ಆ್ಯಪ್ನಗರ

ಅಧಿಕಾರಿಗೆ ಬೆದರಿಕೆ ಆರೋಪ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯ ಆಗ್ರಹ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಬೆದರಿಕೆ ಹಾಕಿರುವ ಶಾಸಕ ದತ್ತಾತ್ರೇಯ ಪಾಟೀಲ ರೇವೂರು ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Vijaya Karnataka Web 29 May 2020, 3:56 pm
ಬೆಂಗಳೂರು: ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪವನ್ನು ಎದುರಿಸುತ್ತಿರುವ ಕಲಬುರ್ಗಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರು ವಿರುದ್ಧ ಕಾನೂನು ಕ್ರಮಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ರೀತಿಯ ವರ್ತನೆ ಗೂಂಡಾ ಪ್ರವೃತ್ತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web siddaramayha


ಕಲಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ರೇವೂರು ಲಂಚದ ಬೇಡಿಕೆ ಹಾಗೂ ಬೆದರಿಕೆ ಹಾಕಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರಮೇಶ ಸಂಗಾ ಎಂಬುವವರು ಆರೋಪ ಮಾಡಿದ್ದರು. ಆಪ್ತ ಸಹಾಯಕನ ಮೂಲಕ ಪದೇ ಪದೇ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿದ್ದರು.


ರಾಯಚೂರಿನಲ್ಲಿ ಕೊರೊನಾ 'ಮಹಾ' ಸ್ಫೋಟ..! ಒಂದೇ ದಿನ 62 ಪಾಸಿಟಿವ್‌ ಕೇಸ್‌ ಪತ್ತೆ

ಹಣ ನೀಡದೇ ಇದ್ದಿದ್ದಕ್ಕೆ ವರ್ಗಾವಣೆ ಮಾಡಿಸಲು ಸಚಿವರಿಗೆ ಪತ್ರವನ್ನು ಬರೆದಿದ್ದಾರೆ ಎಂದು ಶಾಸಕರ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಶಾಸಕರ ವರ್ತನೆಯ ವಿರುದ್ಧ ದೂರು ನೀಡಿದರೆ ಪೊಲೀಸರು ದಾಖಲು ಮಾಡಿಲ್ಲ. ಕೂಡಲೇ ದೂರನ್ನು ದಾಖಲಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.


ಈ ರೀತಿಯಲ್ಲಿ ಶಾಸಕರು ವರ್ತಿಸಿದರೆ ಅಧಿಕಾರಿಗಳು ಕೆಲಸ ಮಾಡುವುದು ಕಷ್ಟ. ಕೂಡಲೇ ರಮೇಶ್ ಸಂಗಾ ಕೊಟ್ಟ ದೂರನ್ನು ಸ್ವೀಕರಿಸಿ ತನಿಖೆ ನಡೆಸಬೇಕು. ಹಾಗೂ ಅಧಿಕಾರಿಯ ಮನೆಗೆ ಹೋಗಿ ಬೆದರಿಕೆ ಹಾಕಿರುವ ಕಾರ್ಪೊರೇಟರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ