ಆ್ಯಪ್ನಗರ

ಡ್ರಗ್ಸ್ ಮಾಫಿಯಾ: ನ್ಯಾಯಾಂಗ ತನಿಖೆ ನಡೆಸುವಂತೆ ಸಿದ್ದರಾಮಯ್ಯ ಆಗ್ರಹ

ಡ್ರಗ್ಸ್ ಮಾಫಿಯಾದ ಕುರಿತಾಗಿ ನ್ಯಾಯಾಂಗ ತನಿಖೆ ನಡೆಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ವಿಚಾರವಾಗಿ ಏನು ಹೇಳಿದ್ದಾರೆ ಎಂಬ ವಿವರ ಇಲ್ಲಿದೆ.

Vijaya Karnataka Web 17 Sep 2020, 3:11 pm
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಪೊಲೀಸರ ಮೇಲೆ ಸರ್ಕಾರದ ಒತ್ತಡನೂ ಇರಬಹುದು, ಇಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದರು.
Vijaya Karnataka Web siddaramaiah


ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳ ಬಂಧನ ಆಗಿಲ್ಲ. ಈ ಕುರಿತಾಗಿ ಪೊಲೀಸರಲ್ಲಿ ವಿಚಾರಿಸಿದ್ದೇನೆ. ಕೆಲವರನ್ನು ಆರೆಸ್ಟ್ ಮಾಡಿಲ್ಲ ಯಾಕೆ ಎಂದು ಕೇಳಿದೆ. ಅವರು ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಿದರು. ಇದನ್ನೆಲ್ಲಾ ಗಮನಿಸಿದರೆ ಪೊಲೀಸರ ಮೇಲೆ ಸರ್ಕಾರ ಒತ್ತಡನೂ ಇರಬಹುದು. ಇಲ್ಲ ಎಂದು ಹೇಳುವುದಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರು.

ದೇವರ ಪ್ರಸಾದ ಹೆಸರಿನಲ್ಲಿ ಬಸ್‌ ಚಾಲಕರಿಗೆ ಕವರ್‌ ಕೊಟ್ಟು ಬ್ರೌನ್‌ ಶುಗರ್‌ ಮಾರುತ್ತಿದ್ದವ ಅಂದರ್‌

ಪ್ರಕರಣದಲ್ಲಿ ಪೊಲೀಸರ ವಿಫಲತೆ ಅನ್ನುವುದಕ್ಕಿಂತ ಪೊಲೀಸರು ಸರ್ಕಾರದ ಕೈಗೊಂಬೆ ತರ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಪೊಲೀಸರಲ್ಲಿ ನಂಬಿಕೆ ಇಲ್ಲ,. ಸರ್ಕಾರದ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಪ್ರಕರಣದ ಸತ್ಯಾಸತ್ಯತೆ ಹೊರಬರುವ ನಿಟ್ಟಿನಲ್ಲಿ ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ರಾಜ್ಯದಲ್ಲಿ ಇಬ್ಬರು ಸಿಎಂ!

ಸರ್ಕಾರಿ ವೈದ್ಯಾಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಸಭೆಯ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿವೈ ವಿಜಯೇಂದ್ರ ವೈದ್ಯಾಧಿಕಾರಿಗಳ ಜೊತೆಗೆ ಹೇಗೆ ಸಭೆ ನಡೆಸುತ್ತಾರೆ. ಬಿಜೆಪಿನ ಪಕ್ಷದಲ್ಲಿ ಬೇರೆ ಉಪಾಧ್ಯಕ್ಷರು ಇಲ್ವಾ? ಅವರಿಗೆ ಸಭೆ ನಡೆಸುವ ಅಧಿಕಾರ ಇದ್ಯಾ ಎಂದು ಪ್ರಶ್ನಿಸಿದರು. ಆಯಾ ಇಲಾಖೆಗೆ ಸೇರಿದ ಸಚಿವರು ಸಭೆ ನಡೆಸಲು ನಮ್ಮ ಕೈಯಲ್ಲಿ ಸಾಧ್ಯವಿಲ್ಲ ನೀವೇ ಮಾಡಿ ಎಂದು ಹೇಳಿದ್ದಾರಾ ಎಂದು ಖಡಕ್ ಆಗಿ ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ