ಬೆಂಗಳೂರು: ಕೊರೊನಾ ಚಿಕಿತ್ಸಾ ಸಲಕರಣೆಗಳ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಸಿದ್ದರಾಮಯ್ಯ ಆರೋಪವನ್ನು ನಿರಾಕರಿಸಿರುವ ಆರೋಗ್ಯ ಸಚಿವ ಶ್ರೀರಾಮುಲು ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದರು. ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಬಳ್ಳಾರಿಯ ನಿಮ್ಮ ಅಣ್ತಮ್ಮಂದಿರು ಇದೇ ರೀತಿ ಸವಾಲು ಹಾಕಿ ಕೊನೆಗೆ ದಾಖಲೆ ಬಿಡುಗಡೆ ಮಾಡಿದಾಗ ಜೈಲು ಸೇರಿದ್ದರು ಎಂದು ತಿರುಗೇಟು ನೀಡಿದ್ದಾರೆ.
ಪೊಲೀಸರಲ್ಲಿ ಹೆಚ್ಚುತ್ತಿರುವ ಕೊರೊನಾ: ತಪಾಸಣೆಗೆ ಸಮರ್ಪಕ ವ್ಯವಸ್ಥೆ ಮಾಡದ ಸರಕಾರ, ಐದಾರು ದಿನಗಳ ಬಳಿಕ ವರದಿ
ಕೊರೊನಾ ಉಪಕರಣಗಳ ಖರೀದಿಯಲ್ಲಿ ಸುಮಾರು 2000 ಕೋಟಿಗೂ ಮೀರಿ ಅವ್ಯವಹಾರ ನಡೆದಿದೆ ಎಂದು ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ್ದರು. ಆದರೆ ಸರ್ಕಾರ ಇದನ್ನು ನಿರಾಕರಿಸಿದೆ. ಶ್ರೀರಾಮುಲು ಜೊತೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಕೂಡಾ ಆರೋಪ ನಿರಾಕರಣೆ ಮಾಡಿದ್ದಾರೆ.
ಆದರೆ ತನ್ನ ಆರೋಪವನ್ನು ಸಮರ್ಥನೆ ಮಾಡಿರುವ ಸಿದ್ದರಾಮಯ್ಯ ಶ್ರೀರಾಮುಲು ವಿರುದ್ಧ ಹರಿಹಾಯ್ದಿದ್ದಾರೆ. “ಲೂಟಿ ಹೊಡೆದಿದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದು ಸಚಿವ ಶ್ರೀರಾಮುಲು ಸವಾಲು ಹಾಕಿದ್ದಾರೆ. ರಾಮುಲು ಅವರೇ, ಬಳ್ಳಾರಿಯ ನಿಮ್ಮ ಅಣ್ತಮ್ಮಂದಿರು ಇದೇ ರೀತಿ ಸವಾಲು ಹಾಕಿ ಕೊನೆಗೆ ದಾಖಲೆ ಬಿಡುಗಡೆ ಮಾಡಿದಾಗ ಜೈಲು ಸೇರಿದ್ದರು.ಸವಾಲೆಸೆಯುವಾಗ ಇದು ನಿಮ್ಮ ಗಮನದಲ್ಲಿರಲಿ” ಎಂದು ಟ್ವೀಟ್ ಮಾಡಿದ್ದಾರೆ.
ಬಳ್ಳಾರಿ ಘಟನೆ ಅಮಾನವೀಯ, ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ
ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ತ್ರಿಮೂರ್ತಿ ಸಚಿವರನ್ನು ನೇಮಿಸಿರುವುದು ಸೋಂಕಿತರಿಗೆ ನೆರವಾಗಲಿಕ್ಕಾ? ಇಲ್ಲವೇ, ಭಿನ್ನಾಭಿಪ್ರಾಯವನ್ನು ಶಮನ ಮಾಡಲಿಕ್ಕಾ? ಸೃಷ್ಟಿ, ಪಾಲನೆ, ಲಯ ಇವು ಆ ತ್ರಿಮೂರ್ತಿಗಳ ಕರ್ತವ್ಯವಂತೆ.ಈ ಮೂವರು ಇವುಗಳಲ್ಲಿ ಯಾವ ಕೆಲಸ ಮಾಡಲಿದ್ದಾರಂತೆ? ಎಂದು ಕಿಚಾಯಿಸಿದ್ದಾರೆ.
ಕೇಂದ್ರದಿಂದ ರಾಜ್ಯಕ್ಕೆ ಎಷ್ಟು ನೆರವು ನೀಡುತ್ತೀರಿ ಎಂದು ಪ್ರಧಾನಿ ಅವರನ್ನು ಕೇಳಬೇಕಿತ್ತಲ್ಲವೇ? ಪಿಎಂ ಕೇರ್ ನಿಧಿಯಿಂದ ರಾಜ್ಯಕ್ಕೆ ಎಷ್ಟು ದುಡ್ಡು ಕಳಿಸಿದ್ದೀರಿ ಎಂದು ಮೋದಿ ಅವರನ್ನು ವಿಚಾರಿಸಬೇಕಿತ್ತಲ್ಲವೇ? ಸುಳ್ಳು ಆಶ್ವಾಸನೆ ನೀಡಿದ್ದರೂ ನೊಂದ ಜನರಿಗೆ ಸ್ವಲ್ಪ ನೆಮ್ಮದಿ ಸಿಗುತ್ತಿತ್ತು ಎಂದು ತಮ್ಮ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಪೊಲೀಸರಲ್ಲಿ ಹೆಚ್ಚುತ್ತಿರುವ ಕೊರೊನಾ: ತಪಾಸಣೆಗೆ ಸಮರ್ಪಕ ವ್ಯವಸ್ಥೆ ಮಾಡದ ಸರಕಾರ, ಐದಾರು ದಿನಗಳ ಬಳಿಕ ವರದಿ
ಕೊರೊನಾ ಉಪಕರಣಗಳ ಖರೀದಿಯಲ್ಲಿ ಸುಮಾರು 2000 ಕೋಟಿಗೂ ಮೀರಿ ಅವ್ಯವಹಾರ ನಡೆದಿದೆ ಎಂದು ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ್ದರು. ಆದರೆ ಸರ್ಕಾರ ಇದನ್ನು ನಿರಾಕರಿಸಿದೆ. ಶ್ರೀರಾಮುಲು ಜೊತೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಕೂಡಾ ಆರೋಪ ನಿರಾಕರಣೆ ಮಾಡಿದ್ದಾರೆ.
ಆದರೆ ತನ್ನ ಆರೋಪವನ್ನು ಸಮರ್ಥನೆ ಮಾಡಿರುವ ಸಿದ್ದರಾಮಯ್ಯ ಶ್ರೀರಾಮುಲು ವಿರುದ್ಧ ಹರಿಹಾಯ್ದಿದ್ದಾರೆ. “ಲೂಟಿ ಹೊಡೆದಿದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದು ಸಚಿವ ಶ್ರೀರಾಮುಲು ಸವಾಲು ಹಾಕಿದ್ದಾರೆ. ರಾಮುಲು ಅವರೇ, ಬಳ್ಳಾರಿಯ ನಿಮ್ಮ ಅಣ್ತಮ್ಮಂದಿರು ಇದೇ ರೀತಿ ಸವಾಲು ಹಾಕಿ ಕೊನೆಗೆ ದಾಖಲೆ ಬಿಡುಗಡೆ ಮಾಡಿದಾಗ ಜೈಲು ಸೇರಿದ್ದರು.ಸವಾಲೆಸೆಯುವಾಗ ಇದು ನಿಮ್ಮ ಗಮನದಲ್ಲಿರಲಿ” ಎಂದು ಟ್ವೀಟ್ ಮಾಡಿದ್ದಾರೆ.
ಬಳ್ಳಾರಿ ಘಟನೆ ಅಮಾನವೀಯ, ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ
ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ತ್ರಿಮೂರ್ತಿ ಸಚಿವರನ್ನು ನೇಮಿಸಿರುವುದು ಸೋಂಕಿತರಿಗೆ ನೆರವಾಗಲಿಕ್ಕಾ? ಇಲ್ಲವೇ, ಭಿನ್ನಾಭಿಪ್ರಾಯವನ್ನು ಶಮನ ಮಾಡಲಿಕ್ಕಾ? ಸೃಷ್ಟಿ, ಪಾಲನೆ, ಲಯ ಇವು ಆ ತ್ರಿಮೂರ್ತಿಗಳ ಕರ್ತವ್ಯವಂತೆ.ಈ ಮೂವರು ಇವುಗಳಲ್ಲಿ ಯಾವ ಕೆಲಸ ಮಾಡಲಿದ್ದಾರಂತೆ? ಎಂದು ಕಿಚಾಯಿಸಿದ್ದಾರೆ.
ಕೇಂದ್ರದಿಂದ ರಾಜ್ಯಕ್ಕೆ ಎಷ್ಟು ನೆರವು ನೀಡುತ್ತೀರಿ ಎಂದು ಪ್ರಧಾನಿ ಅವರನ್ನು ಕೇಳಬೇಕಿತ್ತಲ್ಲವೇ? ಪಿಎಂ ಕೇರ್ ನಿಧಿಯಿಂದ ರಾಜ್ಯಕ್ಕೆ ಎಷ್ಟು ದುಡ್ಡು ಕಳಿಸಿದ್ದೀರಿ ಎಂದು ಮೋದಿ ಅವರನ್ನು ವಿಚಾರಿಸಬೇಕಿತ್ತಲ್ಲವೇ? ಸುಳ್ಳು ಆಶ್ವಾಸನೆ ನೀಡಿದ್ದರೂ ನೊಂದ ಜನರಿಗೆ ಸ್ವಲ್ಪ ನೆಮ್ಮದಿ ಸಿಗುತ್ತಿತ್ತು ಎಂದು ತಮ್ಮ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.