ಆ್ಯಪ್ನಗರ

ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ- ಆಸ್ಪತ್ರೆಯಿಂದ ಡಿಸ್ಚಾರ್ಜ್‌ಗೊಂಡ ಸಿದ್ದರಾಮಯ್ಯ ಹೇಳಿಕೆ

ಹೃದಯ ಸಂಬಂಧಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಭಾನುವಾರ ಡಿಸ್ಚಾರ್ಜ್‌ ಆಗಿದ್ದಾರೆ. ವೈದ್ಯರು 10 ದಿನಗಳ ಕಾಲ ವಿಶ್ರಾಂತಿ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ.

Vijaya Karnataka Web 15 Dec 2019, 11:07 am
ಬೆಂಗಳೂರು: ರಾಜಕಾರಣದಲ್ಲಿ ಯಾರು ಶತ್ರುಗಳಲ್ಲಿ, ಯಾರೂ ಶಾಶ್ವತ ಮಿತ್ರರೂ ಅಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹೃದಯ ಸಂಬಂಧಿ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಐದು ದಿನಗಳ ಕಾಲ ಚಿಕಿತ್ಸೆಯ ಬಳಿಕ ಭಾನುವಾರ ಡಿಸ್ಚಾರ್ಜ್‌ ಆದರು.
Vijaya Karnataka Web congress leader siddaramaiah discharge form hospital
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ- ಆಸ್ಪತ್ರೆಯಿಂದ ಡಿಸ್ಚಾರ್ಜ್‌ಗೊಂಡ ಸಿದ್ದರಾಮಯ್ಯ ಹೇಳಿಕೆ


ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ನಾನು ಇವತ್ತು ಆಸ್ಪತ್ರೆಯಿಂದ ಬಿಡುಗಡೆ ಆಗ್ತಿದ್ದೇನೆ. ಚಿಕಿತ್ಸೆ ನೀಡಿದ ಡಾ.ರಮೇಶ್, ಡಾ.ನಾರಾಯಣಸ್ವಾಮಿಗೆ ಧನ್ಯವಾದ ಸಲ್ಲಿಸುತ್ತೇನೆ. ಒಂಬತ್ತು ವರ್ಷಗಳ ಹಿಂದೆ ಹೃದಯದ ಎರಡು ರಕ್ತನಾಳಗಳು ಬ್ಲಾಕ್ ಆಗಿದ್ದವು. ದೆಹಲಿಯ ಎಸ್ಕಾರ್ಟ್ ಆಸ್ಪತ್ರೆಯಲ್ಲಿ ಸ್ಟಂಟ್ ಅಳವಡಿಸಲಾಗಿತ್ತು. ಇದೀಗ ಮತ್ತೆ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದೇನೆ” ಎಂದರು

ಆಸ್ಪತ್ರೆಯಿಂದ ಬಿಡುಗಡೆಗೊಂಡರು ಒಂದು ವಾರ ವಿಶ್ರಾಂತಿ ಪಡೆದುಕೊಳ್ಳುವಂತೆ ಸಿದ್ದರಾಮಯ್ಯ ಅವರಿಗೆ ವೈದ್ಯರು ಸಲಹೆ ನೀಡಿದ್ದಾರೆ. ಈ ಕಾರಣಕ್ಕಾಗಿ ಒಂದು ವಾರ ಯಾವುದೇ ರಾಜಕೀಯ ಚಟಿವಟಿಕೆಗಳಲ್ಲಿ ಭಾಗಿಯಾಗದಿರಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಸಿದ್ದರಾಮಯ್ಯ ಡಿಸ್ಚಾರ್ಜ್ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆವರಣದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕರ್ತರು ಸೇರಿದ್ದರು. ಕಾರು ಹತ್ತಿ ಹೋರಡುವಾಗ ಹೌದು ಹುಲಿಯಾ ಎಂದು ಜೈಕಾರ ಕೂಗಿದರು.

ಸಿದ್ದುವನ್ನು ಭೇಟಿಯಾದ ರಮೇಶ್ ಜಾರಕಿಹೊಳಿ - ಕುತೂಹಲ ಕೆರಳಿಸಿದ ರಹಸ್ಯ ಮಾತುಕತೆ

ಡಿಸೆಂಬರ್ 10 ರಂದು ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು.ತಪಾಸಣೆಯ ವೇಳೆ ಹೃದಯಕ್ಕೆ ರಕ್ತ ಪರಿಚಲನೆ ಸರಿಯಾಗಿಲ್ಲ ಎಂಬ ಕಾರಣಕ್ಕಾಗಿ ಅಂಜಿಯೋಗ್ರಾಂ ಚಿಕಿತ್ಸೆಗೆ ಒಳಗಾಗುವಂತೆ ವೈದ್ಯರು ಸೂಚನೆ ನೀಡಿದ್ದರು. ವೈದ್ಯರ ಸಲಹೆ ಮೇರೆಗೆ ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸೆಗೆ ಸಿದ್ದರಾಮಯ್ಯ ಒಳಗಾಗಿದ್ದರು. ಎರಡು ದಿನಗಳ ಕಾಲ ತೀವ್ರನಿಗಾ ಘಟಕದಲ್ಲಿದ್ದ ಅವರನ್ನು ಬಳಿಕ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ