ಆ್ಯಪ್ನಗರ

ಕಾಂಗ್ರೆಸ್‌ಗೆ‌ ಸಿಕ್ತು ಪ್ರವಾಹ ಅಸ್ತ್ರ! ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಪ್ಲ್ಯಾನ್

ಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯತೆ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕ ಪ್ರಬಲ ಅಸ್ತ್ರವಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸತತ ಪ್ರವಾಸ ಕೈಗೊಳ್ಳುವ ಮೂಲಕ ಸರ್ಕಾರ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ.

Vijaya Karnataka Web 26 Oct 2020, 12:55 pm
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ಮುಂದಾಗಿದೆ. ಈ ಬಾರಿ ಪ್ರವಾಹ ಎಂಬ ಪ್ರಬಲ ಅಸ್ತ್ರ ಕಾಂಗ್ರೆಸ್‌ಗೆ ಸಿಕ್ಕಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಬಂದಿದ್ದು ಸಾವಿರಾರು ಜನರು ಸಂತ್ರಸ್ತರಾಗಿದ್ದಾರೆ. ಪ್ರವಾಹ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ಎಡವಿದ್ದು ವಿರೋಧ ಪಕ್ಷವಾದ ಕಾಂಗ್ರೆಸ್ ಈ ವಿಚಾರವನ್ನೇ ಇಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ಮುಂದಾಗಿದೆ.
Vijaya Karnataka Web flood


ಇದರ ಆರಂಭಿಕ ಭಾಗವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸರಡಗಿ ಗ್ರಾಮದಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ ಹತ್ತಿ ಬೆಳೆಯನ್ನು ಸಿದ್ದರಾಮಯ್ಯ ಅವರು ವೀಕ್ಷಿಸಿ ರೈತರ ಜೊತೆ ಸಮಾಲೋಚನೆ ನಡೆಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಚರ್ಚೆ: ಸಿದ್ದು, ಡಿಕೆಶಿಗೆ ಹೈಕಮಾಂಡ್‌ ಕೊಟ್ಟ ಸಂದೇಶವೇನು?

ಭಾನುವಾರವೂ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಚರಿಸಿ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಮುಡಬಿ, ಕಲಖೋರಾ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ್ದಾರೆ. ಪ್ರವಾಹದಿಂದ ಬೆಳೆ ಕಳೆದುಕೊಂಡಿರುವ ರೈತರೊಂದಿಗೆ ಮಾತುಕತೆ ನಡೆಸಿ ಅವರ ಅಹವಾಲು ಆಲಿಸಿದ್ದಾರೆ.

ತಮ್ಮ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ಸರ್ಕಾರ ಪ್ರವಾಹ ನಿಯಂತ್ರಣ ಮಾಡುವಲ್ಲಿ ಎಡವಿದೆ ಎಂಬುವುದು ಕಾಂಗ್ರೆಸ್ ಆರೋಪವಾಗಿದೆ.

ಆಯುಧ ಪೂಜೆಯಂದು ಸಂವಿಧಾನ ಗ್ರಂಥಕ್ಕೂ ಪೂಜೆ, ಸೌಮ್ಯ ರೆಡ್ಡಿ ನಡೆಗೆ ಮಾಳವಿಕಾ ಅವಿನಾಶ್ ಆಕ್ಷೇಪ!

ಪ್ರವಾಹದಿಂದಾಗಿ ಸುಮಾರು ಆರುಕಾಲು ಲಕ್ಷ ಎಕರೆಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಕೇವಲ ಬೆಳೆಹಾನಿಯಿಂದಲೇ 1,500 ಕೋಟಿ ನಷ್ಟವಾಗಿದೆ.,1700 ಮನೆಗಳು ಬಿದ್ದಿವೆಯಂತೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇಲ್ಲಿಯ ವರೆಗೆ ಪೈಸೆ ಪರಿಹಾರವನ್ನೂ ಕೊಟ್ಟಿಲ್ಲ ಎಂಬುವುದು ಕಾಂಗ್ರೆಸ್ ಆರೋಪವಾಗಿದೆ.

ರೈತರ ಬೆಳೆನಷ್ಟಕ್ಕೆ ಪರಿಹಾರ ನೀಡುವಾಗ ಕೇಂದ್ರಸರ್ಕಾರದ ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಿದರೆ ರೈತರ ಕಷ್ಟ ದೂರವಾಗಲಾರದು.ನಾನು ಒಂದು ಹೆಕ್ಟೇರ್ ಗೆ 25,000 ಪರಿಹಾರ ಕೊಟ್ಟಿದ್ದೆ.ಕಳೆದ ವರ್ಷದ ಪ್ರವಾಹದಿಂದಾಗಿರುವ ಹಾನಿಗೆ ಇಲ್ಲಿಯ ವರೆಗೆ ಪರಿಹಾರ ನೀಡಿಲ್ಲ ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರವಾಹ ವಿಚಾರವನ್ನೇ ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನವನ್ನು ಕಾಂಗ್ರೆಸ್ ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳುವ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ. ಅಷ್ಟೇ ಅಲ್ಲದೆ ವಿಶೇಷ ಅಧಿವೇಶನಕ್ಕೂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ಪ್ರವಾಹ ಪರಿಹಾರ ಹಾಗೂ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವಿಫಲತೆ ಕಾಂಗ್ರೆಸ್ ಪಾಲಿಗೆ ಸಿಕ್ಕ ದೊಡ್ಡ ಅಸ್ತ್ರವಾಗಿದೆ. ಮುಂದಿನ ದಿನಗಳಲ್ಲಿ ಈ ಅಸ್ತ್ರವನ್ನು ಕಾಂಗ್ರೆಸ್ ಹೇಗೆ ಉಪಯೋಗ ಮಾಡುತ್ತೆ ಎಂಬುವುದು ಸದ್ಯದ ಕುತೂಹಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ