ಆ್ಯಪ್ನಗರ

ವಿಶ್ವನಾಥ್ ಪ್ರಕಾರ ಬಿಜೆಪಿಗೂ ನಾನೇ ಹೈ ಕಮಾಂಡಾ? ಹಳ್ಳಿಹಕ್ಕಿಗೆ ಸಿದ್ದು ಗುದ್ದು!

ವಿಧಾನಪರಿಷತ್ ಚುನಾವಣೆಯಲ್ಲಿ ಹೆಚ್‌ ವಿಶ್ವನಾಥ್‌ಗೆ ಟಿಕೆಟ್‌ ಕೈತಪ್ಪಲು ಸಿದ್ದರಾಮಯ್ಯ ಕಾರಣ ಎಂಬ ಅವರ ಹೇಳಿಕೆಗೆ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ಈ ಕುರಿತಾಗಿ ಅವರು ಏನಂದರು ಇಲ್ಲಿದೆ ಮಾಹಿತಿ.

Vijaya Karnataka Web 18 Jun 2020, 12:55 pm
ಬೆಂಗಳೂರು: ಹೆಚ್‌.ವಿಶ್ವನಾಥ್ ಪ್ರಕಾರ ಬಿಜೆಪಿಗೆ ನಾನೇ ಹೈಕಮಾಂಡಾ? ಹೀಗಂತ ಪ್ರಶ್ನಿಸಿದವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ತಪ್ಪಲು ಸಿದ್ದರಾಮಯ್ಯ ಅವರು ಕಾರಣ ಎಂಬ ವಿಶ್ವನಾಥ್ ಹೇಳಿಕೆಗೆ ತಿರುಗೇಟು ನೀಡಿದ ಪರಿ ಇದು.
Vijaya Karnataka Web siddaramyya


ಬಿಜೆಪಿಯಲ್ಲಿ ಮೇಲ್ಮನೆ ಟಿಕೆಟ್ ಆಕಾಂಕ್ಷಿಯಾಗಿದ್ದ ಹೆಚ್‌. ವಿಶ್ವನಾಥ್ ಅವರಿಗೆ ಟಿಕೆಟ್‌ ಸಿಕ್ಕಿಲ್ಲ. ಇದರಿಂದ ಅವರು ಅಸಮಾಧಾನಗೊಂಡಿದ್ದಾರೆ. ಟಿಕೆಟ್‌ ಕೈತಪ್ಪಲು ಸಿದ್ದರಾಮಯ್ಯ ಕಾರಣ ಎಂಬ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಗೆ ಸಿದ್ದರಾಮಯ್ಯ ಈ ರೀತಿಯಾಗಿ ಟಾಂಗ್‌ ಕೊಟ್ರು.

ಮೇಲ್ಮನೆ ಎಲೆಕ್ಷನ್‌ಗೆ ಎಂಟಿಬಿ, ಶಂಕರ್ ಸೇರಿ ನಾಲ್ವರಿಗೆ ಬಿಜೆಪಿ ಟಿಕೆಟ್: ವಿಶ್ವನಾಥ್‌ಗೆ ಶಾಕ್..!

ಇನ್ನು ಮೇಲ್ಮನೆ ಅಭ್ಯರ್ಥಿಗಳಿಗೆ ಕೆಪಿಸಿಸಿ ಕಚೇರಿಯಲ್ಲಿ ಬಿ-ಫಾರಂ ನೀಡಿದ ಬಳಿಕ ಮಾತನಾಡಿದ ಅವರು, ವಿಧಾನ ಪರಿಷತ್ ಅಭ್ಯರ್ಥಿ ಸ್ಥಾನಕ್ಕಾಗಿ ಸುಮಾರು 270 ಅರ್ಜಿಗಳು ಬಂದಿದ್ದವು. ಎಲ್ಲಾ ಅರ್ಜಿಗಳನ್ನು ಪರಿಶೀಲನೆ ನಡೆಸಿ ಹೈ ಕಮಾಂಡ್‌ಗೆ ಕಳುಹಿಸಿದ್ದೆವು. ಅಂತಿಮವಾಗಿ ಹೈ ಕಮಾಂಡ್ ಇಬ್ಬರನ್ನು ಆಯ್ಕೆಮಾಡಿದೆ ಎಂದರು.

ಹರಿಪ್ರಸಾದ್‌ ಆಯ್ಕೆಯ ಬಗ್ಗೆ ಭಿನ್ನಾಭಿಪ್ರಾಯದ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು ನಝೀರ್ ಅಹಮ್ಮದ್ ಹಾಗೂ ಬಿ.ಕೆ ಹರಿಪ್ರಸಾದ್ ಇಬ್ಬರು ಒಮ್ಮತದ ಅಭ್ಯರ್ಥಿ. ಪರಿಷತ್ ಹಿರಿಯರ ಮನೆಯಾಗಿರುವುದರಿಂದ ಈ ಆಯ್ಕೆ ಸಮರ್ಥನೀಯ ಎಂದರು.

ಇನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು. ಈ ಕುರಿತಾಗಿ ಸಿಎಲ್‌ಪಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ