಾರರು, ಕುಂಬಾರರು, ಕಮ್ಮಾರರು, ಚಮ್ಮಾರರು ಹಾಗೂ ಅಟೋ, ಟ್ಯಾಕ್ಸಿ ಚಾಲಕರು ಮತ್ತು ಬೀದಿ ಬದಿಯ ವ್ಯಾಪಾರಿಗಳ ಸಂಘಟನೆಯ ಮುಖಂಡರ ಸಭೆ ಕರೆದಿದ್ದಾರೆ.

ನರೇಗಾ ವಿವಾದ: ಬಹಿರಂಗ ಚರ್ಚೆಗೆ ಬರಲು ಈಶ್ವರಪ್ಪಗೆ ಡಿಕೆಶಿ ಸವಾಲು

ಈ ವರ್ಗದವರು ಎದುರಿಸುತ್ತಿರುವ ಸಮಸ್ಯೆಗಳು, ಅವರಿಗೆ ನೆರವು ಒದಗಿಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಲಾಕ್‌ಡೌನ್ ಮುಂದುವರಿದರೆ ಈ ವೃತ್ತಿಯನ್ನು ಮಾಡುವ ವರ್ಗಕ್ಕೆ ಮತ್ತಷ್ಟು ಸಮಸ್ಯೆಯಾಗಲಿದೆ.

ಮೆಕ್ಕೆಜೋಳಗೆ ಕೊರೊನಾ ಗ್ರಹಣ: ಬೆಳೆ ನಂಬಿಕೊಂಡಿದ್ದ ರೈತ ಹೈರಾಣ

ಈಗಾಗಲೇ ಕಾಂಗ್ರೆಸ್ ನಿಯೋಗ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೊರೊನಾ ಲಾಕ್‌ಡೌನ್‌ನಿಂದಾಗಿ ಜನಸಾಮಾನ್ಯರು ಹಾಗೂ ವಿವಿಧ ವರ್ಗದವರು ಎದುರಿಸುತ್ತಿರುವ ಸಮಸ್ಯೆಗಳನ್ನು ಅವರ ಗಮನಕ್ಕೆ ತಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ