ಆ್ಯಪ್ನಗರ

ಆರ್ಥಿಕ ಸಂಕಷ್ಟದ ನಡುವೆಯೂ ನಿಗಮ-ಮಂಡಳಿ ನೇಮಕ, ಕುರ್ಚಿ ಉಳಿಸಿಕೊಳ್ಳುವ ಕಸರತ್ತು ಎಂದ ಸಿದ್ದರಾಮಯ್ಯ

ರಾಜ್ಯದಲ್ಲಿ ಆರ್ಥಿಕ ಸಂಕಷ್ಟ ಇದೆ, ಇಂತಹ ಸಂದರ್ಭದಲ್ಲೂ ನಿಗಮ-ಮಂಡಳಿ ನೇಮಕಾತಿ ನಡೆಸುವ ಮೂಲಕ ಸಿಎಂ ಬಿಎಸ್‌ ಯಡಿಯೂರಪ್ಪ ತಮ್ಮ ಕುರ್ಚಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Vijaya Karnataka Web 25 Nov 2020, 1:38 pm
ಬೆಂಗಳೂರು: ಆರ್ಥಿಕ ಸಂಕಷ್ಟದ ನಡುವೆಯೂ ನಿಗಮ -ಮಂಡಳಿ ನೇಮಕಾತಿ ಮಾಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರು ತಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತನ್ನು ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
Vijaya Karnataka Web siddaramaiah


ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಆರ್ಥಿಕವಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ. ಇಂತಹ ಸಂದರ್ಭದಲ್ಲಿ ಅನಗತ್ಯ ವೆಚ್ಚಗಳನ್ನು ಕಡಿಮೆ ಮಾಡಬೇಕು ಎಂದು ಸಲಹೆ ನೀಡಿದ್ದೆ. ಬದಲಾಗಿ ರಾಜ್ಯದ ಅಭಿವೃದ್ದಿಗೆ ಹೆಚ್ಚು ಹಣ ವ್ಯಯಿಸಬೇಕು ಎಂದು ಸಲಹೆ ಕೊಟ್ಟಿದ್ದೆ.

ಸಂಪುಟ ಸರ್ಕಸ್: ಕುತೂಹಲ ಕೆರಳಿಸಿದ ರಮೇಶ್ ಜಾರಕಿಹೊಳಿ ಹಾಗೂ ಶ್ರೀರಾಮುಲು ಭೇಟಿ

ಹಣಕಾಸಿನ ಕೊರತೆಯಿಂದ ವೃದ್ದಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನವನ್ನು ಸರ್ಕಾರ ಬಿಡುಗಡೆ ಮಾಡುತ್ತಿಲ್ಲ. ಹೀಗಿದ್ದರೂ 20 ನಿಗಮ ಮಂಡಳಿಗೆ ನೇಮಕ ಏಕೆ ಮಾಡಬೇಕು ಎಂದು ಅವರು ಪ್ರಶ್ನಿಸಿದ್ದಾರೆ. ಸಿಎಂ ಬಿಎಸ್‌ವೈ ತಮ್ಮ ಕುರ್ಚಿ ಉಳಿಸಿಕೊಳ್ಳುವ ಕಾರಣಕ್ಕಾಗಿ ತರಾತುರಿಯಲ್ಲಿ ನಿಗಮ ಮಂಡಳಿಗೆ ಅನುದಾನ ಹಾಗೂ ನೇಮಕಾತಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನು ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ಶುಲ್ಕ ಕಟ್ಟಿಲ್ಲ ಎಂಬ ನೆಪದಲ್ಲಿ ಆನ್‌ಲೈನ್ ಶಿಕ್ಷಣ ನಿಲ್ಲುಸುತ್ತೇವೆ ಎಂದು ಬೆದರಿಕೆ ಒಡ್ಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಇದು ಮೂರ್ಖತನದ ನಿರ್ಧಾರ, ಸರ್ಕಾರ ಖಾಸಗಿ ವಿದ್ಯಾಸಂಸ್ಥೆಗಳ ಜೊತೆಗೆ ಶಾಮೀಲಾಗಿದೆ ಎಂದು ಕಿಡಿಕಾರಿದರು. ರಾಜ್ಯದಲ್ಲಿ ಸರ್ಕಾರ ಇಲ್ಲ, ಲೂಟಿ ಬಿಟ್ಟು ಬೇರೇನು ನಡೆಯುತ್ತಿಲ್ಲ, ಬಿಎಸ್‌ವೈ ಸರ್ಕಾರ ಲೂಟಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ